ಹುಡುಗಿಯರಿಗೆ ಮೊಬೈಲ್ ನೀಡಬಾರದು, ಅದು ಅತ್ಯಾಚಾರಕ್ಕೆ ಕಾರಣವಾಗುತ್ತೆ ಎಂದ ಯುಪಿ ಮಹಿಳಾ ಆಯೋಗ ಸದಸ್ಯೆ!
ಲಕ್ನೋ, ಜೂ. 10: ''ಹುಡುಗಿಯರಿಗೆ ಮೊಬೈಲ್ ಫೋನ್ ನೀಡಬಾರದು, ಅದು ಅತ್ಯಾಚಾರಗಳಿಗೆ ಕಾರಣವಾಗುತ್ತದೆ'' ಎಂಬ ವಿವಾದಾತ್ಮಕ ಹೇಳಿಕೆಯನ್ನು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯೆ ನೀಡಿದ್ದಾರೆ. ಅಲಿಗಢ ಜಿಲ್ಲೆಯ ಮಹಿಳೆಗೆ ಸಂಬಂಧಿಸಿದ ದೂರಿನ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ಮೀನಾ ಕುಮಾರಿ ಈ ಹೇಳಿಕೆ ನೀಡಿದ್ದಾರೆ.
"ಹುಡುಗಿಯರಿಗೆ ಮೊಬೈಲ್ ಫೋನ್ ನೀಡಬಾರದು. ಹುಡುಗಿಯರು ಹುಡುಗರೊಂದಿಗೆ ಗಂಟೆಗಟ್ಟಲೆ ಫೋನ್ಗಳಲ್ಲಿ ಮಾತನಾಡುತ್ತಾರೆ. ಬಳಿಕ ಹುಡುಗರೊಂದಿಗೆ ಓಡಿಹೋಗುತ್ತಾರೆ. ಹುಡುಗಿಯರ ಫೋನ್ಗಳನ್ನು ಕೂಡಾ ಈ ಪರಿಶೀಲನೆ ಮಾಡಲಾಗುತ್ತಿಲ್ಲ. ಕುಟುಂಬ ಸದಸ್ಯರಿಗೆ ಈ ವಿಚಾರದ ಅರಿವೇ ಇರುವುದಿಲ್ಲ" ಎಂದು ಯುಪಿ ಮಹಿಳಾ ಆಯೋಗದ ಸದದ್ಯೆ ಮೀನಾ ಕುಮಾರಿ ಹೇಳಿದ್ದಾರೆ.
''ಮಹಿಳೆಯರ ಮೇಲಿನ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಸಮಾಜವೇ ಗಂಭೀರವಾಗಿರಬೇಕು. ಪೋಷಕರು, ವಿಶೇಷವಾಗಿ ತಾಯಂದಿರು ದೊಡ್ಡ ಜವಾಬ್ದಾರಿಯನ್ನು ಹೊಂದಿದ್ದಾರೆ. ತಾಯಂದಿರು ತಮ್ಮ ಹೆಣ್ಣುಮಕ್ಕಳ ಮೇಲೆ ನಿಗಾವಹಿಸಬೇಕು. ಈ ವಿಚಾರದಲ್ಲಿ ತಾಯಂದಿರಿಗೆ ದೊಡ್ಡ ಜವಾಬ್ದಾರಿ ಇದೆ. ತಾಯಂದಿರು ತಮ್ಮ ಹೆಣ್ಣುಮಕ್ಕಳ ಬಗ್ಗೆ ಅಸಡ್ಡೆ ಹೊಂದಿದ್ದರೆ, ಮುಂದಿನ ಪರಿಣಾಮಕ್ಕೆ ತಾಯಂದಿರೇ ಜವಾಬ್ದಾರರು" ಎಂದಿದ್ದಾರೆ.

ಆದರೆ ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಆಯೋಗದ ಉಪಾಧ್ಯಕ್ಷೆ ಅಂಜು ಚೌಧರಿ, ''ಹೆಣ್ಣು ಮಕ್ಕಳಿಗೆ ಮೊಬೈಲ್ ಫೋನ್ ನೀಡದಿರುವುದು ಲೈಂಗಿಕ ದೌರ್ಜನ್ಯವನ್ನು ಕೊನೆಗೊಳಿಸಲು ಇರುವ ಉಪಾಯವಲ್ಲ, ಇದು ಪರಿಹಾರವೂ ಅಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.
ಜನವರಿಯಲ್ಲಿ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಮುಖಿ ದೇವಿ ಬಾದೌನ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ತಮ್ಮ ಅಭಿಪ್ರಾಯ ನೀಡುವ ಸಂದರ್ಭ ಈ ರೀತಿಯೇ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ''ಮಹಿಳೆಯರು ಸಂಜೆ ಹೊರಗೆ ಹೋಗದಿದ್ದರೆ ಈ ಘಟನೆಯನ್ನು ತಪ್ಪಿಸಬಹುದಿತ್ತು'' ಎಂದು ಕೂಡಾ ಹೇಳಿದ್ದರು. ಈ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಚಂದ್ರಮುಖಿ ದೇವಿ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದರು.
(ಒನ್ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications