ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಪ್ರತಿಭಟನೆಗೆ ರಾಜಕೀಯ ತಿರುವು? ರಾಂಪುರಕ್ಕೆ ಪ್ರಿಯಾಂಕಾ ಭೇಟಿ

|
Google Oneindia Kannada News

ಲಖ್ನೋ, ಫೆಬ್ರುವರಿ 04: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ಕೈಗೊಂಡಿರುವ ಪ್ರತಿಭಟನೆಗೆ ವಿರೋಧ ಪಕ್ಷಗಳು ಬೆಂಬಲ ಸೂಚಿಸುತ್ತಿವೆ. ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕೂಡ ರೈತರಿಗೆ ಬೆಂಬಲ ಘೋಷಿಸಿದೆ.

 ಇಂಥ ಭಯದ ವಾತಾವರಣ ಪ್ರಜಾಪ್ರಭುತ್ವಕ್ಕೆ ವಿಷದಂತೆ; ಪ್ರಿಯಾಂಕಾ ಗಾಂಧಿ ಇಂಥ ಭಯದ ವಾತಾವರಣ ಪ್ರಜಾಪ್ರಭುತ್ವಕ್ಕೆ ವಿಷದಂತೆ; ಪ್ರಿಯಾಂಕಾ ಗಾಂಧಿ

ಈ ನಡುವೆ ಪ್ರತಿಭಟನೆಯು ರಾಜಕೀಯ ತಿರುವು ಪಡೆದುಕೊಳ್ಳುತ್ತಿರುವ ಮಾತುಗಳೂ ಕೇಳಿಬರುತ್ತಿವೆ. ಇದೀಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಗಣರಾಜ್ಯೋತ್ಸವದಂದು ನಡೆದ ಗಲಭೆ ಸಂದರ್ಭ ಸಾವನ್ನಪ್ಪಿದ ರೈತ ನವರೀತ್ ಸಿಂಗ್ ಮನೆಗೆ ಭೇಟಿ ನೀಡಲು ರಾಂಪುರಕ್ಕೆ ತೆರಳುತ್ತಿದ್ದಾರೆ.

Congress General Secretary Priyanka Gandhi To Meet Navreet Singh Family In Rampur

ನವರೀತ್ ಕುಟುಂಬಕ್ಕೆ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ರಾಂಪುರಕ್ಕೆ ಭೇಟಿ ನೀಡುತ್ತಿರುವುದಾಗಿ ತಿಳಿದುಬಂದಿದೆ. ನವರೀತ್ ಸಿಂಗ್ ಅವರು ಕೆನಡಾದಿಂದ ಇಲ್ಲಿಗೆ ಬಂದು ರೈತರ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಪೊಲೀಸರು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಇಲ್ಲಿಗೆ ಬಂದು ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಅಜಯ್ ಲಲ್ಲು ತಿಳಿಸಿದ್ದಾರೆ.

English summary
Politics is all set to take the centre stage in Uttar Pradesh as Congress general secretary Priyanka Gandhi has left for Rampur to meet the family of Navreet Singh who was killed during farmers' tractor rally in New Delhi on the Republic Day,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X