Just in: ಮಕ್ಕಳ ಬಿಸಿಯೂಟ ಯೋಜನೆ, 11 ಕೋಟಿ ವಂಚಿಸಿದ ಶಿಕ್ಷಕ!
ಆಗ್ರಾ, ಆ.03: ಮಧ್ಯಾಹ್ನದ ಬಿಸಿಯೂಟ (Mid-Day Meal) ಯೋಜನೆಯ 11.46 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಪ್ರಾಂಶುಪಾಲರೊಬ್ಬರ ವಿರುದ್ಧ ಭ್ರಷ್ಟಾಚಾರದ ಪ್ರಕರಣ ದಾಖಲಿಸಲಾಗಿದೆ.
ಫಿರೋಜಾಬಾದ್ನ ಬೇಸಿಕ್ ಎಜುಕೇಶನ್ ಇಲಾಖೆಯಡಿಯಲ್ಲಿ ಬರುವ ಶಾಲೆಯ ಪ್ರಾಂಶುಪಾಲರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಂಶುಪಾಲ ನಕಲಿ ದಾಖಲೆಗಳನ್ನು ಬಳಸಿ ಸರ್ಕಾರೇತರ ಸಂಸ್ಥೆ (ಎನ್ಜಿಒ) ಎಂದು ನೋಂದಾಯಿಸಿದ್ದಾರೆ.

ಬ್ಯಾಂಕ್ಗಳ ಅಧಿಕಾರಿಗಳು ಮತ್ತು ಅವರ ಸಿಬ್ಬಂದಿಯ ಸಹಾಯದಿಂದ 11.46 ಕೋಟಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಹಣವನ್ನು ತೆಗೆದುಕೊಂಡು ಬಳಸಿದ್ದಾರೆ ಎಂದು ಆಗ್ರಾದ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
"ಫಿರೋಜಾಬಾದ್ ಜಿಲ್ಲೆಯ ಮೂಲ ಶಿಕ್ಷಣ ಇಲಾಖೆಯ ಶಿಕ್ಷಕ ಚಂದ್ರಕಾಂತ್ ಶರ್ಮಾ ವಿರುದ್ಧ ಭ್ರಷ್ಟಾಚಾರದ ಪ್ರಕರಣ ದಾಖಲಾಗಿದೆ. ಅವರು ಫಿರೋಜಾಬಾದ್ ಜಿಲ್ಲೆಯ ಶಿಕೋಹಾಬಾದ್ ನಿವಾಸಿಯಾಗಿದ್ದಾರೆ. ಫಿರೋಜಾಬಾದ್ ಜಿಲ್ಲೆಯ ತುಂಡ್ಲಾದ ಜಾಜುಪುರದ ಪ್ರಾಥಮಿಕ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದಾರೆ" ಎಂದು ಪೊಲೀಸ್ ವರಿಷ್ಠಾಧಿಕಾರಿ (ವಿಜಿಲೆನ್ಸ್) ಅಲೋಕ್ ಶರ್ಮಾ ಹೇಳಿದ್ದಾರೆ.
ಜುಲೈ 27 ರಂದು ಆಗ್ರಾದ ವಿಜಿಲೆನ್ಸ್ ಪೊಲೀಸ್ ಠಾಣೆಯಲ್ಲಿ ಮೂಲ ಶಿಕ್ಷಣ ಇಲಾಖೆ ಮತ್ತು ಬ್ಯಾಂಕ್ಗಳ ಇತರ ಕೆಲವು ಉದ್ಯೋಗಿಗಳು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.
"ಫಿರೋಜಾಬಾದ್ನ ಶಿಕೋಹಾಬಾದ್ನಲ್ಲಿ ನೋಂದಣಿಯಾಗಿರುವ ಎನ್ಜಿಒ 'ಸರಸ್ವತ್ ಅವಾಸಿಯ ಶಿಕ್ಷಾ ಸೇವಾ ಸಮಿತಿ' ಮೂಲಕ ಚಂದ್ರಕಾಂತ್ ಶರ್ಮಾ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಹಣವನ್ನು ವಂಚಿಸಿದ್ದಾರೆ. 2007 ರಲ್ಲಿ ಈ ಸಂಸ್ಥೆ ನೋಂದಾಯಿಸಲ್ಪಟ್ಟಿದೆ. ಎನ್ಜಿಒ ಎಂದು ನೋಂದಾಯಿಸಲು ನಕಲಿ ಪಡಿತರ ಚೀಟಿ ಮತ್ತು ಐಡಿ ಕಾರ್ಡ್ಗಳನ್ನು ಬಳಸಿದ್ದಾರೆ" ಎಂದು ಅಲೋಕ್ ಶರ್ಮಾ ಹೇಳಿದ್ದಾರೆ.
ಪ್ರಥಮ ಮಾಹಿತಿ ವರದಿ (ಎಫ್ಐಆರ್) ಪ್ರಕಾರ, ಶಿಕ್ಷಕ ತನ್ನ ತಂದೆಯನ್ನು ಎನ್ಜಿಒ ಅಧ್ಯಕ್ಷರನ್ನಾಗಿ, ಅವರ ತಾಯಿಯನ್ನು ಮ್ಯಾನೇಜರ್ ಮತ್ತು ಕಾರ್ಯದರ್ಶಿಯನ್ನಾಗಿ ಮತ್ತು ಆತನ ಪತ್ನಿಯನ್ನು ಖಜಾಂಚಿಯನ್ನಾಗಿ ಮಾಡಿದ್ದಾರೆ. NGO ನಲ್ಲಿ ಇತರ ಸ್ಥಾನಗಳನ್ನು ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಹೆಸರಿನಲ್ಲಿವೆ.
ಇಷ್ಟೇ ಅಲ್ಲದೆ ಆರೋಪಿಯು ತಮ್ಮ ತಾಯಿ ಸೇರಿದಂತೆ ಕೆಲವು ಎನ್ಜಿಒ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications