ಸಮಾಜವಾದಿ ಪಕ್ಷದ ಸಂಸದ 'ಎಮ್ಮೆ ಕದ್ರು' , ಅವರ ಪತ್ನಿ 'ಇನ್ನೊಂದು ಕದ್ರು'
ಲಕ್ನೋ, ಸೆ 06 : ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮತ್ತು ರಾಂಪುರ ಲೋಕಸಭಾ ಕ್ಷೇತ್ರದ ಸಂಸದ ಅಜಂ ಖಾನ್ ಅವರ ಪತ್ನಿಯ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಖಾನ್ ಅವರ ಪತ್ನಿಯ ಮೇಲೆ ವಿದ್ಯುತ್ ಕಳ್ಳತನದ ಆರೋಪ ಹೊರಿಸಲಾಗಿದೆ.
ಅಜಂ ಖಾನ್ ಮತ್ತು ಅವರ ಪತ್ನಿಯ ಒಡೆತನದ ರೆಸಾರ್ಟ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ದಾಳಿ ವೇಳೆ, ರೆಸಾರ್ಟಿನ ವಿದ್ಯುತ್ ಮೀಟರ್ ಅನ್ನು ದುರ್ಬಳಕೆ ಮಾಡಿದು ಸಾಬೀತಾತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ರೆಸಾರ್ಟ್ ಮತ್ತು ಆಸ್ತಿ, ಅಜಂ ಖಾನ್ ಅವರ ಪತ್ನಿ ತಜೀನ್ ಫಾತಿಮಾ ಹೆಸರಿನಲ್ಲಿ ರಿಜಿಸ್ಟರ್ ಆಗಿದೆ.
ಉತ್ತರ ಪ್ರದೇಶದಲ್ಲಿ, ಮುಲಾಯಂ ಸಿಂಗ್ ಮತ್ತು ಅವರ ಪುತ್ರ ಅಖಿಲೇಶ್ ಯಾದವ್ ಅವರ ಸರಕಾರವಿದ್ದಾಗ, ಅಜಂ ಖಾನ್ ಪ್ರಭಾವಿ ಸಚಿವರಾಗಿದ್ದರು. ಕಳೆದ ಆಗಸ್ಟ್ ಆಗಸ್ಟ್ 29 ರಂದು, ಎಮ್ಮೆ ಕಳ್ಳತನದ ವಿಚಾರದಲ್ಲಿ, ಅಜಂ ಖಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಆಸಿಮ್ ಮತ್ತು ಆಲಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿತ್ತು. " ಅಜಂ ಖಾನ್ ಮತ್ತು ಇತರ ಐದು ಮಂದಿ 2016ರ ಅಕ್ಟೋಬರ್ 15 ರಂದು ನಮ್ಮ ಮನೆಗೆ ನುಗ್ಗಿ ಆಸ್ತಿಯನ್ನು ಧ್ವಂಸ ಮಾಡಿದ್ದರು. ಮತ್ತು, ಮನೆಯಲ್ಲಿದ್ದ ಎಮ್ಮೆಯೊಂದಿಗೆ ಪರಾರಿಯಾಗಿದ್ದರು " ಎಂದು, ಇವರಿಬ್ಬರು ದೂರು ನೀಡಿದ್ದರು.
ಇನ್ನು, ರೆಸಾರ್ಟಿನ ವಿದ್ಯುತ ಕಳ್ಲತನದ ವಿಚಾರದಲ್ಲಿ ಸ್ಪಷ್ಟನೆಯನ್ನು ನೀಡಿರುವ ಅಧಿಕಾರಿಗಳು, " ತಜೀನ್ ಫಾತಿಮಾ ಹೆಸರಿನಲ್ಲಿ ನೋಂದಾಯಿಸಲಾಗಿರುವ ಪವರ್ ಮೀಟರ್ 5 ಕಿಲೋ ವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ.
" ಆದರೆ, ಮಾಲೀಕರು ಮೂರು ಹೆಚ್ಚುವರಿ ವಿದ್ಯುತ್ ಫೇಸ್ ಗಳನ್ನು ಹಾಕಿದ್ದರು. ಇದು, ಹೆಚ್ಚು ವಿದ್ಯುತ್ ಅನ್ನು ಬಳಸಿಕೊಂಡರೂ, ಮೀಟರ್ ನಲ್ಲಿ ದಾಖಲಾಗುವುದಿಲ್ಲ. ಇದೊಂದು ಅಕ್ರಮ" ಎಂದು ವಿದ್ಯುತ್ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications