ರಾಕ್ಷಸನಿಗೆ ಸಿಎಂ ಯೋಗಿ ಹೋಲಿಕೆ: ಮಾಜಿ ರಾಜ್ಯಪಾಲ ಖುರೇಷಿ ವಿರುದ್ಧ ಪ್ರಕರಣ
ರಾಂಪುರ್, ಸೆಪ್ಟೆಂಬರ್ 06: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಕ್ತ ಹೀರುವ ರಾಕ್ಷಸನಿಗೆ ಹೋಲಿಕೆ ಮಾಡಿರುವ ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ರಕ್ತ ಹೀರುವ ರಾಕ್ಷಸನಿಗೆ ಹೋಲಿಕೆ ಮಾಡಿ ನೀಡಿದ್ದ ಹೇಳಿಕೆಯ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಆಜೀಜ್ ಖುರೇಷಿ ವಿರುದ್ಧ ಪ್ರಕರಣ ದಾಖಲಾಗಿದೆ.
"ಖುರೇಷಿ ಅವರು ರಾಮ್ ಪುರದಲ್ಲಿರುವ ನಾಯಕ ಆಜಮ್ ಖಾನ್ ನಿವಾಸಕ್ಕೆ ತೆರಳಿದ್ದು, ಶಾಸಕರು ಹಾಗೂ ಖಾನ್ ಅವರ ಪತ್ನಿ ತನ್ಜೀಮ್ ಫಾತೀಮಾ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ದೆವ್ವ- ರಕ್ತ ಹೀರುವ ರಾಕ್ಷಸನಿಗೆ ಹೋಲಿಕೆ ಮಾಡಿದ್ದರು" ಎಂದು ಸಕ್ಸೇನಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಖುರೇಷಿ ಅವರ ಹೇಳಿಕೆ ವಿವಾದಾತ್ಮಕವಾಗಿದ್ದು, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸುವಂತದ್ದಾಗಿದೆ ಎಂದು ಸಕ್ಸೇನಾ ತಮ್ಮ ದೂರಿನಲ್ಲಿ ಆರೋಪಿಸಿದ್ದರು.
ಬಿಜೆಪಿ ಕಾರ್ಯಕರ್ತ ಆಕಾಶ್ ಸಕ್ಸೇನಾ ರಾಮ್ ಪುರ ಜಿಲ್ಲೆಯಲ್ಲಿ ಸಿವುಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ದೂರಿನ ಆಧಾರದಲ್ಲಿ ಪೊಲೀಸರು ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಿದ್ದಾರೆ.
ಸೆಕ್ಷನ್ 124ಎ (ರಾಷ್ಟ್ರದ್ರೋಹ) 153 ಎ ( ಧರ್ಮಗಳ ನಡುವೆ ದ್ವೇಷ ಹರಡುವುದು) 153 ಬಿ ( ಸೂಚನೆಗಳು, ಪ್ರತಿಪಾದನೆಗಳು ರಾಷ್ಟ್ರೀಯ ಏಕೀಕರಣಕ್ಕೆ ಹಾನಿಕಾರಕ) 505 (1) (ಬಿ) ಜನತೆಯಲ್ಲಿ ಆತಂಕ ಮೂಡಿಸುವ ಯತ್ನದ ಆರೋಪದಡಿ ಮಾಜಿ ರಾಜ್ಯಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಜೀಜ್ ಖುರೇಷಿ ಮೂಲತಃ ಮಧ್ಯಪ್ರದೇಶದ ಭೋಪಾಲ್ನ ಹಿರಿಯ ಕಾಂಗ್ರೆಸ್ ನಾಯಕ. ಅವರಿಗೆ ಈಗ 81 ವರ್ಷ. ಉತ್ತರಾಖಂಡ, ಉತ್ತರಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನು ಅಜೀಂ ಖಾನ್ ಮತ್ತು ಅವರ ಪುತ್ರ ಸದ್ಯ ಜೈಲಿನಲ್ಲಿದ್ದಾರೆ. ಫೋರ್ಜರಿ, ನಕಲಿ ಬರ್ತ್ ಸರ್ಟಿಫಿಕೇಟ್ ಸೇರಿ ಹಲವು ಪ್ರಕರಣಗಳಲ್ಲಿ ಅಜೀಂ ಖಾನ್, ಅವರ ಪತ್ನಿ ಮತ್ತು ಪುತ್ರ ಮೂವರೂ ಕಳೆದ ವರ್ಷ ಜೈಲು ಸೇರಿದ್ದರು. ಅದರಲ್ಲಿ ಪತ್ನಿ ಫಾತ್ಮಾಗೆ ಜಾಮೀನು ಸಿಕ್ಕಿದೆ.
ಅಜಂ ಖಾನ್ಗೆ ಇಲ್ಲಿನ ಸರ್ಕಾರ ಎಷ್ಟು ಹಿಂಸೆ ನೀಡುತ್ತಿದೆ ಎಂಬುದನ್ನು ವಿವರಿಸಬೇಕಾಗಿಲ್ಲ. ನಾನೀಗ ಇಲ್ಲಿಗೆ, ಫಾತ್ಮಾರಿಗೆ ಧೈರ್ಯ ತುಂಬಲು ಬಂದಿದ್ದೇನೆ. ನಾವು, ಜನರು ಆಕೆಯೊಂದಿಗೆ ಸದಾ ಇರುತ್ತೇವೆ.
ಯೋಗಿ ಆದಿತ್ಯನಾಥ್ ಸರ್ಕಾರ ರಾಕ್ಷಸ ಸರ್ಕಾರ ಮತ್ತು ಜನರ ರಕ್ತ ಹೀರುವ ಪಿಶಾಚಿಗಳು ಎಂದು ವಾಗ್ದಾಳಿ ನಡೆಸಿದ್ದರು. ಅಷ್ಟೇ ಅಲ್ಲ, ಅಜೀಂ ಖಾನ್ ನಮ್ಮ ಮುಸ್ಲಿಂ ಸಮುದಾಯದ ಒಳಿತಿಗಾಗಿ ಕೆಲಸ ಮಾಡಿದ್ದರು.
ಆದರೆ ಕೆಲವರಿಗೆ ನಮ್ಮ ಸಮುದಾಯ ಶಿಕ್ಷಣವಂತರಾಗುವುದು, ಅವರಿಗೆ ಒಳಿತಾಗುವುದು ಇಷ್ಟವಿಲ್ಲ' ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications