ಶಾರ್ಜಾಗೆ ಪರಾರಿಯಾಗಲು ಯತ್ನಿಸಿದ ಮಾಜಿ ಸಿಮಿ ಕಾರ್ಯಕರ್ತನ ಬಂಧನ
ವಾರಣಾಸಿ, ಜನವರಿ 30: ನಿಷೇಧಿತ ಸಂಘಟನೆಯಾಗಿರುವ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ(ಸಿಮಿ)ದ ಮಾಜಿ ಕಾರ್ಯಕರ್ತನೊಬ್ಬನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ವಾರಾಣಾಸಿಯಿಂದ ಶಾರ್ಜಾಗೆ ಪರಾರಿಯಾಗಲು ಯತ್ನಿಸುತ್ತಿದ್ದವನ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು.
ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿತನಾದವನನ್ನು ಮೊಹಮ್ಮದ್ ಫೈಜ್ ಎಂದು ಗುರುತಿಸಲಾಗಿದೆ. ಅಜಮ್ ಘರ್ ನ ಖುದಾ ದಾದ್ ಪುರ್ ಗ್ರಾಮದ ನಿವಾಸಿಯಾಗಿದ್ದಾರೆ.
ಪಾಸ್ ಪೋರ್ಟ್ ಚೆಕ್ಕಿಂಗ್ ವೇಳೆ ಈತ ಸಿಮಿ ಸಂಘಟನೆಯ ಮಾಜಿ ಸದಸ್ಯ ಎಂದು ತಿಳಿದು ಬಂದಿದೆ. ದೇಶವನ್ನು ತೊರೆದು ಹೊರಗೆ ಹೋಗದಂತೆ ಫೈಜ್ ಗೆ ನ್ಯಾಯಾಲಯವು ಸೂಚಿಸಿತ್ತು. 2001ರಲ್ಲೇ ಈತನ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿತ್ತು. ಬಂಧಿತನನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗಳು, ಅಜಮ್ ಘರ್ ಪೊಲೀಸರಿಗೆ ಒಪ್ಪಿಸಿದರು.

ದೇಶದ ಸಮಗ್ರತೆಗೆ ಭಂಗ, ಸಾರ್ವಜನಿಕವಾಗಿ ಶಾಂತಿ ಕದಡಿದ್ದು, ದ್ವೇಷಪೂರಿತ ಭಾಷಣ ಮುಂತಾದ ಕಾರಣಕ್ಕೆ 2001ರಲ್ಲಿ ಫೈಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. 2015ರಲ್ಲಿ ಒಮ್ಮೆ ಕೋರ್ಟಿನಿಂದ ನಿರ್ಬಂಧವಿದ್ದರೂ ಸೌದಿ ಅರೇಬಿಯದಲ್ಲಿರುವ ತನ್ನ ಮಳಿಗೆಗೆ ಹೋಗಿ ಬಂದಿದ್ದ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಉತ್ತರ ಪ್ರದೇಶದ ಅಲಿಘಡದಲ್ಲಿ ಪ್ರೊಫೆಸರ್ ಅಹ್ಮದುಲ್ಲಾ ಸಿದ್ದೀಕಿ ಏಪ್ರಿಲ್ 25, 1977ರಲ್ಲಿ ಸಿಮಿ ಸಂಘಟನೆ ಆರಂಭಿಸಿದರು. ಸಿಮಿ ಸಂಘಟನೆಯ ಹಲವರಿಗೆ ಭಾರತದಲ್ಲಿ ಶರಿಯಾ ಕಾನೂನು ಜಾರಿಯಾಗಬೇಕು. ಮತ್ತು ಈ ಪ್ರಕ್ರಿಯೆಯಲ್ಲಿ ತೊಡಗಲು ಯುವಜನರನ್ನು ಸೆಳೆಯಲು ಆರಂಭಿಸಿತು. -ಉತ್ತರ ಪ್ರದೇಶ, ಕೇರಳ, ಮಧ್ಯಪ್ರದೇಶ, ಅಸ್ಸಾಂ, ಆಂಧ್ರಪ್ರದೇಶ, ಗುಜರಾತ್, ದೆಹಲಿಯಲ್ಲಿ ಪ್ರಬಲವಾಗಿದ್ದ ಈ ಸಂಘಟನೆಗೆ 2001ರಲ್ಲಿ ಭಯೋತ್ಪಾದನಾ ನಿಗ್ರಹ ಕಾಯ್ದೆ ಅಡಿಯಲ್ಲಿ ನಿಷೇಧ ಹೇರಲಾಯಿತು. ನಿಷೇಧ ಇದ್ದ ಕಾರಣಕ್ಕೆ ಸಿಮಿಗೆ ಕೆಲಸ ಮಾಡುವುದು ಕಷ್ಟವಾಗಿದ್ದರಿಂದ ಅದರ ಕಾರ್ಯಕರ್ತರು ಗುಂಪಿನಿಂದ ಹೊರಬಂದು ಇಂಡಿಯನ್ ಮುಜಾಹಿದೀನ್ ಸೇರಲು ಮುಂದಾದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications