ಕಾಂಗ್ರೆಸ್ ಮಹಾಘಟಬಂಧನ್ನ ಭಾಗ: ಅಖಿಲೇಶ್ ಯಾದವ್
ಲಖನೌ, ಮಾರ್ಚ್ 05: ಕಾಂಗ್ರೆಸ್ ಪಕ್ಷವು ಮಹಾಘಟಬಂದನ್ನ ಭಾಗ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರು ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ನಮ್ಮ ಮೈತ್ರಿಯ ಜೊತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ಎಸ್ಪಿ ಮತ್ತು ಮಾಯಾವತಿ ಅವರ ಬಿಎಸ್ಪಿ ಪಕ್ಷಗಳು ಮೈತ್ರಿಯಾಗಿ ಲೋಕಸಭೆ ಚುನಾವಣೆಯನ್ನು ಎದುರಿಸುತ್ತಿವೆ. ಇಲ್ಲಿ ಕಾಂಗ್ರೆಸ್ ಅನ್ನು ಮೈತ್ರಿಯಿಂದ ಹೊರಗುಳಿಸಿವೆ. ಆದರೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸ್ವತಂತ್ರ್ಯವಾಗಿ ಸ್ಪರ್ಧಿಸುತ್ತಿರುವ ಕಾರಣ, ಮಹಾಘಟಬಂಧನ್ನಲ್ಲಿ ಕಾಂಗ್ರೆಸ್ಗೆ ಸ್ಥಾನ ಇದೆಯೋ ಇಲ್ಲವೋ ಎಂಬ ಪ್ರಶ್ನೆ ಎಸ್ಪಿ ಹಾಗೂ ಬಿಎಸ್ಪಿಯನ್ನು ಮಾಧ್ಯಮಗಳು ಕೇಳುತ್ತಿವೆ.












Click it and Unblock the Notifications