ದೇಶದಲ್ಲೇ ಮೊದಲು: ಉತ್ತರ ಪ್ರದೇಶದಲ್ಲಿ ಹಸುಗಳ ತುರ್ತು ಚಿಕಿತ್ಸೆಗೆ ಆಂಬುಲೆನ್ಸ್ ಸೇವೆ
ಲಕ್ನೋ, ನವೆಂಬರ್ 15: ಭಾರತದಲ್ಲಿ ಗೋವಿನ ರಕ್ಷಣೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ನಿಯಮಗಳನ್ನು ಜಾರಿಗೊಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಹಸುಗಳ ರಕ್ಷಣೆಗೆ ವಿನೂತನ ಯೋಜನೆಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಾರಿಗೊಳಿಸಿದ್ದಾರೆ. ಈಗ ಅದೇ ಪಟ್ಟಿಗೆ ಮತ್ತೊಂದು ಯೋಜನೆ ಸೇರ್ಪಡೆಯಾಗಿದೆ.
ಉತ್ತರ ಪ್ರದೇಶದಲ್ಲಿ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಹಸುಗಳಿಗೆ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಲು ಸರ್ಕಾರ ಸಿದ್ಧವಾಗಿದೆ ಎಂದು ರಾಜ್ಯ ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ಲಕ್ಷ್ಮಿ ನಾರಾಯಣ ಚೌಧರಿ ಹೇಳಿದ್ದಾರೆ.
ದೇಶದಲ್ಲಿ ಇದೇ ಮೊದಲ ಬಾರಿಗೆ ಹಸುಗಳಿಗೆ ಆಂಬುಲೆನ್ಸ್ ಸೇವೆಯನ್ನು ಒದಗಿಸಲಾಗುತ್ತಿದ್ದು, ಉತ್ತರ ಪ್ರದೇಶದಲ್ಲಿ ನೂತನ ಯೋಜನೆಗಾಗಿ 515 ಆಂಬ್ಯುಲೆನ್ಸ್ಗಳು ಸಿದ್ಧವಾಗಿವೆ. 112 ತುರ್ತು ಸೇವಾ ಸಂಖ್ಯೆಯಾಗಿದ್ದು, ಹೊಸ ಸೇವೆಯು ಗಂಭೀರವಾಗಿ ಅಸ್ವಸ್ಥಗೊಂಡ ಹಸುಗಳ ತ್ವರಿತ ಚಿಕಿತ್ಸೆಗೆ ದಾರಿ ಮಾಡಿಕೊಡುತ್ತದೆ" ಎಂದು ಸಚಿವ ಲಕ್ಷ್ಮಿ ನಾರಾಯಣ ಚೌಧರಿ ತಿಳಿಸಿದ್ದಾರೆ.

ಹಸುಗಳ ಆಂಬುಲೆನ್ಸ್ ಸೇವೆಯಲ್ಲಿ ಏನೇನಿದೆ?:
"ಉತ್ತರ ಪ್ರದೇಶದಲ್ಲಿ ಹಸುಗಳ ಆಂಬುಲೆನ್ಸ್ ಸೇವೆಗೆ ಕರೆ ಮಾಡಿದ 15 ರಿಂದ 20 ನಿಮಿಷಗಳ ಅವಧಿಯಲ್ಲಿ ಪಶುವೈದ್ಯರು ಮತ್ತು ಇಬ್ಬರು ಸಹಾಯಕರೊಂದಿಗೆ ಆಂಬ್ಯುಲೆನ್ಸ್ ಬರುತ್ತದೆ. ಡಿಸೆಂಬರ್ ವೇಳೆಗೆ ಪ್ರಾರಂಭವಾಗುವ ಯೋಜನೆಯಡಿ, ದೂರುಗಳನ್ನು ಸ್ವೀಕರಿಸಲು ಲಕ್ನೋದಲ್ಲಿ ಕಾಲ್ ಸೆಂಟರ್ ಅನ್ನು ಸ್ಥಾಪಿಸಲಾಗುವುದು. ಉಚಿತ ಉತ್ತಮ ಗುಣಮಟ್ಟದ ವೀರ್ಯ ಮತ್ತು ಭ್ರೂಣ ಕಸಿ ತಂತ್ರಜ್ಞಾನವನ್ನು ಒದಗಿಸುವುದರೊಂದಿಗೆ ರಾಜ್ಯದ ತಳಿ ಸುಧಾರಣಾ ಕಾರ್ಯಕ್ರಮಕ್ಕೆ ಉತ್ತೇಜನ ಸಿಗುತ್ತದೆ. ಹಸುವಿನ ತಳಿ ಸುಧಾರಣಾ ಕಾರ್ಯಕ್ರಮದಡಿಯಲ್ಲಿ ಜಾನುವಾರುಗಳಿಗೆ ಮೂರು ಬಾರಿ ಉಚಿತವಾಗಿ ಗರ್ಭಧಾರಣೆಯ ಸೌಲಭ್ಯವನ್ನು ನೀಡಲಾಗುವುದು," ಎಂದು ಸಚಿವರು ಮಾಹಿತಿ ನೀಡಿದರು.
ಉತ್ತರ ಪ್ರದೇಶದಲ್ಲಿ ಭ್ರೂಣ ಕಸಿ ತಂತ್ರಜ್ಞಾನ:
ಉತ್ತರ ಪ್ರದೇಶದಲ್ಲಿ ಪ್ರಸ್ತುತ ಭ್ರೂಣ ಕಸಿ ತಂತ್ರಜ್ಞಾನವು ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಇದರಿಂದ ಬರಡಾದ ಹಸುಗಳೂ ಸಹ ಹೆಚ್ಚು ಹಾಲು ನೀಡುವ ಪ್ರಾಣಿಗಳಾಗಿ ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಹಸು ಸಾಕಾಣಿಕೆದಾರರು ದಿನಕ್ಕೆ ಕನಿಷ್ಠ 20 ಲೀಟರ್ ಹಾಲು ನೀಡುವ ಪ್ರಾಣಿಗಳನ್ನು ಬಿಡದಂತೆ ತಡೆಯುತ್ತದೆ. ಇದರಿಂದ ಬಿಡಾಡಿ ದನಗಳ ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ಸಚಿವ ಲಕ್ಷ್ಮಿ ನಾರಾಯಣ ಚೌಧರಿ ಹೇಳಿದ್ದಾರೆ.
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಯೋಗಿಕ ಚಾಲನೆ:
ಹಸುಗಳಿಗೆ ತುರ್ತು ವೈದ್ಯಕೀಯ ಸೌಲಭ್ಯ ಸಿಗುವಂತೆ ಮಾಡುವ ಉದ್ದೇಶದಿಂದಾಗಿ ರಾಜ್ಯದಲ್ಲಿ ಹಸುಗಳ ಆಂಬುಲೆನ್ಸ್ ಸೇವೆಯನ್ನು ಆರಂಭಿಸಲಾಗುತ್ತಿದೆ. ಉತ್ತರ ಪ್ರದೇಶದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆಯನ್ನು ಆರಂಭಿಸಲಾಗುತ್ತದೆ. ತದನಂತರದಲ್ಲಿ ಈ ಯೋಜನೆಯನ್ನು ರಾಜ್ಯದ ಇತರೆ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಬಿಡಾಡಿ ದನಗಳ ಸಾಕಾಣಿಕೆಗೆ ಗೋಶಾಲೆ:
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಗೋ-ರಕ್ಷಣೆಗೆ ಹೆಚ್ಚಿನ ಒತ್ತು ನೀಡುತ್ತದೆ. ದೇಶದಲ್ಲಿಯೇ ಮೊದಲ ಬಾರಿಗೆ ಬಿಡಾಡಿ ದನಗಳ ಸಾಕಾಣಿಕೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಅನುದಾನ ನೀಡಿದೆ. ರಾಜ್ಯದಲ್ಲಿ ಹಿಂದಿನ ಯಾವುದೇ ಸರ್ಕಾರಗಳು ಈ ರೀತಿಯ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ರಾಜ್ಯ ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ಲಕ್ಷ್ಮಿ ನಾರಾಯಣ ಚೌಧರಿ ಹೇಳಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ಹೊಸ್ತಿಲಿನಲ್ಲಿ ಯೋಜನೆ:
ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಮತದಾರರನ್ನು ಸೆಳೆಯುವುದಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಒಂದೊಂದೇ ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ನಿರ್ದಿಷ್ಟವಾಗಿ ಒಂದು ವರ್ಗ ಅಥವಾ ಸಮಾಜದ ಮತಗಳನ್ನು ಪಡೆಯುವ ಉದ್ದೇಶದಿಂದಾಗಿ ಗೋ-ಹತ್ಯೆ ನಿಷೇಧ ಕಾಯ್ದೆ ಮತ್ತು ಹಸುಗಳ ಆಂಬುಲೆನ್ಸ್ ಸೇವೆ ಸೇರಿದಂತೆ ವಿಭಿನ್ನ ಯೋಜನೆಯನ್ನು ಪರಿಚಯಿಸಲು ಮುಂದಾಗಿದೆ. 2022ರಲ್ಲಿ ಉತ್ತರ ಪ್ರದೇಶದ 403 ವಿಧಾನಸಭೆಗೆ ಚುನಾವಣೆ ನಡೆಯಲಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications