ದಲಿತ ಯುವಕನನ್ನು ಮದುವೆಯಾದ ಬಿಜೆಪಿ ಶಾಸಕನ ಪುತ್ರಿ: ಭದ್ರತೆಗೆ ಮನವಿ
ಲಖನೌ, ಜುಲೈ 11: ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ನಮ್ಮ ತಂದೆಯಿಂದ ನಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಉತ್ತರ ಪ್ರದೇಶದ ಬಿಜೆಪಿ ಶಾಸಕನ ಮಗಳೊಬ್ಬಳು ಪೊಲೀಸರ ರಕ್ಷಣೆ ಕೋರಿದ್ದಾಳೆ.
ಬರೇಲಿ ಜಿಲ್ಲೆಯ ಬಿಥಾರಿ ಚೈನ್ಪುರ್ ಕ್ಷೇತ್ರದ ಬಿಜೆಪಿ ಶಾಸಕನ ಮಗಳಾಗಿರುವ ಸಾಕ್ಷಿ ಮಿಶ್ರಾ (23) ಸಾಮಾಜಿಕ ಜಾಲತಾಣದಲ್ಲಿ ಬುಧವಾರ ವಿಡಿಯೋವೊಂದನ್ನು ಅಪ್ಲೋಡ್ ಮಾಡಿ ಕಳೆದ ಗುರುವಾರ ಅಜಿತ್ ಕುಮಾರ್ (29) ಎಂಬ ದಲಿತ ಯುವಕನನ್ನು ಮದುವೆಯಾಗಿರುವುದಾಗಿ ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಮತ್ತೊಂದು ವಿಡಿಯೋವನ್ನು ಅಪ್ಲೋಡ್ ಮಾಡಿರುವ ಯುವತಿ ಅದರಲ್ಲಿ ನಮ್ಮನ್ನು ಬಂಧಿಸುವುದಾಗಿ ಹಾಗೂ ಕೊಲ್ಲುವುದಾಗಿ ತಂದೆ, ಸಹೋದರ ಹಾಗೂ ಅವರ ಸಹವರ್ತಿಗಳು ಬೆದರಿಕೆ ಹಾಕುತ್ತಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ಬರೇಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದಾಳೆ. ಅಲ್ಲದೆ, ತಮಗೆ ನೆರವಾಗುವಂತೆ ಬರೇಲಿಯ ಸಂಸದರು ಹಾಗೂ ಶಾಸಕರಲ್ಲಿ ಸಾಕ್ಷಿ ಮನವಿ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಮಾತನಾಡಿರುವ ಡಿಐಜಿ ಆರ್.ಕೆ. ಪಾಂಡೆ, ಯುವತಿಯು ರಕ್ಷಣೆ ಕೋರಿರುವ ವಿಡಿಯೋ ನೋಡಿದ್ದೇನೆ. ದಂಪತಿಗೆ ರಕ್ಷಣೆ ನೀಡುವಂತೆ ಎಸ್ಎಸ್ಪಿಗೆ ಸೂಚಿಸಿದ್ದೇನೆ. ಆದರೆ, ಯುವತಿ ತಾನಿರುವ ಸ್ಥಳದ ಬಗ್ಗೆ ಮಾಹಿತಿ ಬಹಿರಂಗಪಡಿಸಿಲ್ಲ. ಹಾಗಾಗಿ, ಅವರಿಗೆ ಪೊಲೀಸರು ಹೇಗೆ ರಕ್ಷಣೆ ನೀಡುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
BJP MLA from Bareilly, Rajesh Kumar Mishra alias Pappu Bhartaul's daughter has married a man of her choice. The BJP MLA is now after their life, has sent goons. His daughter has released this video requesting help! @Uppolice
— Gaurav Pandhi गौरव पांधी (@GauravPandhi) July 10, 2019
Source: @saurabh3vedi
pic.twitter.com/MLa9Sr13aA
ನಮ್ಮನ್ನು ನಮ್ಮ ಪಾಡಿಗೆ ಬದುಕಲು ಬಿಡಿ ಎಂದು ವಿಡಿಯೋ ಮೂಲಕ ತಂದೆಯ ಬಳಿ ಕೇಳಿಕೊಂಡಿರುವ ಯುವತಿ, ಒಂದು ವೇಳೆ ನನಗಾಗಲಿ ಅಥವಾ ನನ್ನ ಗಂಡನಿಗಾಗಲಿ ಏನಾದರೂ ಆದರೆ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದ್ದಾಳೆ.
Another video of the couple requesting help. pic.twitter.com/S9Uc63Zqc4
— Saurabh Trivedi (@saurabh3vedi) July 10, 2019
ಮಗಳ ವಿಡಿಯೋ ಮತ್ತು ಮದುವೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಜಿ ಶಾಸಕ ರಾಜೇಶ್ ಮಿಶ್ರಾ, ನನ್ನ ಮಗಳು ಅಪ್ರಾಪ್ತಳಲ್ಲ, ಆಕೆಗೆ ಸರಿ ಎನಿಸಿರುವ ನಿರ್ಧಾರವನ್ನು ಆಕೆ ತೆಗೆದುಕೊಂಡಿದ್ದಾಳೆ. ಆಕೆಗೆ ನಾನಾಗಲಿ, ನನ್ನ ಕುಟುಂಬದವರಾಗಲಿ ಯಾವುದೇ ಬೆದರಿಕೆ ಒಡ್ಡಿಲ್ಲ ಎಂದು ಹೇಳಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications