ಸೈಕಲ್ನಲ್ಲಿ ಬಂತು ಕೊರೊನಾ ಲಸಿಕೆ; ಪೂರ್ವಸಿದ್ಧತೆ ಬಗ್ಗೆಯೇ ಅನುಮಾನ
ಲಕ್ನೋ, ಜನವರಿ 06: ಕೊರೊನಾ ವೈರಸ್ ಲಸಿಕೆ ನೀಡಲು ದೇಶದೆಲ್ಲೆಡೆ ತಯಾರಿ ನಡೆಯುತ್ತಿದೆ. ಉತ್ತರ ಪ್ರದೇಶದಲ್ಲಿಯೂ ಲಸಿಕೆಗೆ ಪೂರ್ವಸಿದ್ಧತೆ ನಡೆದಿದ್ದು, ಲಸಿಕೆಯ ಡ್ರೈ ರನ್ ಕೂಡ ನಡೆದಿದೆ. ಇದೇ ಸಂದರ್ಭ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಈ ಸಂಗತಿ ಗಮನ ಸೆಳೆದಿದೆ.
ಸೈಕಲ್ ನಲ್ಲಿ ಆಸ್ಪತ್ರೆಗೆ ಕೊರೊನಾ ಲಸಿಕೆಗಳನ್ನು ಪೂರೈಸಿರುವುದು ಲಸಿಕೆ ಪೂರೈಕೆಗೆ ಸರ್ಕಾರದ ಪೂರ್ವಸಿದ್ಧತೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕೊರೊನಾ ಲಸಿಕೆಗಳ ಪೂರೈಕೆಯಡೆಗೆ ನಿರ್ಲಕ್ಷ್ಯ ವಹಿಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ. ಮುಂದೆ ಓದಿ...

ಚೌಕಾಘಾಟ್ ನ ಆಸ್ಪತ್ರೆಗೆ ಸೈಕಲ್ ನಲ್ಲಿ ಲಸಿಕೆ ಪೂರೈಕೆ
ವಾರಾಣಸಿಯ ಚೌಕಾಘಾಟ್ ನ ಮಹಿಳಾ ಆಸ್ಪತ್ರೆಗೆ ಹೀಗೆ ಸೈಕಲ್ ಮೇಲೆ ಲಸಿಕೆಗಳನ್ನು ಪೂರೈಸಲಾಗಿದೆ. ನೌಕರ ಈ ಲಸಿಕೆಗಳನ್ನು ಸೈಕಲ್ ಮೇಲೆ ಸಾಗಿಸುತ್ತಿದ್ದ ದೃಶ್ಯ ಕಂಡುಬಂದಿದೆ. ಈ ಕುರಿತು ವಾರಾಣಸಿ ಮುಖ್ಯ ವೈದ್ಯಾಧಿಕಾರಿ ಡಾ.ವಿ.ಬಿ ಸಿಂಗ್ ಅವರನ್ನು ಪ್ರಶ್ನಿಸಿದಾಗ, "ಐದು ಕೇಂದ್ರಗಳಿಗೆ ವ್ಯಾನ್ ಗಳ ಮೂಲಕ ಲಸಿಕೆಗಳನ್ನು ಪೂರೈಸಲಾಗಿದೆ. ಚೌಕಾಘಾಟ್ ನ ಮಹಿಳಾ ಆಸ್ಪತ್ರೆಗೆ ಮಾತ್ರ ಸೈಕಲ್ ಮೂಲಕ ಪೂರೈಸಲಾಗಿದೆ" ಎಂದು ತಿಳಿಸಿದ್ದಾರೆ.

ಭದ್ರತೆಗೆ ಪೊಲೀಸ್ ಸಿಬ್ಬಂದಿ ನಿಯೋಜನೆ
ಸೈಕಲ್ ಮೂಲಕ ಕೊರೊನಾ ಲಸಿಕೆ ಸಾಗಿಸುವ ಸಂದರ್ಭ ಪೊಲೀಸ್ ಸಿಬ್ಬಂದಿಯನ್ನೂ ಭದ್ರತೆಗೆ ನಿಯೋಜಿಸಲಾಗಿತ್ತು. ಆದರೆ ಲಸಿಕೆಯನ್ನು ಹೀಗೆ ಸೈಕಲ್ ನಲ್ಲಿ ಏಕೆ ಸಾಗಿಸಲಾಗಿದೆ? ಬೇರೆ ವಾಹನ ವ್ಯವಸ್ಥೆಯನ್ನು ಏಕೆ ಮಾಡಿಲ್ಲ ಎಂಬ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ.

ಸಿದ್ಧತೆ ಬಗ್ಗೆ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿಕೆ
ಕಳೆದ ಸೋಮವಾರ, ಲಸಿಕೆ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಎಲ್ಲಾ ಅಗತ್ಯ ಕ್ರಮ ಹಾಗೂ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ತಿಳಿಸಿದ್ದರು. ಪ್ರತಿ ಜಿಲ್ಲೆಯಲ್ಲಿಯೂ ಲಸಿಕೆಯ ಡ್ರೈರನ್ ಕೂಡ ಮಾಡಲಾಗಿತ್ತು. ಆದರೆ ಸೈಕಲ್ ಮೇಲೆ ಕೊರೊನಾ ಲಸಿಕೆಗಳನ್ನು ಪೂರೈಸಿರುವುದಕ್ಕೆ ಸೂಕ್ತ ಕಾರಣಗಳು ಇಲ್ಲದ ಕಾರಣ ಹಲವು ಆಕ್ಷೇಪಗಳು ವ್ಯಕ್ತಗೊಂಡಿವೆ.

ರಾಜ್ಯದ ಹಲವೆಡೆ ಲಸಿಕೆಯ ಡ್ರೈ ರನ್
ರಾಜ್ಯದ ಕೆಜಿಎಂಯು, ಪಿಜಿಐ, ಲೋಹಿಯಾ ಇನ್ ಸ್ಟಿಟ್ಯೂಟ್, ರಾಮ್ ಸಾಗರ್ ಮಿಶ್ರಾ ಆಸ್ಪತ್ರೆ, ಲೋಕ ಬಂಧು ಆಸ್ಪತ್ರೆ, ಅಲಹಾಬಾದ್, ಇಂದಿರಾ ನಗರ ಮುಂತಾದೆಡೆಗಳಲ್ಲಿ ಲಸಿಕೆಯ ಡ್ರೈರನ್ ಮಾಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕೊರೊನಾ ಲಸಿಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ರಾಜ್ಯ ಲಸಿಕೆ ಕಾರ್ಯಕ್ರಮಕ್ಕೆ ಸಿದ್ಧವಾಗಿದೆ ಎಂದು ಸಿಎಂ ಯೋಗಿ ಆದಿತ್ಯಾನಾಥ್ ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications