ಯುಪಿಯಲ್ಲಿ ಹೋಳಿ, ದೀಪಾವಳಿಗೆ ಸರ್ಕಾರದಿಂದಲೇ ಉಚಿತ ಸಿಲಿಂಡರ್!
ಲಕ್ನೋ, ಫೆಬ್ರವರಿ 19: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಹೋಳಿ ಮತ್ತು ದೀಪಾವಳಿ ಹಬ್ಬದ ದಿನ ಉಚಿತವಾಗಿ ಗ್ಯಾಸ್ ಸಿಲಿಂಡರ್ ಅನ್ನು ನೀಡುವುದಾಗಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.
ಉತ್ತರ ಪ್ರದೇಶ ಗೊಂಡಾದ ಕರ್ನಲ್ ಗಂಜ್ ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಚಾರ ನಡೆಸಿದರು. ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯು ಅತಿಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ ಮೊದಲ ಎರಡು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯು ಕಳೆದ ಬಾರಿಯಷ್ಟೇ ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ಚುನಾವಣಾ ವಿಶ್ಲೇಷಕರು ಹೇಳಿವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ನರೇಂದ್ರ ಮೋದಿಯವರು ಭಾರತದ ಪ್ರಧಾನಮಂತ್ರಿಯಾದ ನಂತರದಲ್ಲಿ ಚೀನಾ ಮತ್ತು ಪಾಕಿಸ್ತಾನದ ನಡುವೆ ಪರಸ್ಪರ ಸ್ನೇಹ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸುತ್ತಿದ್ದಾರೆ. ದೇಶದ ಪ್ರಾಚೀನ ಇತಿಹಾಸವನ್ನು ಅಧ್ಯಯನ ಮಾಡದ ಅವರು, ಕನಿಷ್ಠ ಆಧುನಿಕ ಇತಿಹಾಸವನ್ನಾದರೂ ತಿಳಿದುಕೊಂಡಿರಬೇಕು ಎಂದು ರಾಜನಾಥ್ ಸಿಂಗ್ ಕಿಡಿ ಕಾರಿದ್ದಾರೆ.

ಇತಿಹಾಸದ ಬಗ್ಗೆ ಉಲ್ಲೇಖಿಸಿದ ರಾಜನಾಥ್ ಸಿಂಗ್:
"ಜವಾಹರಲಾಲ್ ನೆಹರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡ ಶಾಕ್ಸ್ಗಾಮ್ ಕಣಿವೆಯನ್ನು ಚೀನಾಕ್ಕೆ ಹಸ್ತಾಂತರಿಸಲಾಗಿತ್ತು. ಪಾಕಿಸ್ತಾನ್ ಆಕ್ರಮಿತ ಕಾಶ್ಮೀರದಲ್ಲಿ ಕಾರಕೋರಂ ಹೆದ್ದಾರಿ ನಿರ್ಮಾಣವಾದಾಗ ಇಂದಿರಾ ಗಾಂಧಿ ಪ್ರಧಾನಮಂತ್ರಿ ಆಗಿದ್ದರು. ಸಿಪಿಇಸಿ ನಿರ್ಮಾಣ ಪ್ರಾರಂಭವಾದಾಗ ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದರೇ ವಿನಃ ಮೋದಿ ಜಿ ಅಲ್ಲ," ಎಂದು ರಾಜನಾಥ್ ಸಿಂಗ್ ಹೇಳಿದರು.
ಯುಪಿಯಲ್ಲಿ ಹೋಳಿ ಹಬ್ಬದ ದಿನವೇ ಉಚಿತ ಸಿಲಿಂಡರ್:
ಉತ್ತರ ಪ್ರದೇಶದ ಔರೈಯಾದಲ್ಲಿ ಮಾತನಾಡಿದ ಅಮಿತ್ ಶಾ, ರೈತರಿಗೆ ಉಚಿತ ವಿದ್ಯುತ್ ಸರಬರಾಜು ಸೇರಿದಂತೆ ಹಲವು ಭರವಸೆಗಳನ್ನು ಘೋಷಿಸಿದರು. ಮಾರ್ಚ್ 10ರಂದು ಮತ ಎಣಿಕೆಯಿದೆ, 10ರಂದು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ, ಮಾರ್ಚ್ 18ರ ಹೋಳಿ ಹಬ್ಬದ ದಿನ ಉಚಿತ ಗ್ಯಾಸ್ ಸಿಲಿಂಡರ್ ನಿಮ್ಮ ಮನೆಗೆ ತಲುಪುತ್ತದೆ. ಮುಂದಿನ 5 ವರ್ಷಗಳವರೆಗೆ ಯಾವುದೇ ರೈತರು ವಿದ್ಯುತ್ ಬಿಲ್ ಪಾವತಿಸಬೇಕಾಗಿಲ್ಲ ಎಂದು ಶಾ ಹೇಳಿದರು.
ಬಿಜೆಪಿ ತನ್ನ ಯುಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಪ್ರತಿಬಿಂಬಿಸುತ್ತದೆ. ರೈತರಿಗೆ ಉಚಿತ ವಿದ್ಯುತ್, ಗೋಧಿ ಮತ್ತು ಅಕ್ಕಿಗೆ ಕನಿಷ್ಠ ಬೆಂಬಲ ಬೆಲೆ, ಕಬ್ಬಿನ ಗಿರಣಿ ಆಧುನೀಕರಣದಂತಹ ಯೋಜನೆಗಳನ್ನು ಪಕ್ಷವು ಭರವಸೆ ನೀಡಿದೆ. ಅಖಿಲೇಶ್ ವಿರುದ್ಧ ವಾಗ್ದಾಳಿ ನಡೆಸಿದ ಶಾ, ರಾಜ್ಯದಲ್ಲಿ ಬಿಜೆಪಿ ಹೆಣ್ಣು ಮಕ್ಕಳಿಗೆ ಸ್ಕೂಟಿ ನೀಡಿದರೆ ಇಂಧನ ನೀಡುವುದಾಗಿ ಎಸ್ಪಿ ಅಧ್ಯಕ್ಷರು ಹೇಳಿದ್ದಾರೆ. ಆದರೆ ಎಸ್ಪಿ ಅಧಿಕಾರಕ್ಕೆ ಬಂದರೆ ಸ್ಕೂಟಿ ಅಥವಾ ಇಂಧನ ಇರುವುದಿಲ್ಲ ಎಂದು ತಿರುಗೇಟು ನೀಡಿದರು.
ಪ್ರತಿ ತಿಂಗಳು, 1 ಕೆಜಿ ತುಪ್ಪ, ಉಚಿತ ಪಡಿತರ, ಸಿಲಿಂಡರ್ ವಿತರಣೆ:
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು ಬಡವರಿಗೆ ಒಂದು ಕೆಜಿ ತುಪ್ಪ ಹಾಗೂ ಉಚಿತ ಪಡಿತರವನ್ನು ನೀಡುವುದಾಗಿ ಸಮಾಜವಾದಿಲ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡಾ ಆಶ್ವಾಸನೆ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅಮಿತ್ ಶಾ ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಹೇಳಿದ್ದಾರೆ. ರಾಯ್ ಬರೇಲಿಯಲ್ಲಿ ಮಾತನಾಡಿದ ಅಖಿಲೇಶ್ ಯಾದವ್, "ರಾಜ್ಯದಲ್ಲಿ ಚುನಾವಣೆವರೆಗೂ ಮಾತ್ರ ಬಡವರು ಉಚಿತವಾಗಿ ಪಡಿತರ ಪಡೆಯುತ್ತಾರೆ, ತದನಂತರ ಪಡಿತರ ಸಿಗುವುದಿಲ್ಲ. ಈ ಮೊದಲು ನವೆಂಬರ್ ತಿಂಗಳವರೆಗೂ ಪಡಿತರವನ್ನು ನೀಡುವುದಕ್ಕೆ ನಿರ್ಧರಿಸಲಾಗಿತ್ತು. ಆದರೆ ಯುಪಿ ಚುನಾವಣೆ ಘೋಷಣೆಯಾದ ಹಿನ್ನೆಲೆ ಅದನ್ನು ಮಾರ್ಚ್ ತಿಂಗಳವರೆಗೂ ವಿಸ್ತರಣೆ ಮಾಡಲಾಯಿತು," ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications