'ಚಾಟ್' ಮಾರುವ ವಿಚಾರದಲ್ಲಿ ವ್ಯಾಪಾರಿಗಳ ಬಡಿದಾಟ: ವೈರಲ್ ವಿಡಿಯೋ
ಬಾಘಪಟ್, ಫೆಬ್ರವರಿ 23: ಉತ್ತರ ಪ್ರದೇಶದ ಬಾಘಪಟ್ ಜಿಲ್ಲೆಯಲ್ಲಿ ಗ್ರಾಹಕರನ್ನು ತಮ್ಮ ಅಂಗಡಿಗೆ ಸೆಳೆಯುವ ವಿಚಾರದಲ್ಲಿ ಅಂಗಡಿ ಮಾಲೀಕರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಬಾಘಪಟ್ನ ಜನನಿಬಿಡ ಬರೌಟ್ ಪಟ್ಟಣದಲ್ಲಿ ಸೋಮವಾರ ಈ ಘಟನೆ ನಡೆದಿದೆ.
ಎರಡು ಗುಂಪುಗಳು ಕಬ್ಬಿಣದ ರಾಡು, ದೊಣ್ಣೆಗಳಲ್ಲಿ ಬಡಿದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 'ಚಾಟ್' ಮಾರಾಟ ಮಾಡುವ ಅಂಗಡಿಗಳ ಮಾಲೀಕರು ಗ್ರಾಹಕರನ್ನು ಸೆಳೆಯುವ ವಿಚಾರದಲ್ಲಿ ಈ ಘರ್ಷಣೆ ನಡೆದಿದೆ. ಇದುವರೆಗೂ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
'ಚಾಚಾ' ಎಂದೇ ಹೆಸರಾದ ಹರಿಂದರ್ ಇಲ್ಲಿ 40 ವರ್ಷಗಳಿಂದ ಅಂಗಡಿ ನಡೆಸುತ್ತಿದ್ದಾರೆ. ಅಲ್ಲಿ ಇತ್ತೀಚೆಗೆ ಅಂಗಡಿ ಆರಂಭಿಸಿದ ವ್ಯಾಪಾರಿಗಳು 'ಚಾಚಾ' ಹಳಸಲು ತಿಂಡಿಗಳನ್ನು ಮಾರಾಟ ಮಾಡುತ್ತಾನೆ ಎಂದು ಗ್ರಾಹಕರಿಗೆ ಹೇಳುತ್ತಿದ್ದರು. ಇದರಿಂದ ನನ್ನ ಬಳಿ ಬಂದ ಗ್ರಾಹಕರು ತಟ್ಟೆಯಲ್ಲಿದ್ದಿದ್ದನ್ನೂ ವಾಪಸ್ ಕೊಟ್ಟು ಹೋಗುತ್ತಿದ್ದರು. ಇದು ಐದಾರು ಬಾರಿ ನಡೆದಿದೆ ಎಂದು ಹರಿಂದರ್ ಆರೋಪಿಸಿದ್ದಾರೆ.

ಸುಮಾರು 20 ನಿಮಿಷ ಮಾರಾಮಾರಿ ನಡೆದಿದೆ. ಯಾವ ಗುಂಪಿನವರು ಯಾರಿಗೆ ಥಳಿಸಿದರು ಎನ್ನುವುದೂ ಗೊತ್ತಾಗಿಲ್ಲ. ಚಾಟ್ಸ್ ತಿನ್ನಲು ಬಂದಿದ್ದ ಜನರಿಗೂ ಏಟು ಬಿದ್ದಿದೆ. ಹತ್ತಾರು ಮಂದಿ ಗಾಯಗೊಂಡಿದ್ದಾರೆ. ದಾರಿಹೋಕರು ಈ ಹೊಡೆದಾಟದ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕೆಲವೇ ನಿಮಿಷಗಳಲ್ಲಿ ವಿಡಿಯೋಗಳು ವೈರಲ್ ಆಗಿವೆ.
Fight in Baghpat UP & Someone has added a music into this 😂😂 pic.twitter.com/M8oObDxMJ5
— ANKIT MISHRA (@Mishraaaa_akki) February 22, 2021
ಈ ವಿಡಿಯೋದಲ್ಲಿ ಜನರ ಗಮನ ಸೆಳೆದ 'ಚಾಚಾ' ಬಗ್ಗೆ ಚರ್ಚೆ ನಡೆಯುತ್ತಿದೆ. ಅಗಲವಾಗಿ ಹರಡಿದ ಕೂದಲಿಗೆ ಚಾಚಾ ಮೆಹಂದಿ ಹಾಕಿದ್ದು, ಅದು ಜನರನ್ನು ಆಕರ್ಷಿಸಿದೆ. 'ಚಾಚಾ' ಐನ್ಸ್ಟೀನ್ ಥರ ಕಾಣಿಸುತ್ತಿದ್ದಾರೆ ಎಂದು ಕೆಲವರು ತಮಾಷೆ ಮಾಡಿದ್ದಾರೆ. ಚಾಚಾ ಬಡಿಗೆ ಹಿಡಿದು ಎದ್ದುಬಿದ್ದು ಹೊಡೆಯುವುದು ವಿಡಿಯೋದಲ್ಲಿ ದಾಖಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications