ಕಲ್ಯಾಣ್ ಸಿಂಗ್ ರನ್ನು ಕೋರ್ಟ್ ಮುಂದೆ ಹಾಜರು ಪಡಿಸಲು ಸಿಬಿಐ ಅರ್ಜಿ
ಲಖನೌ, ಸೆಪ್ಟೆಂಬರ್ 9: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ ರನ್ನು ಕೋರ್ಟ್ ಮುಂದೆ ಹಾಜರು ಪಡಿಸಲು ಆದೇಶ ನೀಡಬೇಕು ಎಂದು ಸೋಮವಾರ ಕೇಂದ್ರೀಯ ತನಿಖಾ ದಳದಿಂದ (ಸಿಬಿಐ) ಸಿಬಿಐ ವಿಶೇಷ ಕೋರ್ಟ್ ಗೆ(ಅಯೋಧ್ಯಾ ಪ್ರಕರಣ) ಅರ್ಜಿ ಸಲ್ಲಿಸಲಾಗಿದೆ.
ಆದರೆ, ಜಿಲ್ಲಾ ನ್ಯಾಯಾಧೀಶ ಹಾಗೂ ಸಿಬಿಐ ವಿಶೇಷ ನ್ಯಾಯಾಧೀಶ (ಅಯೋಧ್ಯಾ ಪ್ರಕರಣ) ಎಸ್. ಕೆ. ಯಾದವ್ ಅವರು, ಕಲ್ಯಾಣ್ ಸಿಂಗ್ ರಾಜಸ್ಥಾನದ ರಾಜ್ಯಪಾಲರಲ್ಲ ಹಾಗೂ ಅವರು ಯಾವುದೇ ಸಾಂವಿಧಾನಿಕ ಹುದ್ದೆ ಹೊಂದಿಲ್ಲ ಎಂಬುದಕ್ಕೆ ಲಿಖಿತ ದಾಖಲೆ ಒದಗಿಸುವಂತೆ ಸಿಬಿಐಗೆ ನಿರ್ದೇಶಿಸಿದರು. ಸೆಪ್ಟೆಂಬರ್ ಹನ್ನೊಂದನೇ ತಾರೀಕಿಗೆ ವಿಚಾರಣೆಯನ್ನು ಮುಂದೂಡಿದರು.
ಸೆಪ್ಟೆಂಬರ್ ಮೂರನೇ ತಾರೀಕಿನ ತನಕ ಕಲ್ಯಾಣ್ ಸಿಂಗ್ ರಾಜಸ್ಥಾನದ ರಾಜ್ಯಪಾಲರಾಗಿದ್ದರು. ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಕ್ರಿಮಿನಲ್ ವಿಚಾರಣೆಯಿಂದ ಅವರಿಗೆ ವಿನಾಯಿತಿ ಇತ್ತು. ತಮ್ಮ ಅವಧಿ ಪೂರೈಸಿದ ಕಲ್ಯಾಣ್ ಸಿಂಗ್ ತಮ್ಮ ಹುದ್ದೆಯಿಂದ ನಿರ್ಗಮಿಸಿ, ಕಲ್ ರಾಜ್ ಮಿಶ್ರಾ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ಸೋಮವಾರದಂದು ಲಖನೌ ತಲುಪಿದ್ದಾರೆ.

ಬಾಬ್ರಿ ಮಸೀದಿ ಪ್ರಕರಣದಲ್ಲಿ ಎರಡು ವರ್ಷದೊಳಗೆ ತೀರ್ಪು ನೀಡುವಂತೆ ಸುಪ್ರೀಂ ಕೋರ್ಟ್ ಅವಕಾಶ ನೀಡಿತ್ತು. ಈ ಪ್ರಕರಣದಲ್ಲಿ ಬಿಜೆಪಿ ನಾಯಕರಾದ ಎಲ್. ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಮತ್ತಿತರರು ಇದ್ದಾರೆ. ಕಳೆ ಜುಲೈನಲ್ಲಿ ಮತ್ತೆ ಒಂಬತ್ತು ತಿಂಗಳ ಗಡುವು ವಿಸ್ತರಿಸಿ, ಸಿಬಿಐ ಕೋರ್ಟ್ ಗೆ ಕಾಲಾವಕಾಶ ನೀಡಿತ್ತು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications