ವಿಡಿಯೋ; ಕೋವಿಡ್ ತಡೆಗೆ ಗೋಮೂತ್ರ ಸೇವನೆ ಸಲಹೆ ಕೊಟ್ಟ ಶಾಸಕ
ಲಕ್ನೋ, ಮೇ 09; ಕೋವಿಡ್ ಸೋಂಕು ತಡೆಯಲು ಖಾಲಿ ಹೊಟ್ಟೆಯಲ್ಲಿ ಜನರು ಗೋಮೂತ್ರ ಸೇವಿಸಿಬೇಕು ಎಂದು ಬಿಜೆಪಿ ಶಾಸಕರು ಸಲಹೆ ನೀಡಿದ್ದಾರೆ. ತಾವೇ ಗೋಮೂತ್ರ ಕುಡಿದು ಜನರಿಗೆ ಸಲಹೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉತ್ತರ ಪ್ರದೇಶ ರಾಜ್ಯದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಗೆ ಗೋಮೂತ್ರ ಸೇವಿಸಬೇಕು ಎಂದು ಜನರಿಗೆ ಮಾಹಿತಿ ನೀಡಿದ್ದಾರೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೂರು ಮುಚ್ಚಳ ಗೋಮೂತ್ರವನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ ಸೇವಿಸಿಬೇಕು ಎಂದು ಹೇಳಿದ್ದಾರೆ.
#WATCH | BJP MLA Surendra Singh in UP's Ballia claimed drinking cow urine has protected him from coronavirus. He also recommended people to 'drink cow urine with a glass of cold water'. (07.05)
— ANI UP (@ANINewsUP) May 8, 2021
(Source: Self made video) pic.twitter.com/C9TYR4b5Xq
"ತಾನು ವಿಜ್ಞಾನವನ್ನು ನಂಬದಿದ್ದರೂ ಗೋಮೂತ್ರವನ್ನು ನಂಬುತ್ತೇನೆ. ಗೂಮೂತ್ರ ಸೇವಿಸಿದ ಬಳಿಕ ಅರ್ಧಗಂಟೆ ಬೇರೆ ಏನೂ ಸೇವಿಸಬಾರದು" ಎಂದು ಶಾಸಕರು ವಿಡಿಯೋದಲ್ಲಿ ತಿಳಿಸಿದ್ದಾರೆ.
ವೆಂಟಿಲೇಟರ್ನಲ್ಲಿರುವ ಕೊರೊನಾ ಸೋಂಕಿತರೊಬ್ಬರಿಗೆ ಗೋಮೂತ್ರ ಕುಡಿಸಿದ ರಾಜಕಾರಣಿ
"ತಾನು ಪ್ರತಿನಿತ್ಯ 18 ಗಂಟೆ ಕೆಲಸ ಮಾಡುತ್ತೇನೆ. ಇದಕ್ಕೆ ಗೋಮೂತ್ರದಿಂದ ಸಿಕ್ಕಿರುವ ಆರೋಗ್ಯವೇ ಕಾರಣವಾಗಿದೆ" ಎಂದು ಶಾಸಕರು ವಿಡಿಯೋದಲ್ಲಿ ವಿವರಣೆ ನೀಡಿದ್ದಾರೆ. ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗಿವೆ.
ಸರ್ಕಾರಿ ಕಚೇರಿ ಶುದ್ಧೀಕರಣಕ್ಕೆ ಗೋಮೂತ್ರ ಮಿಶ್ರಿತ ಫಿನಾಯಿಲ್!
ಉತ್ತರ ಪ್ರದೇಶದಲ್ಲಿ ಶನಿವಾರ 26,636 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14,80,315ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,45,736.