ಡಿಯೋರಿಯಾ: ಬಸ್ ಮತ್ತು ಬೊಲೆರೋ ಡಿಕ್ಕಿ- ಆರು ಮಂದಿ ಸಾವು, ಹಲವರಿಗೆ ಗಾಯ
ಡಿಯೋರಿಯಾ ಏಪ್ರಿಲ್ 19: ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ರಸ್ತೆ ಅಪಘಾತ ಸಂಭವಿಸಿ ಆರು ಜನ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಬಸ್ ಮತ್ತು ಬೊಲೆರೋ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.
ಡಿಯೋರಿಯಾ ಜಿಲ್ಲೆಯ ರುದ್ರಪುರ-ಗೌರಿಬಜಾರ್ ರಸ್ತೆಯಲ್ಲಿ ಪನಾಹಾ ಮತ್ತು ಇಂದೂಪುರ್ ನಡುವೆ ಈ ನೋವಿನ ಅಪಘಾತ ಸಂಭವಿಸಿದೆ. ಸಂತ್ರಸ್ತರು ಕುಶಿನಗರ ಜಿಲ್ಲೆಯ ಕೊಹ್ರಾ ಗ್ರಾಮದ ರವೀಂದ್ರ ತಿವಾರಿ ಅವರ ಮನೆಯಿಂದ ಡಿಯೋರಿಯಾದ ಗೌರಿಬಜಾರ್ನ ರಾಮನಗರ ಗ್ರಾಮಕ್ಕೆ ತೆರಳುತ್ತಿದ್ದರು. ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ಬೊಲೆರೊ ವಾಹನಕ್ಕೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ಮಾಹಿತಿ ತಿಳಿದ ಪೊಲೀಸರು ಎಲ್ಲಾ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬೊಲೆರೋ ಸ್ಫೋಟಗೊಂಡಿದೆ. ನಂತರ ಬಸ್ ಸ್ಥಳದಲ್ಲೇ ಪಲ್ಟಿಯಾಗಿದೆ. ಈ ಅವಘಡದ ನಂತರ ಸ್ಥಳದಲ್ಲೇ ಕೆಲವರು ಪ್ರಾಣ ಬಿಟ್ಟಿದ್ದಾರೆ. ಅದೇ ವೇಳೆ ಅಪಘಾತದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬೊಲೆರೊ ಹಾಗೂ ಬಸ್ನಲ್ಲಿದ್ದ ಕೆಲವರು ಸಿಕ್ಕಿಹಾಕಿಕೊಂಡಿದ್ದು, ಗ್ಯಾಸ್ ಕಟ್ಟರ್ ಬಳಸಿ ಅವರನ್ನು ಹೊರತರಬೇಕಾಯಿತು. ಮೃತರಲ್ಲಿ ಐವರು ಬೊಲೆರೋ ಸವಾರರು ಹಾಗೂ ಓರ್ವ ಬಸ್ ಪ್ರಯಾಣಿಕರು ಸೇರಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತರೆಲ್ಲರ ಮೃತದೇಹಗಳನ್ನು ಪೊಲೀಸರು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದೇ ವೇಳೆ ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಕರ ಅಪಘಾತದ ಬಗ್ಗೆ ಮಾಹಿತಿ ಪಡೆದ ಡಿಐಜಿ ಡಾ.ಶ್ರೀಪತಿ ಮಿಶ್ರಾ, ಡಿಎಂ ಜಿತೇಂದ್ರ ಪ್ರತಾಪ್ ಸಿಂಗ್ ಮತ್ತು ಸಿಎಂಒ ಡಾ.ಅಲೋಕ್ ಕುಮಾರ್ ಪಾಂಡೆ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಧಿಕಾರಿಗಳು ಗಾಯಾಳುಗಳ ರಕ್ಷಣೆ ಹಾಗೂ ಉತ್ತಮ ಚಿಕಿತ್ಸೆ ನೀಡುವಂತೆ ತಿಳಿಸಿದ್ದಾರೆ. ಜೊತೆಗೆ ಈ ಅಪಘಾತದ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ. ಇದಲ್ಲದೇ ಮೃತರ ಕುಟುಂಬಕ್ಕೆ ಸಿಎಂ ಸಾಂತ್ವನ ಹೇಳಿದ್ದಾರೆ.












Click it and Unblock the Notifications