'ಡಬಲ್ ಇಂಜಿನ್ ಸರ್ಕಾರ': ಯೋಗಿ ಸರ್ಕಾರವನ್ನು ಶ್ಲಾಘಿಸಿದ ಮೋದಿ
ಆಲಿಗಢ, ಸೆಪ್ಟೆಂಬರ್ 14: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರನ್ನು ಹೊಗಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, "ಡಬಲ್ ಇಂಜಿನ್ ಸರ್ಕಾರದ ಡಬಲ್ ಪ್ರಯೋಜನಕ್ಕೆ ಉತ್ತರ ಪ್ರದೇಶ ಸರ್ಕಾರ ಎಂದಿಗೂ ಮಿಂಚುವ ಉದಾಹರಣೆಯಾಗಿದೆ," ಎಂದು ಮಂಗಳವಾರ ಹೇಳಿದ್ದಾರೆ.
ದೆಹಲಿಯಿಂದ ಸುಮಾರು 150 ಕಿಲೋ ಮೀಟರ್ ದೂರದಲ್ಲಿ ಇರುವ ಆಲಿಗಢದ ರಾಜ ಮಹೇಂದ್ರ ಪ್ರತಾಪ ಸಿಂಗ್ ರಾಜ್ಯ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, "ಈ ಹಿಂದೆ ಉತ್ತರ ಪ್ರದೇಶ ದೇಶದ ಅಭಿವೃದ್ದಿಗೆ ತೊಡಕು ಆಗಿತ್ತು, ಆದರೆ ಈಗ ದೇಶದ ಅಭಿವೃದ್ದಿಯಲ್ಲಿ ಉತ್ತರ ಪ್ರದೇಶ ರಾಜ್ಯ ಪ್ರಮುಖ ಪಾತ್ರವನ್ನು ವಹಿಸುತ್ತಿದೆ ಎಂದು ಹೇಳಿಕೊಳ್ಳಲು ನನಗೆ ಬಹಳ ತೃಪ್ತಿಯಾಗುತ್ತದೆ," ಎಂದು ಅಭಿಪ್ರಾಯಿಸಿದ್ದಾರೆ.
ಆಲಿಗಢದ ರಾಜ ಮಹೇಂದ್ರ ಪ್ರತಾಪ ಸಿಂಗ್ ರಾಜ್ಯ ವಿಶ್ವವಿದ್ಯಾನಿಲಯದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಜಾಟ್ ಐಕಾನ್ ಎಂದು ಹೆಸರಿಡಲಾಗಿದೆ. ಇದನ್ನು ಚುನಾವಣೆ ಸಮೀಸುತ್ತಿರುವ ನಡುವೆ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತಲುಪುವ ಒಂದು ಪ್ರಯತ್ನ ಎಂದು ಕೂಡಾ ಹೇಳಲಾಗಿದೆ.

ಇನ್ನು ಈ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿಯ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಾ, "ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಹೂಡಿಕೆದಾರರಿಗೆ ಉತ್ತರ ಪ್ರದೇಶ ರಾಜ್ಯವು ಹೆಚ್ಚು ಅನುಕೂಲಕರ ರಾಜ್ಯವಾಗಿ ಹೊರಹೊಮ್ಮುತ್ತಿದೆ. ಅನುಕೂಲಕರ ವಾತಾವರಣವನ್ನು ಸೃಷ್ಟಿ ಮಾಡಿ, ಪೋಷಿಸಿದಾಗ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿದಾಗ ಮಾತ್ರ ಯಾವುದೇ ರಾಜ್ಯವು ಹೂಡಿಕೆದಾರರಿಗೆ ಹೆಚ್ಚು ಅನುಕೂಲಕರವಾದ ರಾಜ್ಯವಾಗುತ್ತದೆ. ಡಬಲ್ ಇಂಜಿನ್ ಸರ್ಕಾರದ ಡಬಲ್ ಪ್ರಯೋಜನಕ್ಕೆ ಉತ್ತರ ಪ್ರದೇಶ ಸರ್ಕಾರ ಎಂದಿಗೂ ಮಿಂಚುವ ಉದಾಹರಣೆಯಾಗಿದೆ," ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಸರ್ಕಾರವನ್ನು ಹಾಡಿ ಹೊಗಳಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಬಲ್ ಇಂಜಿನ್ ಹೇಳಿಕೆಯನ್ನು ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಲು ಬಳಸಿದ ವಿರೋಧ ಪಕ್ಷಗಳ ವಿರುದ್ದ ಗರಂ ಆದರು. ಮಾಜಿ ಉತ್ತರ ಪ್ರದೇಶ ಮುಖ್ಯಮಂತ್ರಿಗಳಾದ ಅಖಿಲೇಶ್ ಯಾದವ್ ಹಾಗೂ ಮಾಯಾವತಿ ವಿರುದ್ದ ಕಿಡಿಕಾರಿದ ಪ್ರಧಾನಿ ನರೇಂದ್ರ ಮೋದಿ, "ಉತ್ತರ ಪ್ರದೇಶದಲ್ಲಿ ಒಂದು ಕಾಲವಿತ್ತು, ಆ ಕಾಲದಲ್ಲಿ ಗೂಂಡಾಗಳೇ ಉತ್ತರ ಪ್ರದೇಶ ಸರ್ಕಾರವನ್ನು ಆಳುತ್ತಿದ್ದರು. ಆದರೆ ಈಗ ಎಲ್ಲಾ ಸುಳಿಗೆಗಾರರು, ಮಾಫಿಯಾ ನಾಯಕರು ಜೈಲಿನ ಕಂಬಿಯ ಒಳಗೆ ಇದ್ದಾರೆ," ಎಂದಿದ್ದಾರೆ.
"ಹಾಗೆಯೇ ರಾಜ್ಯದ ಜನರು ಈ ಹಿಂದೆ ಇದ್ದ ಸರ್ಕಾರದ ಸಂದರ್ಭದಲ್ಲಿ ಕಂಡ ಹಗರಣಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ತಾವು ಎಂತಹ ಭ್ರಷ್ಟ ರಾಜಕಾರಣಿಗಳಿಗೆ ಈ ಹಿಂದೆ ಅಧಿಕಾರದ ಅವಕಾಶ ನೀಡಿದ್ದೆವು ಎಂಬುವುದನ್ನು ಕೂಡಾ ಈಗ ಉತ್ತರ ಪ್ರದೇಶದ ಜನರು ಮರೆಯುವುದಿಲ್ಲ," ಎಂದು ಹೇಳಿದ್ದಾರೆ. "ಇಂದು ಯೋಗಿ ಆದಿತ್ಯನಾಥ್ ಜೀ ಸರ್ಕಾರವು ರಾಜ್ಯದ ಅಭಿವೃದ್ದಿಗಾಗಿ ಹೂಡಿಕೆ ಮಾಡಿದೆ," ಎಂದು ಕೂಡಾ ಪ್ರಧಾನಿ ಮೋದಿ ಉಲ್ಲೇಖ ಮಾಡಿದ್ದಾರೆ.
ಈ ಹಿಂದೆ ಯೋಗಿ ಆದಿತ್ಯಾನಾಥ್ ವಿರುದ್ದ ಹಲವಾರು ಹಿರಿಯ, ರಾಜ್ಯ ಬಿಜೆಪಿ ನಾಯಕರುಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಕೊರೊನಾ ವೈರಸ್ ಸೋಂಕು ನಿರ್ವಹಣೆ ವಿಚಾರದಲ್ಲಿ ಯೋಗಿ ಸರ್ಕಾರವನ್ನು ಬಿಜೆಪಿ ನಾಯಕರೇ ಬಹಿರಂಗವಾಗಿ ಟೀಕೆ ಮಾಡಿದ್ದರು. ಈ ಬೆನ್ನಲ್ಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಬಿಜಪಿ ಸರ್ಕಾರವನ್ನು ಹಾಡಿ ಹೊಗಳಿದ್ದಾರೆ.
ಭಾರತವು ತನ್ನ ಇಮೇಜ್ ಅನ್ನು "ರಕ್ಷಣಾ ಆಮದುದಾರರಿಂದ" ವಿಶ್ವದ ಅತಿದೊಡ್ಡ ರಕ್ಷಣಾ ರಫ್ತುದಾರರಾಗಿ ಬದಲಾಯಿಸಿಕೊಳ್ಳುತ್ತಿದೆ," ಎಂದು ಪ್ರಧಾನಿ ಮೋದಿ ಹೇಳಿದರು. ಆಲಿಗಢ ರಕ್ಷಣಾ ಸಾಮಾಗ್ರಿಗಳ ಉತ್ಪಾದನೆಯ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಈಗಾಗಲೇ 12 ರಕ್ಷಣಾ ಸಂಸ್ಥೆಗಳು ತಮ್ಮ ಉತ್ಪಾದನಾ ಘಟಕಗಳನ್ನು ಇಲ್ಲಿ ಆಲಿಗಢದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ," ಎಂದು ಪ್ರಧಾನಿ ವಿವರಿಸಿದ್ದಾರೆ.
(ಒನ್ ಇಂಡಿಯಾ ಸುದ್ದಿ)
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications