ಎರಡನೇ ಕಿಮ್ ಜಾಂಗ್ ಬೇಕೆ, ನೀವೇ ನಿರ್ಧರಿಸಬೇಕು: ಟಿಕಾಯತ್

ಲಖಿಂಪುರ, ಫೆಬ್ರವರಿ 15:ಬಿಜೆಪಿ ವಿರುದ್ಧ ರೈತ ನಾಯಕ ರಾಕೇಶ್ ಟಿಕಾಯತ್ ವಾಗ್ದಾಳಿ ನಡೆಸಿದ್ದಾರೆ, ಉತ್ತರ ಕೊರಿಯಾ ಆಡಳಿತವನ್ನು ಉಲ್ಲೇಖಿಸಿರುವ ಅವರು, ಮತದಾರರು ಎರಡನೇ ಕಿಮ್ ಜಾಂಗ್‌ ಉನ್ ಬೇಕೆ ಎಂದು ನಿರ್ಧರಿಸಬೇಕು ಎಂದು ಹೇಳಿದ್ದಾರೆ.

ಜನಸಾಮಾನ್ಯರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಹಾಗೂ ಪ್ರಧಾನಿ ಬೇಕೆ ಅಥವಾ ಅವರಿಗೆ ಉತ್ತರ ಕೊರಿಯಾ ಎರಡನೇ ಕಿಮ್ ಜಾಂಗ್‌ನಂತಹ ಸರ್ವಾಧಿಕಾರಿ ಬೇಕೆ ಎಂಬುದನ್ನು ಜನರು ನಿರ್ಧರಿಸಬೇಕು.

ನಮಗೆ ಯಾವುದೇ ರಾಜ್ಯದಲ್ಲಿ ಸರ್ವಾಧಿಕಾರಿ ಸರ್ಕಾರ ಬೇಡ, ಜನರು ತಮ್ಮ ಮತಗಳನ್ನು ಬುದ್ಧಿವಂತಿಕೆಯಿಂದ ಬಳಸಿಕೊಳ್ಳಲು ನಾವು ಮನವಿ ಮಾಡಲು ಬಯಸುತ್ತೇವೆ ಎಂದು ಹೇಳಿದರು.

Do People Want Second Kim Jong?: Farmer Leaders Dig At BJP Amid Polls

ಪಶ್ಚಿಮ ಉತ್ತರ ಪ್ರದೇಶ ಅಭಿವೃದ್ಧಿ ಬಗ್ಗೆ ಮಾತನಾಡಿದ ಅವರು, ಹಿಂದೂ, ಮುಸ್ಲಿಂ, ಜಿನ್ನಾ, ಧರ್ಮದ ಬಗ್ಗೆ ಮಾತನಾಡುವವರು ಮತಗಳನ್ನು ಕಳೆದುಕೊಳ್ಳುತ್ತಾರೆ. ಮುಜಫರ್‌ನಗರ ಹಿಂದೂ ಮುಸ್ಲಿಂ ಪಂದ್ಯಗಳ ಕ್ರೀಡಾಂಗಣವಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ರೈತ ನಾಯಕ ಚುನಾವಣಾ ಕಾಲದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

ಮತದಾರರು ರೈತರ ವಿರುದ್ಧ ಅಲ್ಲದವರಿಗೆ ಒಲವು ತೋರುತ್ತಾರೆ ಎಂದು ನಾನು ಭಾವಿಸುತ್ತೇನೆ, ಅವರು ಹಿಂದೂ ಮತ್ತು ಮುಸ್ಲಿಂ ಮತದಾರರನ್ನು ಧ್ರುವೀಕರಿಸದವರಿಗೆ ಬೆಂಬಲ ನೀಡುತ್ತಾರೆ, ಜನರು ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುವವರನ್ನು ಬೆಂಬಲಿಸುತ್ತಾರೆ ಎಂದು ಹೇಳಿದ್ದಾರೆ.

ತಮ್ಮ ಮುಜಾಫರ್‌ನಗರದಲ್ಲಿ ಬಿಜೆಪಿ ಧ್ರುವೀಕರಣ ಪ್ರಚಾರ ನಡೆಸುತ್ತಿದೆ ಎಂದು ಕಳೆದ ವಾರ ಟಿಕಾಯತ್ ಆರೋಪಿಸಿದ್ದರು ಮತ್ತು ಇದು ಹಿಂದೂ-ಮುಸ್ಲಿಂ ಮೆರವಣಿಗೆಗಳ ಕ್ರೀಡಾಂಗಣದಲ್ಲಿ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+