ಆಮ್ಲಜನಕವಿಲ್ಲದೇ ರೋಗಿಗಳು ಸಾವನ್ನಪ್ಪುತ್ತಿರುವುದು ಯಾವ ನರಮೇಧಕ್ಕೂ ಕಡಿಮೆಯಲ್ಲ; ಹೈಕೋರ್ಟ್

ಅಲಹಾಬಾದ್, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯ ಎಂದಿರುವ ಅಲಹಾಬಾದ್ ಹೈಕೋರ್ಟ್, ಈ ಸಾವುಗಳು ನರಮೇಧ ಎಂದು ಕೇಂದ್ರಕ್ಕೆ ತರಾಟೆ ತೆಗೆದುಕೊಂಡಿದೆ.

ಉತ್ತರ ಪ್ರದೇಶದ ಮೀರತ್ ಹಾಗೂ ಲಖ್ನೋ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ರೋಗಿಗಳು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇವುಗಳ ಕುರಿತು ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕ್ವಾರಂಟೈನ್ ಕೇಂದ್ರಗಳ ಪರಿಸ್ಥಿತಿ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಹಾಗೂ ಅಜಿತ್ ಕುಮಾರ್ ಅವರು ಈ ಕುರಿತು ತನಿಖೆಗೆ ಆದೇಶಿಸಿದ್ದಾರೆ.

Death of Covid Patients By Oxygen Shortage Is Like Genocide Says Allahabad HC

ಆಮ್ಲಜನಕವಿಲ್ಲದೇ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ತುಂಬಾ ದುಃಖದ ಸಂಗತಿ. ಇದು ಅಪರಾಧ ಕೃತ್ಯ. ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದು ಅಧಿಕಾರಿಗಳು ನಡೆಸಿದ ನರಮೇಧ ಎಂದು ನ್ಯಾಯಾಲಯ ಕಟುವಾಗಿ ಟೀಕಿಸಿದೆ.

"ನಮ್ಮ ಜನರನ್ನು ಈ ರೀತಿ ಸಾಯಲು ಹೇಗೆ ಬಿಡಲು ಸಾಧ್ಯ? ವಿಜ್ಞಾನ ಇಷ್ಟು ಮುಂದುವರೆದಿರುವ ಇಂಥ ದಿನಗಳಲ್ಲಿಯೂ ಇಂಥ ಸಮಸ್ಯೆಗಳನ್ನು ನಿವಾರಿಸಿಲ್ಲವೆಂದರೆ ಹೇಗೆ?" ಎಂದು ಪ್ರಶ್ನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+