ತಿರಸ್ಕೃತ ರಾಜಕಾರಣಿಗಳು,ಬೋಗಸ್ ಬ್ರಿಗೇಡ್ನಿಂದ ಭಾರತಕ್ಕೆ ಕೆಟ್ಟ ಹೆಸರು: ಮುಖ್ತಾರ್ ಅಬ್ಬಾಸ್ ನಖ್ವಿ
ಕಾನ್ಪುರ್,ಫೆಬ್ರವರಿ 06: ತಿರಸ್ಕೃತ ರಾಜಕಾರಣಿಗಳು ಹಾಗೂ ಬೋಗಸ್ ಬ್ರಿಗೇಡ್ನಿಂದ ಭಾರತಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ಒಂದೆಡೆ ಬೋಗಸ್ ಬ್ರಿಗೇಡ್ ಅಲ್ಪಸಂಖ್ಯಾತರಲ್ಲಿ ಭಯ ಮೂಡಿದೆ ಎಂದು ಸುಳ್ಳು, ನಕಲಿ ಪ್ರಚಾರ ಮಾಡುತ್ತಿದ್ದರೆ, ಮತ್ತೊಂದೆಡೆ ಪ್ರಧಾನಿ ಮೋದಿ ಅಲ್ಪಸಂಖ್ಯಾತರೂ ಸೇರಿ ಸಮಾಜದ ಎಲ್ಲಾ ವರ್ಗಗಳನ್ನು ಮುನ್ನೆಲೆ ಅಭಿವೃದ್ಧಿಯ ಸಮಾನ ಪಾಲುದಾರರನ್ನಾಗಿ ಮಾಡಲು ಅವಿರತ ಶ್ರಮಿಸುತ್ತಿದ್ದರು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನಲ್ಲಿ ಪ್ರಧಾನಿ ಮೋದಿ ಅವರ ಬದ್ಧತೆ ಈ ಎಲ್ಲಾ ನಕಲಿ ಪ್ರಚಾರವನ್ನು ಪ್ರತಿ ಬಾರಿಯೂ ಬಯಲು ಮಾಡಿದೆ ಎಂದರು.
ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಗೆ ಮೋದಿ ಬಗ್ಗೆ ಇಡಿ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ ಎಂದು ನಖ್ವಿ ತಿಳಿಸಿದ್ದಾರೆ. ಇದೇ ವೇಳೆ ಬಜೆಟ್ ಬಗ್ಗೆಯೂ ಮಾತನಾಡಿರುವ ಅವರು, 2021-22 ರ ಬಜೆಟ್ ಆತ್ಮನಿರ್ಭರ ಭಾರತ ಪಯಣದ ಗೆಜೆಟ್ ಎಂಬುದಾಗಿ ಬಣ್ಣಿಸಿದ್ದಾರೆ.

ತಿರಸ್ಕೃತ ರಾಜಕಾರಣಿಗಳು, ಬೋಗಸ್ ಬ್ರಿಗೇಡ್ ನಿಂದ ಭಾರತದ ಮಾನಹಾನಿ ಮಾಡುವ ಕ್ರಿಮಿನಲ್ ಪಿತೂರಿಯಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಿದ್ದಾರೆ.
ಈ ರೀತಿಯ ಜನಗಳು ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದನ್ನು ಪ್ರಶ್ನಿಸಿದ್ದರು, ಸೋ ಕಾಲ್ಡ್- ಅಸಹಿಷ್ಣುತೆಯ ಕುರಿತು ದೇಶದಲ್ಲಿ ಗದ್ದಲ ಎಬ್ಬಿಸಿದ್ದರು. ಸಿಎಎ ಕುರಿತು ಗೊಂದಲ ಮೂಡಿಸಿದರು ಹಾಗೂ ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣದ ವೇಳೆ ಜನತೆಯ ಒಳಿತಿಗಾಗಿ ಕೈಗೊಂಡ ಕ್ರಮಗಳನ್ನು ವಿರೋಧಿಸಿದ್ದರು ಎಂದು ನಖ್ವಿ ಆರೋಪಿಸಿದ್ದಾರೆ.
ತಪ್ಪು ಮಾಹಿತಿಯನ್ನು ಹರಡುವ ಈ ರೀತಿಯ ಕ್ರಿಮಿನಲ್ ಗುಂಪುಗಳನ್ನು ಭಾರತದ ಜನತೆಯ ಬದ್ಧತೆ ಮಣಿಸಿದೆ. 2014 ಹಾಗೂ 2019 ರಲ್ಲಿ ಜನತೆ ಎನ್ ಡಿಎ ಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ ಎಂದು ನಖ್ವಿ ಹೇಳಿದ್ದಾರೆ.
ಎಲ್ಲಾ ಕ್ರಿಮಿನಲ್ ಪಿತೂರಿಗಳನ್ನು, ಪಟ್ಟಭದ್ರ ಹಿತಾಸಕ್ತಿಗಳ ಎಲ್ಲಾ ಬೂಟಾಟಿಕೆಗಳನ್ನೂ ಜನತೆ ತಿರಸ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications