ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಗೆ ಆರೆಸ್ಸೆಸ್ ಬೆಂಬಲವೂ ಇಲ್ಲ,ಮೋದಿಗೆ ಅದೇ ಭಯ:ಮಾಯಾವತಿ

|
Google Oneindia Kannada News

ಲಕ್ನೋ, ಮೇ 14: "ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಲಿದೆ. ಏಕೆಂದರೆ ಅದಕ್ಕೆ ಸದ್ಯಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲವೂ ಇಲ್ಲ" ಎಂದು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಹೇಳಿದ್ದಾರೆ.

ಹುಟ್ಟುವಾಗ ಮೋದಿ ಹಿಂದುಳಿದ ವರ್ಗದವರಾಗಿರಲಿಲ್ಲ: ಮಾಯಾವತಿಹುಟ್ಟುವಾಗ ಮೋದಿ ಹಿಂದುಳಿದ ವರ್ಗದವರಾಗಿರಲಿಲ್ಲ: ಮಾಯಾವತಿ

"ಬಿಜೆಪಿ ಮುಳುಗುತ್ತಿರುವ ಹಡಗು. ಬಿಜೆಪಿಯ ಐಡಿಯಾಲಾಜಿಕಲ್ ಮೆಂಟರ್ ಆರೆಸ್ಸೆಸ್ ಗೂ ಮೋದಿ ಸರ್ಕಾರದ ಬಗ್ಗೆ ಅಸಮಾಧಾನವಿದೆ. ಆದ್ದರಿಂದ ಅವರು ಬಿಜೆಪಿಯನ್ನು ಬೆಂಬಲಿಸುವುದನ್ನು ನಿಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಆರೆಸ್ಸೆಸ್ ಸ್ವಯಂಸೇವಕರು ಕೆಲಸ ಮಾಡಲು ಬಂದಿಲ್ಲ. ಇದು ಮೋದಿ ಅವರಲ್ಲಿ ಭಯ ಮೂಡಿಸಿದೆ" ಎಂದು ಅವರು ಹೇಳಿದ್ದಾರೆ.

Even RSS is not supporting Narendra Modi, says Mayawati

ಹೆಂಡತಿ ಬಿಟ್ಟ ಮೋದಿಗೆ ಮಹಿಳೆಯರ ಬಗ್ಗೆ ಗೌರವವಿಲ್ಲ: ಮಾಯಾವತಿಹೆಂಡತಿ ಬಿಟ್ಟ ಮೋದಿಗೆ ಮಹಿಳೆಯರ ಬಗ್ಗೆ ಗೌರವವಿಲ್ಲ: ಮಾಯಾವತಿ

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮಾಯಾವತಿ, "ನರೇಂದ್ರ ಮೋದಿ ಅವರು 2014 ರಲ್ಲಿ ನೀಡಿದ್ದ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಇದು ಆರೆಸ್ಸೆಸ್ ಸ್ವಯಂ ಸೇವಕರಲ್ಲಿ ಬೇಸರವನ್ನುಂಟು ಮಾಡಿದೆ. ಆದ್ದರಿಂದ ಅವರು ಈ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡಲು ಹೊರಗೆ ಬರುತ್ತಿಲ್ಲ. ಇದೇ ಮೋದಿಯವರು ಭಯ ಪಡಲು ಕಾರಣ" ಎಂದು ಮಾಯಾವತಿ ಹೇಳಿದರು.

English summary
BSP Chief Mayawati in pressmeet said, PM Modi's government is losing this election, it appears that even RSS has stopped supporting them. In view of unfulfilled election promises & the public agitation, their swayamsevaks are not being seen putting in the work, it has made Modi nervous.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X