Breaking; ದೆಹಲಿ ಬಳಿಯ ಘಾಜಿಯಾಬಾದ್ನ ಗೋಡೌನ್ನಲ್ಲಿ ಅಗ್ನಿ ಅವಘಡ
ನವದೆಹಲಿ, ಜೂನ್ 3: ನಿನ್ನೆ ಗುರುವಾರ ಸಂಜೆ ಗುಜರಾತ್ನ ವಡೋದರಾದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಇಂದು ಶುಕ್ರವಾರ ಮುಂಜಾನೆ ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯಲ್ಲಿ ಅಗ್ನಿ ಆಕಸ್ಮಿಕ ಘಟನೆ ವರದಿಯಾಗಿದೆ. ರಾಷ್ಟ್ರರಾಜಧಾನಿ ದೆಹಲಿಗೆ ಸಮೀಪ ಇರುವ ಘಾಜಿಯಾಬಾದ್ನ ಶಾಹೀದ್ ನಗರ್ ಮೆಟ್ರೋ ಸ್ಟೇಷನ್ ಬಳಿಯ ಗೋಡೌನ್ನಲ್ಲಿ ಬೆಳಗ್ಗೆ ಬೆಂಕಿಹೊತ್ತಿಕೊಂಡಿದೆ.
ಸದ್ಯ ಯಾರಿಗೂ ಸಾವಾಗಲೀ, ಗಾಯವಾಗಲೀ ಆಗಿರುವ ಬಗ್ಗೆ ವರದಿಗಳು ಬಂದಿಲ್ಲ. 12 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಅಗ್ನಿಶಾಮಕ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

"ಹನ್ನೆರಡಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಬೆಂಕಿ ಅವಘಡದಲ್ಲಿ ಜನರಿಗೆ ಹಾನಿಯಾಗಿಲ್ಲ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆಗೆ ಮುಖ್ಯ ಅಗ್ನಿಶಾಮಕ ಅಧಿಕಾರಿ ಸುನೀಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
"ಗೋದಾಮಿನಲ್ಲಿ ಬಟ್ಟೆ ಮತ್ತು ಪ್ಲಾಸ್ಟಿಕ್ ವಸ್ತುಗಳು ಇರುವುದರಿಂದ ಸಾಕಷ್ಟು ಬೆಂಕಿ ವ್ಯಾಪಿಸಿದೆ. ಇದರಿಂದಾಗಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಇನ್ನಷ್ಟು ಸಮಯ ಬೇಕಾಗುತ್ತದೆ" ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.

ಗುಜರಾತ್ನಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ:
ನಿನ್ನೆ ಗುರುವಾರ ಗುಜರಾತ್ನ ವಡೋದರದಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ ಆಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ವರದಿಯಾಗಿತ್ತು. ರಾಸಾಯನಿಕ ಹೊಗೆಯಿಂದ ಅಸ್ವಸ್ಥಗೊಂಡಿರುವ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ಸುತ್ತಮುತ್ತ ಇರುವ 700 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ.
(ಒನ್ಇಂಡಿಯಾ ಸುದ್ದಿ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications