ಮಾಯಾವತಿ ಮಾಜಿ ಕಾರ್ಯದರ್ಶಿ ಮೇಲೆ 100 ಕೋಟಿ ತೆರಿಗೆ ವಂಚನೆ ಆರೋಪ
ಲಖನೌ (ಉತ್ತರಪ್ರದೇಶ), ಮಾರ್ಚ್ 12: 100 ಕೋಟಿ ರುಪಾಯಿಯಷ್ಟು ತೆರಿಗೆ ವಂಚನೆ ಮಾಡಿದ ಗುಮಾನಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರ ಮಾಜಿ ಕಾರ್ಯದರ್ಶಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ ಹಾಗೂ ಲಖನೌದ 12 ಸ್ಥಳಗಳಲ್ಲಿ ದಾಳಿ ನಡೆದಿದೆ.
"ಅಪಾರ ಪ್ರಮಾಣದಲ್ಲಿ ಸಂಪತ್ತು ಹೊಂದಿರುವ ನೇತ್ರಮ್ ನೂರಾರು ಕೋಟಿ ರುಪಾಯಿ ತೆರಿಗೆ ವಂಚನೆ ಮಾಡಿದ್ದಾರೆ. ತೆರಿಗೆ ವಂಚನೆ ಮಾಡಿದ ಆರೋಪವನ್ನು ಬಯಲಿಗೆಳೆಯುವ ಉದ್ದೇಶದಿಂದ ಈ ದಾಳಿ ನಡೆದಿದೆ. ಬೆಳಗ್ಗೆ ಆರಂಭವಾದ ಈ ದಾಳಿ ಸಂಜೆಯ ನಂತರವೂ ಮುಂದುವರಿಯಬಹುದು" ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ಮಾಧ್ಯಮ ಸಂಸ್ಥೆಗೆ ತಿಳಿಸಿವೆ.
ನೇತ್ರಮ್ ಅವರು ನಿವೃತ್ತ ಐಎಎಸ್ ಅಧಿಕಾರಿ. ಉತ್ತರಪ್ರದೇಶದಲ್ಲಿ ಮಾಯಾವತಿ 2007ರಿಂದ 12ರ ಮಧ್ಯೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅವರಿಗೆ ಆಪ್ತರಾಗಿದ್ದರು. ಐದು ವರ್ಷಗಳ ಕಾಲ ಮುಖ್ಯಮಂತ್ರಿ ಪ್ರಿನ್ಸಿಪಲ್ ಸೆಕ್ರೆಟರಿ ಆಗಿದ್ದರು. ದಲಿತ ಸಮುದಾಯಕ್ಕೆ ಸೇರಿದ ಅವರು, ಕೃಷಿ ಇಲಾಖೆ, ಅಬಕಾರಿ, ಕಬ್ಬು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗಳಲ್ಲಿ ಮುಖ್ಯ ಹುದ್ದೆಗಳಲ್ಲಿ ಇದ್ದರು.

ಆ ನಂತರ 2012ರಲ್ಲಿ ಅಖಿಲೇಶ್ ಯಾದವ್ ಉತ್ತರಪ್ರದೇಶದ ಮುಖ್ಯಮಂತ್ರಿಯಾದ ನಂತರ ಅಷ್ಟೇನೂ ಪ್ರಾಮುಖ್ಯತೆ ಇಲ್ಲದ ಹುದ್ದೆಗೆ ನೇಮಕವಾದರು. 2014ರಲ್ಲಿ ಅವರು ಸೇವೆಯಿಂದ ನಿವೃತ್ತರಾದರು. ಕಳೆದ ಜನವರಿ ಆರಂಭದಲ್ಲಿ ಉತ್ತರಪ್ರದೇಶದಲ್ಲಿ ಸ್ಥಾಪಿಸಲಾದ ಆನೆ ಪುತ್ಥಳಿ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು. ಈ ಸಂಬಂಧ ಲಖನೌದಲ್ಲಿ ಆರು ಸ್ಥಳಗಳಲ್ಲಿ ದಾಳಿ ಕೂಡ ನಡೆದಿತ್ತು.
ಇದೀಗ ನೇತ್ರಮ್ ಮೇಲಿನ ಈ ದಾಳಿಯು ಅಕ್ರಮ ಗಣಿ ಹಗರಣದ ಆರೋಪದಲ್ಲಿ ಅಖಿಲೇಶ್ ಯಾದವ್ ಪಾತ್ರದ ಬಗ್ಗೆ ಸಿಬಿಐ ತನಿಖೆ ಆರಂಭಿಸಿದ ಕೆಲ ವಾರಗಳಲ್ಲೇ ಆಗಿದೆ. ಇದೀಗ ಲೋಕಸಭೆ ಚುನಾವಣೆಗೆ ಅಖಿಲೇಶ್ ಹಾಗೂ ಮಾಯಾವತಿ ಅವರ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಇಬ್ಬರೂ ಮಾಜಿ ಮುಖ್ಯಮಂತ್ರಿಗಳು ಈಗ, ಬಿಜೆಪಿ ಬೇಕೆಂತಲೇ ತನಿಖಾ ಸಂಸ್ಥೆಗಳನ್ನು ಛೂ ಬಿಟ್ಟಿದೆ ಎಂದು ಆರೋಪಿಸಿದ್ದಾರೆ.
ಚಿಲ್ಲರೆ ರಾಜಕಾರಣ ಹಾಗೂ ರಾಜಕೀಯ ಪಿತೂರಿ ಬಿಜೆಪಿಗೆ ಹೊಸತಲ್ಲ. ದೇಶದ ಜನರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಮಾಯಾವತಿ ಕಿಡಿ ಕಾರಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications