ಉತ್ತರಪ್ರದೇಶ ಚುನಾವಣೆ: ಕಾಂಗ್ರೆಸ್ ಮ್ಯಾರಥಾನ್ ವೇಳೆ ನೂಕುನುಗ್ಗಲು
ಲಕ್ನೋ ಜನವರಿ 4: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಇಂದು ಬೆಳಗ್ಗೆ ಪಕ್ಷದ ಚುನಾವಣಾ ಪ್ರಚಾರದ ಭಾಗವಾಗಿ ಆಯೋಜಿಸಿದ್ದ "ಲಡ್ಕಿ ಹೂಂ, ಲಾಡ್ ಸಕ್ತಿ ಹೂಂ'' (ಮಹಿಳೆಯರು ಹೋರಾಡಬಹುದು)" ಮ್ಯಾರಥಾನ್ನಲ್ಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ದೃಶ್ಯದಲ್ಲಿ ಮಹಿಳೆಯರು ಮಾಸ್ಕ್ ಹಾಕದಿರುವುದು ಕಂಡುಬಂದಿದೆ. ಯುಪಿಯ ಬರೇಲಿಯಲ್ಲಿ ನಡೆದ ಮ್ಯಾರಥಾನ್ನಲ್ಲಿ ನೂರಾರು ಮಹಿಳೆಯರು ಮತ್ತು ಹದಿಹರೆಯದ ಹುಡುಗಿಯರು ಮುಖವಾಡಗಳಿಲ್ಲದೆ ಭಾಗವಹಿಸಿರುವುದು ಕಂಡುಬಂದಿದೆ. ಹೆಚ್ಚುತ್ತಿರುವ COVID-19 ಪ್ರಕರಣಗಳ ಮಧ್ಯೆ ಮ್ಯಾರಥಾನ್ನಲ್ಲಿ ಭಾಗವಹಿಸಿರುವವರ ಬೃಹತ್ ಗುಂಪು ಮುಖವಾಡಗಳಿಲ್ಲದೆ ಓಡಾಡಿರುವುದು ಕಂಡುಬಂದಿದೆ.
ಮ್ಯಾರಥಾನ್ ಪ್ರಾರಂಭವಾದಾಗ ಮುಂಭಾಗದಲ್ಲಿದ್ದ ಕೆಲವು ಮಹಿಳೆಯರು ಮುಗ್ಗರಿಸಿ ನೆಲಕ್ಕೆ ಬಿದ್ದಿದ್ದಾರೆ. ಹಿಂದಿನಿಂದ ಹೆಚ್ಚಿನ ಜನಸಂದಣಿ ಮುಂಭಾಗದಲ್ಲಿದ್ದವರನ್ನು ಲೆಕ್ಕಿಸಿದ ಮುಂದೆ ಓಡಿ ಹೋಗಿದ್ದು ಕಂಡುಬಂದಿದೆ. ಇದರಿಂದ ನೂಕುನುಗ್ಗಲು ಆಗಿ ಮಹಿಳೆಯರು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ. ಪರಿಸ್ಥಿತಿಯು ಬಹುತೇಕ ಮಹಿಳೆಯರ ಕಾಲ್ತುಳಿತಕ್ಕೆ ಕಾರಣವಾಯಿತು. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಕಾಂಗ್ರೆಸ್ ನಾಯಕಿ ಮತ್ತು ಬರೇಲಿ ಮಾಜಿ ಮೇಯರ್ ಸುಪ್ರಿಯಾ ಅರೋನ್, ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ. "ಇದು ತುಂಬಾ ಅಮಾನವೀಯ ವಿಷಯ. ಇವರಲ್ಲಿ ಕೆಲವರು ಶಾಲಾಮಕ್ಕಳು. ಆದರೆ ಇವರಿಂದ ಯಾವುದೇ ಕಾರಣಕ್ಕೂ ಯಾರಿಗಾದರೂ ಮನನೊಂದಿದ್ದರೆ, ಕಾಂಗ್ರೆಸ್ ಪರವಾಗಿ ನಾನು ಕ್ಷಮೆಯಾಚಿಸಲು ಬಯಸುತ್ತೇನೆ" ಎಂದು ಎಂಎಸ್ ಆರಾನ್ ಹೇಳಿದ್ದಾರೆ.
COVID-19 ಜೊತೆಗೆ ವೇಗವಾಗಿ ಹರಡುತ್ತಿರುವ Omicron ಮಧ್ಯೆ ಪಂಜಾಬ್ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳ ಚುನಾವಣೆ ಪ್ರಚಾರಗಳು ನಡೆದಿವೆ. ಅಲ್ಲಿ ರಾಜಕೀಯ ಪಕ್ಷಗಳು ರ್ಯಾಲಿಗಳನ್ನು ನಡೆಸುವುದನ್ನು ಮುಂದುವರೆಸಿವೆ. ಆದರೂ ಕಟ್ಟುನಿಟ್ಟಾದ COVID-19 ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಿ ಚುನಾವಣೆಗಳನ್ನು ನಡೆಸಬೇಕೆಂದು ರಾಜಕೀಯ ಪಕ್ಷಗಳು ಬಯಸುತ್ತವೆ ಎಂದು ಚುನಾವಣಾ ಆಯೋಗ ಹೇಳಿದೆ. ಉತ್ತರಪ್ರದೇಶದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಸಾಕಷ್ಟು ಕಸರತ್ತು ನಡೆಸಿದೆ. ಕಾಂಗ್ರೆಸ್ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ದೃಷ್ಟಿಯಿಂದ ಲಿಂಗ ಸಮಾನತೆಯತ್ತ ಗಮನ ಹರಿಸುತ್ತಿದೆ. ಹತ್ರಾಸ್ನಲ್ಲಿ ದಲಿತ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಮತ್ತು ಉನ್ನಾವ್ನಲ್ಲಿನ ಪ್ರಕರಣ ಸೇರಿದಂತೆ ಕೆಲ ಪ್ರಕರಣಗಳು ದೇಶದಾದ್ಯಂತ ಆಕ್ರೋಶವನ್ನು ಕೆರಳಿಸಿತು. ಇವುಗಳನ್ನು ರಾಜಕೀಯ ಅಸ್ತ್ರವನ್ನಾಗಿಸಲು ನೋಡಲಾಗುತ್ತಿದೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳೆದ ತಿಂಗಳು "ಲಡ್ಕಿ ಹೂಂ, ಲಾಡ್ ಸಕ್ತಿ ಹೂಂ" ಚುನಾವಣಾ ಘೋಷಣೆಯನ್ನು ಮೊದಲು ಮಾಡಿದರು. ರಾಜಕೀಯವಾಗಿ ನಿರ್ಣಾಯಕವಾಗಿರುವ ರಾಜ್ಯದಲ್ಲಿ ಬಿಜೆಪಿ ಕೂಡ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು 16 ಲಕ್ಷಕ್ಕೂ ಅಧಿಕ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 1,000 ಕೋಟಿಗೂ ಹೆಚ್ಚು ಹಣವನ್ನು ವರ್ಗಾಯಿಸುವ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ.

Shocking visuals from Bareilly, #UttarPradesh!!
— Priti Gandhi - प्रीति गांधी (@MrsGandhi) January 4, 2022
A stampede like situation has occurred at the Congress marathon. Several girls fell & have been hurt. Thankfully no lives were lost. Is it right to play with human lives to fulfill your political ambitions, @priyankagandhi ji?? pic.twitter.com/lkWXYrKDbw
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications