ದಲಿತ ಯುವಕನನ್ನು ಮದುವೆಯಾದ ಬಿಜೆಪಿ ಶಾಸಕನ ಪುತ್ರಿ: ಭದ್ರತೆಗೆ ಮನವಿ
ಲಖನೌ, ಜುಲೈ 11: ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ನಮ್ಮ ತಂದೆಯಿಂದ ನಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಉತ್ತರ ಪ್ರದೇಶದ ಬಿಜೆಪಿ ಶಾಸಕನ ಮಗಳೊಬ್ಬಳು ಪೊಲೀಸರ ರಕ್ಷಣೆ ಕೋರಿದ್ದಾಳೆ.
ಬರೇಲಿ ಜಿಲ್ಲೆಯ ಬಿಥಾರಿ ಚೈನ್ಪುರ್ ಕ್ಷೇತ್ರದ ಬಿಜೆಪಿ ಶಾಸಕನ ಮಗಳಾಗಿರುವ ಸಾಕ್ಷಿ ಮಿಶ್ರಾ (23) ಸಾಮಾಜಿಕ ಜಾಲತಾಣದಲ್ಲಿ ಬುಧವಾರ ವಿಡಿಯೋವೊಂದನ್ನು ಅಪ್ಲೋಡ್ ಮಾಡಿ ಕಳೆದ ಗುರುವಾರ ಅಜಿತ್ ಕುಮಾರ್ (29) ಎಂಬ ದಲಿತ ಯುವಕನನ್ನು ಮದುವೆಯಾಗಿರುವುದಾಗಿ ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಮತ್ತೊಂದು ವಿಡಿಯೋವನ್ನು ಅಪ್ಲೋಡ್ ಮಾಡಿರುವ ಯುವತಿ ಅದರಲ್ಲಿ ನಮ್ಮನ್ನು ಬಂಧಿಸುವುದಾಗಿ ಹಾಗೂ ಕೊಲ್ಲುವುದಾಗಿ ತಂದೆ, ಸಹೋದರ ಹಾಗೂ ಅವರ ಸಹವರ್ತಿಗಳು ಬೆದರಿಕೆ ಹಾಕುತ್ತಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ಬರೇಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದಾಳೆ. ಅಲ್ಲದೆ, ತಮಗೆ ನೆರವಾಗುವಂತೆ ಬರೇಲಿಯ ಸಂಸದರು ಹಾಗೂ ಶಾಸಕರಲ್ಲಿ ಸಾಕ್ಷಿ ಮನವಿ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಮಾತನಾಡಿರುವ ಡಿಐಜಿ ಆರ್.ಕೆ. ಪಾಂಡೆ, ಯುವತಿಯು ರಕ್ಷಣೆ ಕೋರಿರುವ ವಿಡಿಯೋ ನೋಡಿದ್ದೇನೆ. ದಂಪತಿಗೆ ರಕ್ಷಣೆ ನೀಡುವಂತೆ ಎಸ್ಎಸ್ಪಿಗೆ ಸೂಚಿಸಿದ್ದೇನೆ. ಆದರೆ, ಯುವತಿ ತಾನಿರುವ ಸ್ಥಳದ ಬಗ್ಗೆ ಮಾಹಿತಿ ಬಹಿರಂಗಪಡಿಸಿಲ್ಲ. ಹಾಗಾಗಿ, ಅವರಿಗೆ ಪೊಲೀಸರು ಹೇಗೆ ರಕ್ಷಣೆ ನೀಡುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
BJP MLA from Bareilly, Rajesh Kumar Mishra alias Pappu Bhartaul's daughter has married a man of her choice. The BJP MLA is now after their life, has sent goons. His daughter has released this video requesting help! @Uppolice
— Gaurav Pandhi गौरव पांधी (@GauravPandhi) July 10, 2019
Source: @saurabh3vedi
pic.twitter.com/MLa9Sr13aA
ನಮ್ಮನ್ನು ನಮ್ಮ ಪಾಡಿಗೆ ಬದುಕಲು ಬಿಡಿ ಎಂದು ವಿಡಿಯೋ ಮೂಲಕ ತಂದೆಯ ಬಳಿ ಕೇಳಿಕೊಂಡಿರುವ ಯುವತಿ, ಒಂದು ವೇಳೆ ನನಗಾಗಲಿ ಅಥವಾ ನನ್ನ ಗಂಡನಿಗಾಗಲಿ ಏನಾದರೂ ಆದರೆ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದ್ದಾಳೆ.
Another video of the couple requesting help. pic.twitter.com/S9Uc63Zqc4
— Saurabh Trivedi (@saurabh3vedi) July 10, 2019
ಮಗಳ ವಿಡಿಯೋ ಮತ್ತು ಮದುವೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಜಿ ಶಾಸಕ ರಾಜೇಶ್ ಮಿಶ್ರಾ, ನನ್ನ ಮಗಳು ಅಪ್ರಾಪ್ತಳಲ್ಲ, ಆಕೆಗೆ ಸರಿ ಎನಿಸಿರುವ ನಿರ್ಧಾರವನ್ನು ಆಕೆ ತೆಗೆದುಕೊಂಡಿದ್ದಾಳೆ. ಆಕೆಗೆ ನಾನಾಗಲಿ, ನನ್ನ ಕುಟುಂಬದವರಾಗಲಿ ಯಾವುದೇ ಬೆದರಿಕೆ ಒಡ್ಡಿಲ್ಲ ಎಂದು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications