ಚುನಾವಣೆ ಮೇಲೆ ಕಣ್ಣು, ಯುಪಿಗೆ ಭರ್ಜರಿ ಪಾಲು ಕೊಟ್ಟ ಮೋದಿ
ಲಕ್ನೋ, ಜುಲೈ 8: 2022ರ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ತನ್ನ ರಾಜಕೀಯ ನಡೆಯನ್ನು ಈಗಿಂದಲೇ ಆರಂಭಿಸಿದೆ. ಮೋದಿ 2.0 ಸರ್ಕಾರ್ ಸಂಪುಟ ವಿಸ್ತರಣೆಯಲ್ಲಿ ಇದರ ಸಣ್ಣ ಝಲಕ್ ಕಂಡು ಬಂದಿದೆ. ಉತ್ತರಪ್ರದೇಶದಿಂದ ಮೋದಿ ಹೊಸ ಸಂಪುಟಕ್ಕೆ 7 ಮಂದಿ ಸಂಸದರು ಸಚಿವರಾಗಿ ಸೇರ್ಪಡೆಯಾಗಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಬುಧವಾರ ಸಂಜೆ ನಡೆದ ಸರಳ ಸಮಾರಂಭದಲ್ಲಿ ಯುಪಿಯಿಂದ ಸೇರ್ಪಡೆಗೊಡ ಏಳು ಮಂದಿ ಸಚಿವರ ಪೈಕಿ ಅನುಪ್ರಿಯ ಪಟೇಲ್ ಮಿತ್ರ ಪಕ್ಷ ಅಪ್ನಾ ದಳ(ಸೊನೆಲಾಲ್) ಕ್ಕೆ ಸೇರಿದವರಾಗಿದ್ದರೆ, ಮಿಕ್ಕವರು ಬಿಜೆಪಿ ಸಂಸದರಾಗಿದ್ದಾರೆ.
ಅನುಪ್ರಿಯ ಪಟೇಲ್, ಪಂಕಜ್ ಚೌಧರಿ ಹಾಗೂ ಬಿ.ಎಲ್ ವರ್ಮ ಮೂವರು ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದು, ಯುಪಿಯಲ್ಲಿ ಶೇ 50ಕ್ಕೂ ಹಿಂದುಳಿದ ವರ್ಗಕ್ಕೆ ಸೇರಿದ ಅಧಿಕ ಮತದಾರರನ್ನು ಹೊಂದಿದೆ.

ಕೌಶಲ್ ಕಿಶೋರ್, ಭಾನು ಪ್ರತಾಪ್ ಸಿಂಗ್ ವರ್ಮ ಹಾಗೂ ಎಸ್ ಪಿ ಸಿಂಗ್ ಬಘೆಲ್ ಮೂವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ. ಅಜಯ್ ಕುಮಾರ್ ಮಾತ್ರ ಬ್ರಾಹ್ಮಣ ಕೋಟಾದಿಂದ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಜಿತಿನ್ ಪ್ರಸಾದಗೆ ಸಚಿವರಾಗುವ ಅವಕಾಶ ಸಿಗಲಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ತೆರಾಯಿ ಪ್ರದೇಶದ ಅಜಯ್ ಕುಮಾರ್ ಕೊನೆ ಗಳಿಗೆಯಲ್ಲಿ ಸಂಪುಟ ಸೇರಿದ್ದಾರೆ.
ಅನುಪ್ರಿಯ ಪಟೇಲ್(ಮಿರ್ಜಾಪುರ್) ಹಾಗೂ ಪಂಕಜ್ ಚೌಧರಿ (ಮಹರಾಜ್ ಗಂಜ್) ಪೂರ್ವ ಉತ್ತರಪ್ರದೇಶ ಭಾಗದವರಾಗಿದ್ದಾರೆ. ಬಘೇಲ್ ಆಗ್ರಾದಿಂದ ಹಾಗೂ ರಾಜ್ಯಸಭಾ ಸದಸ್ಯ ಬಿಎಲ್ ವರ್ಮ ಬುದೌನ್ ಕ್ಷೇತ್ರದವರಾಗಿದ್ದು, ಭಾನು ಪ್ರತಾಪ್ ವಮ ಜಲೌನ್ (ಬುಂಡೇಲ್ ಖಂಡ್) ಭಾಗಕ್ಕೆ ಸೇರಿದವರಾಗಿದ್ದು, ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳಲಾಗಿದೆ.
2016 ರಿಂದ 2019ರ ಅವಧಿಯಲ್ಲಿ ರಾಜ್ಯ ಸಚಿವ ಸ್ಥಾನದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವವುಳ್ಳ ಅನುಪ್ರಿಯ ಪಟೇಲ್ ಅವರಿಗೆ ಒಬಿಸಿಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications