ದಲಿತರ ಮತ ಗೆಲ್ಲಲು ಬಿಜೆಪಿಯಿಂದ ಮತ್ತೊಂದು ಪ್ರತಿಮೆ ಸ್ಥಾಪನೆ!
ಲಕ್ನೋ, ಜನವರಿ 01 : ಲೋಕಸಭೆ ಚುನಾವಣೆ ೨೦೧೯ ಹತ್ತಿರವಾಗುತ್ತಿದ್ದಂತೆ, ಪ್ರತಿಮೆ ಸ್ಥಾಪನೆ ರಾಜಕೀಯ ಜೋರಾಗುತ್ತಿದೆ. ಉತ್ತರಪ್ರದೇಶದ ವೀರ ವನಿತೆ, ಬ್ರಿಟಿಷರ ಪಾಲಿಗೆ ಸಿಂಹಸ್ವಪ್ನವಾಗಿದ್ದ ದಲಿತ ಮಹಿಳೆ, ಸ್ವಾತಂತ್ರ್ಯ ಹೋರಾಟಗಾರ್ತಿ ಉದಾ ದೇವಿ ಅವರ ಪ್ರತಿಮೆ ಸ್ಥಾಪನೆಗೆ ಬಿಜೆಪಿ ಸರ್ಕಾರವು ಮುಂದಾಗಿದೆ.
ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು, ಪಾಸಿ ಸಮುದಾಯದ ವೀರ ಮಹಿಳೆಯ ಹೆಸರಿನಲ್ಲಿ ಸುಮಾರು 100 ಅಡಿ ಎತ್ತರದ ಪ್ರತಿಮೆ, ಸ್ಮಾರಕ, ಪಾರ್ಕ್ ನಿರ್ಮಿಸುವುದಾಗಿ ಘೋಷಿಸಿದೆ. 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಉದಾದೇವಿ ಅವರು ದಿಟ್ಟ ಹೋರಾಟ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
2014ರ ಲೋಕಸಭೆ ಚುನಾವಣೆ ಹಾಗೂ 2017ರ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಾಸಿ ಸಮುದಾಯದ ಮತಗಳು ನಿರ್ಣಾಯಕವಾಗಿತ್ತು. 71 ಮಂದಿ ಬಿಜೆಪಿ ಲೋಕಸಭಾ ಸದಸ್ಯರ ಪೈಕಿ 6 ಮಂದಿ ಪಾಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 310 ವಿಧಾನಸಭಾ ಸದಸ್ಯರ ಪೈಕಿ 23 ಮಂದಿ ಈ ಸಮುದಾಯದವರಿದ್ದಾರೆ.

1990ರಲ್ಲಿ ಕಲ್ಯಾಣ್ ಸಿಂಗ್ ಸರ್ಕಾರವು ಉದಾದೇವಿ ಅವರ ಹೋರಾಟವನ್ನು ಸ್ಮರಿಸಿ ಪ್ರತಿಮೆ, ಸ್ಮಾರಕ ನಿರ್ಮಿಸಿದೆ. ಆದರೆ, ಈಗ ಬೃಹತ್ ಪ್ರತಿಮೆಯನ್ನು ಲಕ್ನೋದಲ್ಲಿ ಸ್ಥಾಪಿಸಲಾಗುವುದು ಎಂದು ಮೋಹನ್ ಲಾಲ್ ಗಂಜ್ ನ ಸಂಸದ ಕೌಶಲ್ ಕಿಶೋರ್ ಅವರು ಬಿಜೆಪಿಯ ಪರಿಶಿಷ್ಟ ಜಾತಿ ಮೋರ್ಚಾದ ಸಮಾರಂಭದಲ್ಲಿ ಮಾತನಾಡಿ, ಪ್ರತಿಮೆ ನಿರ್ಮಾಣಕ್ಕಾಗಿ ಪಾಸಿ ಸಮುದಾಯದವರು ಕಬ್ಬಿಣ ದಾನ ಮಾಡುವಂತೆ ಕೋರಿದರು.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications