ರಾಹುಲ್ ಗಾಂಧಿ ಅಮೇಥಿ ನಾಮಪತ್ರಕ್ಕೆ 'ಸಿಂಧುತ್ವ' ಪರೀಕ್ಷೆಯಲ್ಲಿ ಜಯ
ಲಕ್ನೋ, ಏಪ್ರಿಲ್ 22: ಕಾಂಗ್ರೆಸ್ ಅಧ್ಯಕ್ಷ, ಉತ್ತರಪ್ರದೇಶದ ಅಮೇಥಿ ಕ್ಷೇತ್ರದ ಹಾಲಿ ಸಂಸದ ರಾಹುಲ್ ಗಾಂಧಿ ಅವರ ನಾಮಪತ್ರದಲ್ಲಿರುವ ಹೆಸರು ಬದಲಾವಣೆ ಕುರಿತಂತೆ ಬಂದಿದ್ದ ಆಕ್ಷೇಪವನ್ನು ಚುನಾವಣಾ ಆಯೋಗ ಇತ್ಯರ್ಥಗೊಳಿಸಿದೆ. ವಯನಾಡು ಕ್ಷೇತ್ರಕ್ಕೂ ಮುನ್ನ ಅಮೇಥಿಯಿಂದ ಯಿಂದ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಅಫಿಡವಿಟ್ ಗೆ ಆಕ್ಷೇಪ ಎತ್ತಲಾಗಿತ್ತು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಅಮೇಥಿ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಧ್ರುವ್ ಲಾಲ್ ಆಕ್ಷೇಪಣೆ ಸಲ್ಲಿಸಿದ್ದರು. ಈ ಆಕ್ಷೇಪಣೆಗೆ ಉತ್ತರ ನೀಡುವಂತೆ ಚುನಾವಣೆ ಅಧಿಕಾರಿಗಳು ರಾಹುಲ್ ಗಾಂಧಿಗೆ ಸೂಚಿಸಿದ್ದರು. ಇದಕ್ಕೆ ರಾಹುಲ್ ಗಾಂಧಿ ಅವರ ವಕೀಲ ನೀಡಿರುವ ಉತ್ತರ ಸಮರ್ಪಕವಾಗಿದ್ದು, ಅಫಿಡವಿಟ್ ನಲ್ಲಿ ಯಾವುದೇ ಲೋಪ ದೋಷ ಕಂಡು ಬಂದಿಲ್ಲ. ನಾಮಪತ್ರ ಅಸಿಂಧುಗೊಳಿಸಲು ಸಾಧ್ಯವಿಲ್ಲ ಎಂದು ಅಮೇಥಿಯ ಚುನಾವಣಾಧಿಕಾರಿ ಹೇಳಿದ್ದಾರೆ.
ರಾಹುಲ್ ಗಾಂಧಿ ಭಾರತ ನಾಗರಿಕರೋ ಅಲ್ಲವೋ? ಯಾವಾಗಲಾದರೂ ಬ್ರಿಟಿಷ್ ನಾಗರಿಕರಾಗಿದ್ದರಾ? ಅವರು ಸತ್ಯ ಹೇಳಬೇಕಿದೆ. ರಾಹುಲ್ ಗಾಂಧಿ ಅವರು 2004ರಿಂದ ಸಲ್ಲಿಸುತ್ತಾ ಬಂದಿರುವ ಚುನಾವಣೆ ಅಫಿಡವಿಟ್ ನಲ್ಲಿ ರೌಲ್ ವಿನ್ಸಿ ಎಂಬ ಹೆಸರಿನಲ್ಲೇ ಪದವಿ ಪ್ರಮಾಣ ಪತ್ರ ಇದೆ. ರಾಹುಲ್ ಗಾಂಧಿ ಅವರಿಗೆ ಬೇರೆ ದೇಶಗಳಲ್ಲಿ ಬೇರೆ ಹೆಸರುಗಳಿವೆಯಾ ಅಂತ ನಾವು ತಿಳಿದುಕೊಳ್ಳಲು ಬಯಸುತ್ತೇವೆ ಎಂದು ಬಿಜೆಪಿ ವಕ್ತಾರ ಜಿ.ವಿ.ಎಲ್.ನರಸಿಂಹ ರಾವ್ ಪ್ರತಿಕ್ರಿಯಿಸಿದ್ದರು.

ಧ್ರುವ್ ಲಾಲ್ ಸಲ್ಲಿಸಿದ ಆಕ್ಷೇಪದಲ್ಲಿ ಕೇಂಬ್ರಿಡ್ಜ್ ವಿ.ವಿ. ನೀಡಿದ ಪ್ರಮಾಣ ಪತ್ರವನ್ನು ಲಗತ್ತಿಸಲಾಗಿತ್ತು. ಅದರಲ್ಲಿ ಮಿಸ್ಟರ್ ರೌಲ್ ವಿನ್ಸಿ ಅವರು ಡೆವಲಪ್ ಮೆಂಟ್ ಸ್ಟಡೀಸ್ ನಲ್ಲಿ ಎಂ.ಫಿಲ್., ಅನ್ನು 2004-05ರಲ್ಲಿ ಸರಾಸರಿ 62.88% ಪಡೆದು, ಅಂದರೆ ತೇರ್ಗಡೆ ಆಗಲು ಬೇಕಾದ ಶೇ 60ಕ್ಕಿಂತ ಹೆಚ್ಚು ಅಂಕದೊಂದಿಗೆ 2004-05ರ ಶೈಕ್ಷಣಿಕ ವರ್ಷದಲ್ಲಿ ಪಾಸಾಗಿದ್ದಾರೆ ಅಂತಿದೆ. ರಾಹುಲ್ ಅವರ ಹೆಸರು ಪ್ರಮಾಣ ಪತ್ರದಲ್ಲಿ ರೌಲ್ ವಿನ್ಸಿ ಎಂದು ಮುದ್ರಿತವಾಗಿದೆ. ಉಮೇದುವಾರಿಕೆ ಪತ್ರದಲ್ಲಿ ರಾಹುಲ್ ಗಾಂಧಿ ಎಂದಿದೆ. ಈ ಬಗ್ಗೆ ಸ್ಪಷ್ಟನೆ ಬೇಕು ಎಂದು ಆಕ್ಷೇಪ ಎತ್ತಲಾಗಿತ್ತು.
ಈಗ ರಾಹುಲ್ ಗಾಂಧಿ ಅವರ ಜೀವಕ್ಕೆ ಭಯವಿದ್ದ ಕಾರಣ ಗೌಪ್ಯವಾಗಿ ವ್ಯಾಸಂಗ ಮಾಡಬೇಕಾಯಿತು. ಅವರು ಬ್ರಿಟಿಷ್ ಪೌರತ್ವ ಹೊಂದಿಲ್ಲ. ರೌಲ್ ವಿನ್ಸಿ ಹಾಗೂ ರಾಹುಲ್ ಗಾಂಧಿ ಹೆಸರಿನ ಗೊಂದಲದ ಬಗ್ಗೆ ಈ ಹಿಂದೆಯೇ ಆಯೋಗಕ್ಕೆ ಸ್ಪಷ್ಟನೆ ನೀಡಲಾಗಿದೆ ಎಂದು ರಾಹುಲ್ ಗಾಂಧಿ ಪರ ವಕೀಲರು ನೀಡಿದ ವಾದವನ್ನು ಆಯೋಗ ಪುರಸ್ಕರಿಸಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications