ಕಾಂಗ್ರೆಸ್ ಪಕ್ಷ ದೇಶದ ಭ್ರಷ್ಟಾಚಾರದ ಬೇರು ಎಂದ ಯೋಗಿ

ಲಕ್ನೋ, ಜನವರಿ 01: ಕಾಂಗ್ರೆಸ್ ಪಕ್ಷವು ದೇಶದ ಭ್ರಷ್ಟಾಚಾರದ ಬೇರು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದಾರೆ.

ಅರಾಜಕತೆ ಮತ್ತು ಭ್ರಷ್ಟಾಚಾರದ ಮೂಲವಾಗಿರುವ ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷವು ದೇಶದ ಒಂದು ದೊಡ್ಡ ಸಮಸ್ಯೆ ಎಂದು ಯೋಗಿ ಹೇಳಿದ್ದಾರೆ.

ಕಾಂಗ್ರೆಸ್ ಭದ್ರಕೋಟೆ ರಾಯ್ ಬರೇಲಿಯಲ್ಲಿ 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಯ 'ಜನ ವಿಶ್ವಾಸ ಯಾತ್ರೆ'ಯ ಅಂಗವಾಗಿ ಏರ್ಪಡಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾಜವಾದಿ ಪಕ್ಷದ ವಿರುದ್ಧವೂ ವಾಗ್ದಾಳಿ ನಡೆಸಿದರು.

Congress A Problem For Country, Root Of Corruption: Yogi Adityanath

ನಮ್ಮ ಸರ್ಕಾರ ಜನರಿಗಾಗಿ ಕೆಲಸ ಮಾಡುತ್ತದೆ ಮತ್ತು ನಂಬಿಕೆಯನ್ನು ಗೌರವಿಸುತ್ತದೆ. ಕಾಂಗ್ರೆಸ್, ಎಸ್ಪಿ ಮತ್ತು ಬಿಎಸ್ಪಿ ಬಿಜೆಪಿಯ ರೀತಿಯಲ್ಲಿ ಕೆಲಸ ಮಾಡಬಹುದೇ? ರಾಮ ಮತ್ತು ಕೃಷ್ಣನನ್ನು ಕಾಲ್ಪನಿಕತೆ ಎಂದು ಹೇಳಿದವರು ಮಂದಿರವನ್ನು ಕಟ್ಟಬಹುದೇ? ಭಗವಾನ್ ರಾಮನ ಭಕ್ತರ ಮೇಲೆ ಗುಂಡು ಹಾರಿಸುವವರು ದೇವಾಲಯ ನಿರ್ಮಿಸಬಹುದೇ? ಎಂದು ಪ್ರಶ್ನಿಸಿದರು.

ರಾಜ್ಯದ ಜನತೆಗೆ ಪಕ್ಷದ ಧ್ವಜವಿರುವ ವಾಹನದೊಳಗೆ ಒಬ್ಬ ಗೂಂಡಾ ಕುಳಿತಿದ್ದಾನೆ ಎಂದು ಗೊತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ರಾಯ್‍ಬರೇಲಿಯ ಕಾಂಗ್ರೆಸ್ಸಿನ ಜನಪ್ರತಿನಿಧಿಗಳು ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ರೀತಿಯಲ್ಲೇ ಬಿಜೆಪಿಯು ರಾಯ್‍ಬರೇಲಿಯಿಂದ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯಲಿದೆ. ಕಾಂಗ್ರೆಸ್ ದೇಶಕ್ಕೆ ಸಮಸ್ಯೆಯಾಗಿ ನಿಂತಿದೆ. ರಾಯಬರೇಲಿಯು ವಿದೇಶಿ ಆಡಳಿತವನ್ನು ಎಂದಿಗೂ ಒಪ್ಪಿಕೊಂಡಿಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಭಯೋತ್ಪಾದನೆ, ಅರಾಜಕತೆ ಮತ್ತು ಭ್ರಷ್ಟಾಚಾರದ ಮೂಲವಾಗಿರುವ ಕಾಂಗ್ರೆಸ್, ಜಾತಿವಾದ ಮತ್ತು ಭಾಷಾಭೇದವನ್ನು ಹರಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಎಸ್‌ಪಿ ಮತ್ತು ಬಹುಜನ ಸಮಾಜ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಆದಿತ್ಯನಾಥ್, ಎಸ್‌ಪಿ ಮತ್ತು ಬಿಎಸ್‍ಪಿ ಪಕ್ಷಗಳೂ ರಾಜ್ಯಕ್ಕೆ ಸಮಸ್ಯೆಯಾಗಿದೆ. ಇಂದು ಎಸ್‌ಪಿ ಧ್ವಜವಿರುವ ವಾಹನ ಎಂದರೆ ಯಾರೋ ಗೂಂಡಾಗಳು ಒಳಗೆ ಕುಳಿತಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ.

ಅಯೋಧ್ಯೆ ಮತ್ತು ವಾರಾಣಸಿಯಂತೆ ಪಶ್ಚಿಮ ಉತ್ತರ ಪ್ರದೇಶದ ಮಥುರಾ ಮತ್ತು ವೃಂದಾವನದಲ್ಲೂ ಭವ್ಯ ದೇಗುಲ ನಿರ್ಮಾಣ ಮಾಡಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತೇವೆ ಎಂದು ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭರವಸೆ ನೀಡಿದರು.

ಅಮ್ರೋಹಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, 'ಅಯೋಧ್ಯೆಯಲ್ಲಿ ದೇಗುಲ ನಿರ್ಮಾಣಕ್ಕೆ ಬಿಜೆಪಿ ಬದ್ಧವಾಗಿದೆ. ಭವ್ಯ ದೇಗುಲ ನಿರ್ಮಾಣ ಮಾಡುವ ಆಶ್ವಾಸನೆ ನೀಡಿದ್ದೆವು. ಪ್ರಧಾನಿ ಮೋದಿ ಅವರು ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೆ. ಕಾಶಿಯಲ್ಲೂ ಭವ್ಯ ದೇಗುಲ ನಿರ್ಮಾಣವಾಗಿದೆ. ಹಾಗಿದ್ದಾಗ ಮಥುರಾ ಮತ್ತು ವೃಂದಾವನಗಳನ್ನು ಹಾಗೆಯೇ ಬಿಟ್ಟುಬಿಡಲು ಹೇಗೆ ಸಾಧ್ಯ? ಮಥುರಾದಲ್ಲಿ ಕೆಲಸ ಪ್ರಗತಿಯಲ್ಲಿದೆ' ಎಂದು ಹೇಳಿದರು.

ಮಥುರಾದ ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಈ ತಿಂಗಳ ಆರಂಭದಲ್ಲಿ ಮಥುರಾದಲ್ಲಿ ಅಯೋಧ್ಯೆ ಮತ್ತು ಕಾಶಿ ವಿಶ್ವನಾಥದ ಮಾದರಿಯಲ್ಲಿ ಶ್ರೀಕೃಷ್ಣನ ಭವ್ಯವಾದ ದೇವಾಲಯವನ್ನು ನಿರ್ಮಿಸಬೇಕೆಂದು ಬಯಸಿದ್ದರು. ಮಥುರಾ-ವೃಂದಾವನವನ್ನು ಶ್ರೀಕೃಷ್ಣನ ಜನ್ಮಭೂಮಿ (ಜನ್ಮಭೂಮಿ) ಎಂದು ಪರಿಗಣಿಸಲಾಗಿದೆ.

2021 ರ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ-ರಾಜಕಾರಣಿ, ಅಯೋಧ್ಯೆಯಲ್ಲಿ ಭಗವಾನ್ ರಾಮನ ಭವ್ಯವಾದ ಮಂದಿರವನ್ನು ನಿರ್ಮಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ, ವಾರಾಣಸಿಯಲ್ಲಿ ಭವ್ಯವಾದ ಕಾರಿಡಾರ್ ಬಂದಿದೆ ಎಂದಿದ್ದರು.

ಈಗ ಮಥುರಾದಲ್ಲಿ ಭವ್ಯವಾದ ಕೃಷ್ಣ ಮಂದಿರದ ಸಮಯ ಕೂಡ ಬಂದಿದೆ. ಅದು ಹೇಗೆ ಆಗುತ್ತದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೋಡಲಿದ್ದಾರೆ. ಆದರೆ ನಾನು ಹೇಳಬೇಕಾಗಿರುವುದು ಪ್ರೀತಿಯಿಂದ ನಿರ್ಮಿಸಬೇಕು ಎಂದು ಮಥುರಾ ಸಂಸದರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ IANS ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕಾಶಿ ವಿಶ್ವನಾಥ್ ಕಾರಿಡಾರ್ ಕನಸನ್ನು ನನಸು ಮಾಡುವಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮುಖ ಪಾತ್ರ ವಹಿಸಿದ್ದಾರೆ. ಮುಖ್ಯಮಂತ್ರಿಗಳು ಒಂಬತ್ತು ಸಂಪುಟ ಸಭೆಗಳನ್ನು ನಡೆಸುವ ಮೂಲಕ ಯೋಜನೆಗೆ ರೂಪು ನೀಡಿದ್ದಾರೆ ಮತ್ತು ಕೇವಲ ನಾಲ್ಕು ವರ್ಷಗಳಲ್ಲಿ, ಯೋಗಿ ಮಹತ್ವದ ಯೋಜನೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. 9 ಕ್ಯಾಬಿನೆಟ್ ಸಭೆಗಳಲ್ಲಿ ದತ್ತಿ ವ್ಯವಹಾರಗಳ ಇಲಾಖೆಯಿಂದ ಕಾಶಿ ವಿಶ್ವನಾಥ ದೇವಾಲಯದ ವಿಸ್ತರಣೆ ಮತ್ತು ಅಭಿವೃದ್ಧಿ ಯೋಜನೆಗೆ ಪ್ರಸ್ತಾವನೆಗಳನ್ನು ಮಂಡಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+