ದಲಿತರ ಮತ ಗೆಲ್ಲಲು ಬಿಜೆಪಿಯಿಂದ ಮತ್ತೊಂದು ಪ್ರತಿಮೆ ಸ್ಥಾಪನೆ!
ಲಕ್ನೋ, ಜನವರಿ 01 : ಲೋಕಸಭೆ ಚುನಾವಣೆ ೨೦೧೯ ಹತ್ತಿರವಾಗುತ್ತಿದ್ದಂತೆ, ಪ್ರತಿಮೆ ಸ್ಥಾಪನೆ ರಾಜಕೀಯ ಜೋರಾಗುತ್ತಿದೆ. ಉತ್ತರಪ್ರದೇಶದ ವೀರ ವನಿತೆ, ಬ್ರಿಟಿಷರ ಪಾಲಿಗೆ ಸಿಂಹಸ್ವಪ್ನವಾಗಿದ್ದ ದಲಿತ ಮಹಿಳೆ, ಸ್ವಾತಂತ್ರ್ಯ ಹೋರಾಟಗಾರ್ತಿ ಉದಾ ದೇವಿ ಅವರ ಪ್ರತಿಮೆ ಸ್ಥಾಪನೆಗೆ ಬಿಜೆಪಿ ಸರ್ಕಾರವು ಮುಂದಾಗಿದೆ.
ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು, ಪಾಸಿ ಸಮುದಾಯದ ವೀರ ಮಹಿಳೆಯ ಹೆಸರಿನಲ್ಲಿ ಸುಮಾರು 100 ಅಡಿ ಎತ್ತರದ ಪ್ರತಿಮೆ, ಸ್ಮಾರಕ, ಪಾರ್ಕ್ ನಿರ್ಮಿಸುವುದಾಗಿ ಘೋಷಿಸಿದೆ. 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಉದಾದೇವಿ ಅವರು ದಿಟ್ಟ ಹೋರಾಟ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
2014ರ ಲೋಕಸಭೆ ಚುನಾವಣೆ ಹಾಗೂ 2017ರ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಾಸಿ ಸಮುದಾಯದ ಮತಗಳು ನಿರ್ಣಾಯಕವಾಗಿತ್ತು. 71 ಮಂದಿ ಬಿಜೆಪಿ ಲೋಕಸಭಾ ಸದಸ್ಯರ ಪೈಕಿ 6 ಮಂದಿ ಪಾಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 310 ವಿಧಾನಸಭಾ ಸದಸ್ಯರ ಪೈಕಿ 23 ಮಂದಿ ಈ ಸಮುದಾಯದವರಿದ್ದಾರೆ.

1990ರಲ್ಲಿ ಕಲ್ಯಾಣ್ ಸಿಂಗ್ ಸರ್ಕಾರವು ಉದಾದೇವಿ ಅವರ ಹೋರಾಟವನ್ನು ಸ್ಮರಿಸಿ ಪ್ರತಿಮೆ, ಸ್ಮಾರಕ ನಿರ್ಮಿಸಿದೆ. ಆದರೆ, ಈಗ ಬೃಹತ್ ಪ್ರತಿಮೆಯನ್ನು ಲಕ್ನೋದಲ್ಲಿ ಸ್ಥಾಪಿಸಲಾಗುವುದು ಎಂದು ಮೋಹನ್ ಲಾಲ್ ಗಂಜ್ ನ ಸಂಸದ ಕೌಶಲ್ ಕಿಶೋರ್ ಅವರು ಬಿಜೆಪಿಯ ಪರಿಶಿಷ್ಟ ಜಾತಿ ಮೋರ್ಚಾದ ಸಮಾರಂಭದಲ್ಲಿ ಮಾತನಾಡಿ, ಪ್ರತಿಮೆ ನಿರ್ಮಾಣಕ್ಕಾಗಿ ಪಾಸಿ ಸಮುದಾಯದವರು ಕಬ್ಬಿಣ ದಾನ ಮಾಡುವಂತೆ ಕೋರಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications