"ದೋಣಿ ವಿಹಾರ ಮಾಡ್ಬಿಟ್ರೆ ಚುನಾವಣೇಲಿ ಗೆದ್ದುಬಿಡೋಲ್ಲ!"
ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ದೋಣಿ ವಿಹಾರ ಮಾಡುವ ಮೂಲಕ ಲೋಕಸಭಾ ಚುನಾವಣಾ ಪ್ರಚಾರಕ್ಕೆ ವಿಭಿನ್ನವಾಗಿ ನಾಂದಿ ಹಾಡಿದ ಪ್ರಿಯಾಂಕಾ ಗಾಂಧಿ ಅವರ ನಡೆಯನ್ನು ಬಿಜೆಪಿ ಟೀಕಿಸಿದೆ.
"ಪ್ರಿಯಾಂಕಾ ಗಾಂಧಿ ಅವರು ಎಷ್ಟು ಬಾರಿ ಬೇಕಾದರೂ ದೋಣಿ ವಿಹಾರ ಮಾಡಬಹುದು. ಎಷ್ಟು ದೇವಾಲಯಗಳನ್ನು ಬೇಕಾದರೂ ಸುತ್ತಬಹುದು. ಆದರೆ ಆಕೆಗೆ ಒಂದು ವಿಷಯ ಗೊತ್ತಿರಲಿ. ಉತ್ತರ ಪ್ರದೇಶದ ಜನರು ಯಾರನ್ನು ಗೆಲ್ಲಿಸಬೇಕು ಎಂದು ಈಗಾಗಲೇ ತೀರ್ಮಾನಿಸಿದ್ದಾರೆ" ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.
"ನಮ್ಮ ಪಕ್ಷ 73 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ, ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ" ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಮೂರು ದಿನಗಳ ಪ್ರಯಾಗ್ ರಾಜ್ ಪ್ರವಾಸದಲ್ಲಿರುವ ಪ್ರಿಯಾಂಕಾ ಗಾಂಧಿ, ದೋಣಿ, ಕಾಲ್ನಡಿಗೆ ಮತ್ತು ಕಾರಿನ ಮೂಲಕ ಒಟ್ಟು 140 ಕಿ.ಮೀ. ಸಾಗಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನರನ್ನು ತಲುಪುವ ಉದ್ದೇಶ ಅವರದು.
ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಅವರು ಕಣಕ್ಕಿಳಲಿಯುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರು ಸ್ಪಷ್ಟಪಡಿಸಿದ್ದು, ಅವರು ಪಕ್ಷದ ಪರ ಪ್ರಚಾರದಲ್ಲೇ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.












Click it and Unblock the Notifications