'ಚೋರ್ ಪಿಎಂ' ಎಂದು ಟೀಕಿಸಿದ ಗೌರಮ್ಮನ ವಿರುದ್ಧ ಉತ್ತರ ಪ್ರದೇಶದಲ್ಲಿ ಕೇಸ್
Recommended Video

ಲಖನೌ, ಸೆಪ್ಟೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ನಿಂದನಾತ್ಮಕ ಫೋಟೊವನ್ನು ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದ ಕಾಂಗ್ರೆಸ್ನ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ದ್ವೇಷ ಕಾರುವಂತಹ ಪೋಸ್ಟ್ ಅನ್ನು ರಮ್ಯಾ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಲಖನೌ ಮೂಲದ ಕಾರ್ಯಕರ್ತ ಮತ್ತು ವಕೀಲ ಸಯ್ಯದ್ ರಿಜ್ವಾನ್ ಅಹ್ಮದ್ ಅವರು ಗೊಮ್ಟಿನಗರ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ಸಲ್ಲಿಸಿದ್ದರು.
ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 67 ಮತ್ತು ಐಪಿಸಿ ಸೆಕ್ಷನ್ 124 ಎ (ದೇಶದ್ರೋಹ) ಅಡಿಯಲ್ಲಿ ರಮ್ಯಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಅನಿಲ್ ಅಂಬಾನಿಗೆ ನೆರವಾಗಲು ಲಾಬಿ ನಡೆಸಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮೋದಿ ಅವರನ್ನು 'ಕಳ್ಳ' ಎಂದು ನಿಂದಿಸಿದ್ದರು.
#ChorPMChupHai pic.twitter.com/Bahu5gmHbn
— Divya Spandana/Ramya (@divyaspandana) 24 September 2018
ಈ ಹೇಳಿಕೆಯನ್ನು ಬಳಸಿಕೊಂಡಿದ್ದ ರಮ್ಯಾ, ಮೋದಿ ಈ ಪ್ರಕರಣದ ಬಗ್ಗೆ ತುಟಿಬಿಚ್ಚುತ್ತಿಲ್ಲ ಎಂದು ಟ್ವಿಟ್ಟರ್ನಲ್ಲಿ ಟೀಕಿಸಿದ್ದರು. ಆದರೆ, ಅದಕ್ಕೆ ಬಳಸಿದ್ದ ಚಿತ್ರ ಆಕ್ಷೇಪಾರ್ಹವಾಗಿತ್ತು. ಈ ಬಗ್ಗೆ ಬಿಜೆಪಿ ಮತ್ತು ಮೋದಿ ಅಭಿಮಾನಿಗಳು ಟ್ವಿಟ್ಟರ್ನಲ್ಲಿಯೇ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications