ಬಲವಂತವಾಗಿ ದೇವರನಾಮ ಹೇಳಿಸೋದು ಅಪಾಯಕಾರಿ ಟ್ರೆಂಡ್: ಮಾಯಾ
ಲಕ್ನೋ, ಜುಲೈ 15: ಬಲವಂತವಾಗಿ ದೇವರ ನಾಮ ಹೇಳಿಸುವ ಅಪಾಯಕಾರಿ ಟ್ರೆಂಡ್ ಇತ್ತೀಚೆಗೆ ಆರಂಭವಾಗಿದೆ. ದೇಶದ ಹಿತದೃಷ್ಟಿಯಿಂದ ಇದು ಉತ್ತಮ ಬೆಳವಣಿಗೆಯಲ್ಲ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಕಳವಳ ವ್ಯಕ್ತಪಡಿಸಿದರು.
"ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ದೇವರ ನಾಮವನ್ನು ಬಲವಂತವಾಗಿ ಹೇಳಿಸುವ ಘಟನೆಗಳು ನಡೆಯುತ್ತಿವೆ. ಇದು ಅಕ್ಷಮ್ಯ. ಇಂಥ ಘಟನೆಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇದರಿಂದ ಭ್ರಾತೃತ್ವದ ಭಾವನೆ ಉಳಿಯುತ್ತದೆ" ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಬಾಫ್ಘಟ್ ಎಂಬಲ್ಲಿ ಮೌಲ್ವಿಯೊಬ್ಬರ ಬಳಿ ಜೈ ಶ್ರೀರಾಮ್ ಎಂದು ಪಠಿಸುವಂತೆ ಒತ್ತಾಯಿಸಿ, ಅವರು ಪಠಿಸದ ಕಾರಣಕ್ಕೆ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿತ್ತು.

ಕಾನ್ಪುರದಲ್ಲೂ ಇಂಥದೇ ಘಟನೆ ನಡೆದಿತ್ತು. ಜೈಶ್ರೀರಾಮ್ ಎಂದು ಮಂತ್ರ ಪಠಿಸುವಂತೆ ಮುಸ್ಲಿಂ ಬಾಲಕನೊಬ್ಬನನ್ನು ಒತ್ತಾಯಿಸಲಾಗಿತ್ತು. ಆತ ಒಪ್ಪದಿದ್ದಾಗ ಆತನ ಟೋಪಿ ತಗೆದು, ಅನುಚಿತವಾಗಿ ವರ್ಥಿಸಿ, ಆತನನನ್ನು ಥಳಿಸಲಾಗಿತ್ತು.
ಇತ್ತೀಚೆಗೆ ಜಾರ್ಖಂಡ್ ನಲ್ಲಿ ತಬ್ರೇಝ್ ಅನ್ಸಾರಿ ಎಂಬ ಯುವಕನನ್ನು ಬೈಕ್ ಕಳ್ಳನೆಂದು ಆರೋಪಿಸಿ ಕಟ್ಟಿ ಹಾಕಿ, ಜೈ ಶ್ರೀರಾಮ್ ಎನ್ನುವಂತೆ ಒತ್ತಾಯಿಸಿ, ಆತನ ಮೇಲೆ ಹಲ್ಲೆ ಮಾಡಲಾಗಿತ್ತು. ಈ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಗಾಯಗೊಂಡದ್ದ ತಬ್ರೇಝ್ ಸರಿಯಾದ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದ್ದ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications