ಮಾಜಿ ಉಪರಾಷ್ಟ್ರಪತಿ ಪತ್ನಿಯಿಂದ ಮದರಸಾದಲ್ಲಿ ದೇಗುಲ ನಿರ್ಮಾಣ
ಅಲೀಗಢ (ಉತ್ತರಪ್ರದೇಶ), ಜುಲೈ 14: ಹಿಂದೂ- ಮುಸ್ಲಿಮರ ಬಾಂಧವ್ಯದ ದ್ಯೋತಕವಾಗಿ, ಆ ಬಂಧ ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನವಾಗಿ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಪತ್ನಿ ಸಲ್ಮಾ ಅವರು ಮದರಸಾದಲ್ಲಿ ದೇವಾಲಯ ಹಾಗೂ ಮಸೀದಿ ನಿರ್ಮಿಸಲು ಮುಂದಾಗಿದ್ದಾರೆ. ಉತ್ತರಪ್ರದೇಶದ ಅಲೀಗಢದಲ್ಲಿ ಸಲ್ಮಾ ಅವರು 'ಚಾಚಾ ನೆಹರೂ ಮದರಸಾ' ನಡೆಸುತ್ತಾರೆ.
ಮಾಧ್ಯಮಗಳ ಜತೆಗೆ ಮಾತನಾಡಿದ ಸಲ್ಮಾ, ಇಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಭದ್ರತೆ ಹಾಗೂ ಸುರಕ್ಷತೆಗೂ ಇದರಿಂದ ಅನುಕೂಲ ಆಗುತ್ತದೆ ಎಂದಿದ್ದಾರೆ. ಮದರಸಾದಿಂದ ಹೊರಗೆ ಮಸೀದಿಗೋ ಅಥವಾ ದೇವಾಲಯಕ್ಕೋ ಹೋದಾಗ ಅಹಿತಕರ ಘಟನೆ ನಡೆದರೆ ಅದಕ್ಕೆ ನಾವು ಜವಾಬ್ದಾರರಾಗುತ್ತೇವೆ. ಆದ್ದರಿಂದ ಮಕ್ಕಳ ಸುರಕ್ಷತೆ ಮತ್ತು ಭದ್ರತೆ ಸಲುವಾಗಿ ಮದರಸಾದ ಒಳಗೆ ಮಸೀದಿ- ದೇಗುಲ ನಿರ್ಮಾಣಕ್ಕೆ ನಿರ್ಧರಿಸಿದೆವು ಎಂದು ಹೇಳಿದ್ದಾರೆ.

ನಾವು ನಡೆಸುತ್ತಿರುವ ಈ ಮದರಸಾದಲ್ಲಿ ಹಿಂದೂ- ಮುಸ್ಲಿಂ ಎರಡೂ ಧರ್ಮದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದ್ದರಿಂದ ಅವರ ಸುರಕ್ಷತೆ ಹಾಗೂ ಭದ್ರತೆ ನಮಗೆ ಮುಖ್ಯ. ಅಂದ ಹಾಗೆ ಗುಂಪು ಹಲ್ಲೆ ತಡೆಯುವ ನಿಟ್ಟಿನಲ್ಲಿ ಮರಣದಂಡನೆಯೇ ಸರಿಯಾದ ದಾರಿ. ಇಂಥ ಅಪರಾಧಗಳು ಸಮಾಜದ ಕಪ್ಪು ಚುಕ್ಕೆ ಎಂದು ಸಲ್ಮಾ ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications