'2004ರ ಫಲಿತಾಂಶ ಮರೆಯಬೇಡಿ' ಎಚ್ಚರಿಕೆ ಕೊಟ್ಟ ಸೋನಿಯಾ
ರಾಯ್ ಬರೇಲಿ, ಏಪ್ರಿಲ್ 11: ಉತ್ತರಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ, 'Don't forget 2004' ಎಂದು ಬಿಜೆಪಿ ಎಚ್ಚರಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚುನಾವಣಾ ಕಚೇರಿಯ ಹೊರಗಡೆ ಪುತ್ರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜತೆ ನಿಂತಿದ್ದ ಸೋನಿಯಾ ಅವರಿಗೆ ಮೋದಿ ಬಗ್ಗೆ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿ, 2004ರಲ್ಲಿ ವಾಜಪೇಯಿಜೀ ಅವರು ಅಜೇಯ ಎಂದು ಭಾವಿಸಲಾಗಿತ್ತು. ಆದರೆ, ನಾವು ಗೆಲುವು ಸಾಧಿಸಿದೆವು, ಈಗ ಮೋದಿ ಅವರನ್ನು ಕೂಡಾ ಅಜೇಯ ಎನ್ನಲಾಗುತ್ತಿದೆ. ಆದರೆ, ಇದಕ್ಕೆ ಜನತೆ ಉತ್ತರ ನೀಡಲಿದ್ದಾರೆ ಎಂದರು.
'ಜನತೆ ಮುಂದೆ ಯಾರು ದೊಡ್ಡವರಲ್ಲ, ಭಾರತದ ಇತಿಹಾಸದಲ್ಲಿ ಗರ್ವದಿಂದ ಅಧಿಕಾರ, ಆಡಳಿತ ನಡೆಸಿದ ಎಷ್ಟೋ ಮಂದಿ ತಮ್ಮನ್ನು ತಾವು ಅಜೇಯ, ಯಾರೂ ಸೋಲಿಸಲು ಸಾಧ್ಯವಿಲ್ಲ ಎಂದು ಕೊಂಡಿದ್ದರು, ಆದರೆ, ಅವರಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಅವರಿಗೂ ಇದೇ ಕಾದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

1996, 1998 ಹಾಗೂ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಜಯ ದಾಖಲಿಸಿತ್ತು. ಆದರೆ, 2004ರಲ್ಲಿ ಗೆಲ್ಲುವ ನಿರೀಕ್ಷೆ ಹುಟ್ಟಿಹಾಕಿದರೂ, ಭಾರತ ಪ್ರಕಾಶಿಸುತ್ತಿದೆ ಎಂಬ ಘೋಷ ವಾಕ್ಯ ಕೂಗಿದರೂ, ಮತದಾರ ಮಾತ್ರ ವ್ಯತಿರಿಕ್ತ ಫಲಿತಾಂಶ ನೀಡಿದ್ದನ್ನು ಸ್ಮರಿಸಬಹುದು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮೈತ್ರಿಕೂಟವನ್ನು ಒಟ್ಟುಗೂಡಿಸಿದ್ದ ಅಂದಿನ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಹಜವಾಗಿ ಪ್ರಧಾನಿ ಪಟ್ಟ್ ಒಲಿದು ಬಂದಿತ್ತು. ಆದರೆ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದ್ದು ಈಗ ಇತಿಹಾಸ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications