ಪ್ರಿಯಾಂಕಾ ಗಾಂಧಿ ಎದುರಲ್ಲೇ 'ಕೈ' ಕಾರ್ಯಕರ್ತರು ಹೀಗೆ ವರ್ತಿಸುವುದೇ?
ಲಕ್ನೋ, ಜನವರಿ.04: ಕಾಂಗ್ರೆಸ್ ಜನರಲ್ ಸೆಕ್ರಟರಿ ಪ್ರಿಯಾಂಕಾ ವಾದ್ರಾ ಎದುರಿನಲ್ಲೇ ಪಕ್ಷದ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ವರ್ತನೆಗೆ ಹೈಕಮಾಂಡ್ ನಾಯಕಿಯಲ್ಲೇ ಅಚ್ಚರಿ ಹುಟ್ಟಿಸಿದೆ.
ಉತ್ತರ ಪ್ರದೇಶ ಮೀರತ್ ನ ಪರ್ತಾರ್ ಪುರ್ ಗೆ ಎಐಸಿಸಿ ಜನರಲ್ ಸೆಕ್ರಟರಿ ಪ್ರಿಯಾಂಕಾ ವಾದ್ರಾ ಭೇಟಿ ನೀಡಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕಿತ್ತಾಡಿಕೊಂಡ ಘಟನೆ ನಡೆದಿದ್ದು, ಗಲಾಟೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇವರು ಒಪ್ಪುವುದಿಲ್ಲ, ಅವರು ಬಿಡುವುದಿಲ್ಲ ಏನಿದು CAA-NRC ಹೋರಾಟ?
ಕಳೆದ ಡಿಸೆಂಬರ್.20ರಂದು ಉತ್ತರಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ಉಗ್ರ ಹೋರಾಟ ನಡೆದಿತ್ತು. ಅಂದು ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಹಾಗೂ ಗಂಭೀರವಾಗಿ ಗಾಯಗೊಂಡವರ ಮನೆಗೆ ಪ್ರಿಯಾಂಕಾ ವಾದ್ರಾ ಭೇಟಿ ನೀಡಿದರು.
#WATCH Meerut: Scuffle broke out between Congress workers during Priyanka Gandhi’s visit in Partapur, earlier today. She was there to meet the families of the victims of the violence that broke out during protests against #CitizenshipAmendmentAct on Dec 20. pic.twitter.com/7UBpZtBNta
— ANI UP (@ANINewsUP) January 4, 2020
ಕೈ ಕೈ ಮಿಲಾಯಿಸಿದ ಕೈ ಕಾರ್ಯಕರ್ತರು
ಮುಜಾಫರ್ ನಗರದ ನೂರಾ ಎಂಬ ವ್ಯಕ್ತಿಯ ಮನೆಗೆ ಭೇಟಿ ನೀಡಿದ ಪ್ರಿಯಾಂಕಾ, ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದರು. ಇನ್ನೊಂದೆಡೆ ಪೊಲೀಸರು ನಡೆಸಿ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ರುಖೈಯಾ ಪರ್ವೀನಾ ಮನೆಗೂ ಪ್ರಿಯಾಂಕಾ ವಾದ್ರಾ ಭೇಟಿ ನೀಡಿದ್ದರು. ಇದರ ಮಧ್ಯೆ ಪರ್ತಾರ್ ಪುರ್ ನಲ್ಲಿ ಕಾರ್ಯಕರ್ತರ ಜೊತೆಗಿನ ಮಾತುಕತೆ ವೇಳೆ ಪಕ್ಷದ ಕಾರ್ಯಕರ್ತರೇ ಪರಸ್ಪರ ಕಿತ್ತಾಡಿಕೊಂಡಿರುವ ಘಟನೆ ನಡೆಯಿತು.