"ಹೊಗಳಿಕೊಳ್ಳುವುದನ್ನು ಬಿಟ್ಟು ಕೆಲಸ ಮಾಡಿದ್ದರೆ ಎಷ್ಟೋ ಜೀವ ಉಳಿಸಬಹುದಿತ್ತು"
ಲಖ್ನೋ, ಮೇ 21: ಪರಸ್ಪರ ಸುಳ್ಳು ಹೊಗಳಿಕೆ ಮಾಡಿಕೊಳ್ಳುವುದನ್ನು ಬಿಟ್ಟು ಕೊರೊನಾ ಸೋಂಕಿತರಿಗೆ ಅವಶ್ಯಕ ವ್ಯವಸ್ಥೆಗಳನ್ನು ಮಾಡುವುದರತ್ತ ಗಮನ ನೀಡಿದ್ದರೆ ಎಷ್ಟೋ ಜನರ ಜೀವವನ್ನು ಉಳಿಸಬಹುದಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಕುರಿತು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಟೀಕೆ ಮಾಡಿದ್ದಾರೆ.
ಶುಕ್ರವಾರ ವೈದ್ಯರೊಂದಿಗೆ ಪ್ರಧಾನಿ ಮೋದಿ ವಿಡಿಯೋ ಸಭೆ ನಡೆಸಿದ್ದಾರೆ. ಅಲ್ಲೂ ತಮಗೆ ತಾವೇ ಮೆಚ್ಚುಗೆಯ ಪದಕ ನೀಡಿಕೊಂಡಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ದೇಶದಲ್ಲಿ ಈ ಇಬ್ಬರೂ ನಾಯಕರು ತಮ್ಮನ್ನು ತಾವು ಹೊಗಳಿಕೊಳ್ಳುವುದರಲ್ಲೇ ತೊಡಗಿಕೊಂಡಿದ್ದು, ಜನರ ಸಂಕಷ್ಟ ನೋಡುತ್ತಿಲ್ಲ. ಕೊರೊನಾ ಲಸಿಕೆ, ಹಾಸಿಗೆ, ಆಮ್ಲಜನಕದ ಕುರಿತು ಒಬ್ಬರಿಗೊಬ್ಬರು ಸುಳ್ಳು ಹೊಗಳಿಕೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದನ್ನು ಬಿಟ್ಟು ನಿಜವಾಗಿಯೂ ಕೆಲಸ ಮಾಡಿದ್ದರೆ ಎಷ್ಟೋ ಜನರ ಜೀವ ಉಳಿಸಬಹುದಿತ್ತು ಎಂದಿದ್ದಾರೆ.

ಪ್ರಧಾನಿ ಹೇಳಿದ್ದಕ್ಕೆಲ್ಲ ಸಿಎಂ ತಲೆಯಾಡಿಸುತ್ತಾರೆ. ಆರೋಗ್ಯ ವ್ಯವಸ್ಥೆ ಇಷ್ಟು ಹದಗೆಟ್ಟಿದ್ದರೂ ಹೊಗಳಿಕೊಳ್ಳುವುದನ್ನು ಇವರು ಬಿಟ್ಟಿಲ್ಲ. ಜನರಿಗೆ ಗೊಂದಲ ಮೂಡಿಸುವುದು ಬಿಜೆಪಿ ತಂತ್ರಗಾರಿಕೆ. ಚಿಕಿತ್ಸೆ ಇಲ್ಲದೇ ಜನರು ಸಾಯುತ್ತಿದ್ದಾರೆ. ಈ ವಿಷಯವನ್ನು ಬಿಜೆಪಿ ಮರೆ ಮಾಚುತ್ತಿದೆ ಎಂದು ಆರೋಪಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications