Video: ಉತ್ತರ ಪ್ರದೇಶದಲ್ಲಿ ಶಾಸಕರು ತೆಂಗಿನಕಾಯಿ ಒಡೆದರೆ ಹೊಸ ರಸ್ತೆಯೇ ಬಿರುಕು!
ಲಕ್ನೋ, ಡಿಸೆಂಬರ್ 4: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆ ಭಾರತೀಯ ಜನತಾ ಪಕ್ಷ ತೀವ್ರ ಮುಜುಗರಕ್ಕೆ ಒಳಗಾಗುವಂತಾ ಘಟನೆಯೊಂದು ಬಿಜ್ನೋರ್ ನಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸುದ್ದಿ ಆಗುತ್ತಿದೆ.
ರಾಜ್ಯದಲ್ಲಿ ಬರೋಬ್ಬರಿ 1.16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಡಾಂಬರ್ ರಸ್ತೆಯು ಕೇವಲ ಒಂದು ತೆಂಗಿನಕಾಯಿ ಪೆಟ್ಟಿಗೆ ಬಿರುಕು ಬಿಟ್ಟಿದೆ. ಬಿಜ್ನೋರ್ ಜಿಲ್ಲೆಯಲ್ಲಿ ಬರೋಬ್ಬರಿ 1.16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ 7.5 ಕಿಲೋ ಮೀಟರ್ ಉದ್ದದ ರಸ್ತೆಯನ್ನು ಉದ್ಘಾಟಿಸಲು ಬಿಜ್ನೋರ್ ಸದರ್ ವಿಧಾನಸಭೆ ಕ್ಷೇತ್ರದ ಶಾಸಕಿ ಸುಚಿ ಮೌಸಮ್ ಚೌಧರಿರನ್ನು ಆಹ್ವಾನಿಸಲಾಗಿತ್ತು.
ಹೊಸ ರಸ್ತೆ ಉದ್ಘಾಟಿಸಲೆಂದು ಶಾಸಕಿಯು ರಸ್ತೆಯ ಮೇಲೆ ತೆಂಗಿನಕಾಯಿ ಒಡೆದರು. ಆದರೆ ತೆಂಗಿನಕಾಯಿ ಒಡೆಯುವುದರ ಬದಲಿಗೆ ಹೊಸ ರಸ್ತೆಯೇ ಬಿರುಕು ಬಿಟ್ಟಿರುವುದು ಸ್ವತಃ ಶಾಸಕರೇ ತೀವ್ರ ಮುಜುಗರಕ್ಕೆ ಈಡಾಗುವಂತೆ ಮಾಡಿತು.

ಮೂರು ಗಂಟೆ ಸ್ಥಳದಲ್ಲೇ ಕುಳಿತ ಶಾಸಕಿ:
ಹೊಸ ರಸ್ತೆ ಉದ್ಘಾಟನೆ ದಿನವೇ ರಸ್ತೆ ಬಿರುಕು ಬಿಟ್ಟ ಘಟನೆಯಿಂದ ಕುಪಿತಗೊಂಡ ಶಾಸಕಿ ಸುಚಿ ಮೌಸಮ್ ಚೌಧರಿಯವರು ಮೂರು ಗಂಟೆಗಳ ಕಾಲ ಸ್ಥಳದಲ್ಲೇ ಕುಳಿತರು. ಈ ರಸ್ತೆಯ ಕಾಮಗಾರಿ ನಡೆಸಿದವರು ಯಾರು, ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು. ತದನಂತರ ರಸ್ತೆಯ ಮಾದರಿಯನ್ನು ಪಡೆದುಕೊಂಡು ಪರೀಕ್ಷೆಗೆ ರವಾನಿಸಲಾಯಿತು. ಕಳಪೆ ಕಾಮಗಾರಿಗೆ ಹೊಣೆಯಾದವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವಂತೆ ಶಾಸಕಿ ಸೂಚನೆ ನೀಡಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications