ಗೋರಖಪುರ ಮಠದಲ್ಲೇ ಯೋಗಿ ಆದಿತ್ಯನಾಥ್ ಮೇಲೆ ದಾಳಿಗೆ ಪಾಕ್ ಉಗ್ರರ ಸ್ಕೆಚ್
ಲಕ್ನೋ, ಫೆ 14: ಪ್ರಬಲ ಹಿಂದುತ್ವ ಪ್ರತಿಪಾದಕ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸ್ಕೆಚ್ ಹಾಕಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಮಾಧ್ಯಮದವರ ಸೋಗಿನಲ್ಲಿ ಬಂದು, ಗೋರಖಪುರ ಮಠದಲ್ಲೇ ಯೋಗಿ ಆದಿತ್ಯನಾಥ್ ಮೇಲೆ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದು, ಭದ್ರತಾ ವ್ಯವಸ್ಥೆ ಹೆಚ್ಚಿಸುವಂತೆ ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆಗೆ ಸೂಚಿಸಿದೆ.
ನಾಥ ಪರಂಪರೆಯ ಗೋರಖನಾಥ್ ಮಠದ ಸಂತರಾಗಿರುವ ಯೋಗಿ ಆದಿತ್ಯನಾಥ್ ಅವರನ್ನು ಸಂದರ್ಶನ ಮಾಡುವ ಸೋಗಿನಲ್ಲಿ ಬಂದು, ದಾಳಿ ನಡೆಸುವ ಪ್ಲಾನ್ ಹಾಕಿಕೊಳ್ಳಲಾಗಿದೆ ಎಂದು ಇಲಾಖೆ, ಉತ್ತರ ಪ್ರದೇಶ ಸರಕಾರಕ್ಕೆ ತಿಳಿಸಿದೆ.

ಈ ಹಿನ್ನಲೆಯಲ್ಲಿ, ಸಿಎಂ ಯೋಗಿ ಆದಿತ್ಯನಾಥ್ ಅವರ ಪತ್ರಿಕಾಗೋಷ್ಠಿ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಭಾವಚಿತ್ರವನ್ನೊಳಗೊಂಡ ನೂತನ ಗುರುತಿನ ಚೀಟಿ ಹಂಚಿಕೆ ಮಾಡಲು, ಉತ್ತರಪ್ರದೇಶ ಪೊಲೀಸರು ನಿರ್ಧರಿಸಿದ್ದಾರೆ.
ಉಗ್ರರ ದಾಳಿಯ ಸಾಧ್ಯತೆಯ ಅಲರ್ಟ್ ಬಂದ ನಂತರ, ಗೋರಖಪುರ ಮಠಕ್ಕೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈಗಾಗಲೇ, ಉಗ್ರರ ಹಿಟ್ ಲಿಸ್ಟ್ ನಲ್ಲಿರುವ ಯೋಗಿ ಆದಿತ್ಯನಾಥ್ ಗೆ Zಪ್ಲಸ್ ಭದ್ರತೆಯನ್ನು ನೀಡಲಾಗುತ್ತಿದೆ.
ಕಳೆದ ಆರು ತಿಂಗಳಲ್ಲಿ ಯೋಗಿ ಆದಿತ್ಯನಾಥ್ ಮೇಲೆ ದಾಳಿಯ ಸಾಧ್ಯತೆಯ ಬಗ್ಗೆ ಬಂದ ಎರಡನೇ ಎಚ್ಚರಿಕೆ ಇದಾಗಿದೆ. ಈ ಹಿಂದೆ, ಕಳೆದ ಆಗಸ್ಟ್ ತಿಂಗಳಲ್ಲೂ ಇದೇ ರೀತಿ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications