ಜ್ಞಾನವಾಪಿ ಪ್ರಕರಣ: ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ವಕೀಲ ನಿಧನ

ಲಕ್ನೋ, ಆಗಸ್ಟ್‌ 1: ಜ್ಞಾನವಾಪಿ ಪ್ರಕರಣದಲ್ಲಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲ ಅಭಯ್ ನಾಥ್ ಯಾದವ್ ಭಾನುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಕೀಲ ಯಾದವ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಬನಾರಸ್ ಬಾರ್ ಅಸೋಸಿಯೇಶನ್‌ನ ಹಿರಿಯ ವಕೀಲ ನಿತ್ಯಾನಂದ ರೈ ಹೇಳಿದ್ದಾರೆ.

ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ ಈವರೆಗೂ ನಡೆಯುತ್ತಲೇ ಇದೆ. ಪ್ರಸ್ತುತ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಪುರಾತನ ದೇವಾಲಯವನ್ನು ಮರುಸ್ಥಾಪಿಸುವಂತೆ ಕೋರಿ ಮೊಕದ್ದಮೆ ಹೂಡಲಾಗಿದೆ. ಮಸೀದಿಯು ದೇವಾಲಯದ ಒಂದು ಭಾಗವಾಗಿದೆ ಎಂದು ಅರ್ಜಿದಾರರು ದಾವೆಯಲ್ಲಿ ಪ್ರತಿಪಾದಿಸಿದ್ದಾರೆ.

ಜುಲೈ 26 ರಂದು ಅಲಹಾಬಾದ್ ಹೈಕೋರ್ಟ್ ಹಿಂದೂ ಅರ್ಜಿದಾರರ ಪೂಜೆಯ ಹಕ್ಕನ್ನು ಕೋರಿ 1991ರ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮನ್ ಇಂತಾಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದೆ.

'ಧಾರ್ಮಿಕ ಸ್ಥಳದ ಬಗ್ಗೆ ಯಾವುದೇ ಹಕ್ಕು ಮಂಡಿಸಲು ಸಾಧ್ಯವಿಲ್ಲ'

'ಧಾರ್ಮಿಕ ಸ್ಥಳದ ಬಗ್ಗೆ ಯಾವುದೇ ಹಕ್ಕು ಮಂಡಿಸಲು ಸಾಧ್ಯವಿಲ್ಲ'

1991ರ ಕಾಯಿದೆಯ ಪ್ರಕಾರ, 1947ರ ಆಗಸ್ಟ್ 15ರಂದು ಇದ್ದಂತಹ ಯಾವುದೇ ಧಾರ್ಮಿಕ ಸ್ಥಳದ ಸ್ಥಾನಮಾನ ಬದಲಾವಣೆಗೆ ಯಾವುದೇ ಪರಿಹಾರ ಕೋರುವಂತಿಲ್ಲ ಎಂದು ಮಸೀದಿ ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ. ಜ್ಞಾನವಾಪಿ ಮಸೀದಿಯ ಪರವಾಗಿ ಹಾಜರಾದ ವಕೀಲ ಎಸ್‌ಎಫ್‌ಎ ನಖ್ವಿ, 1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯ ಸೆಕ್ಷನ್ 4 ರ ನಿಬಂಧನೆಗಳ ಅಡಿಯಲ್ಲಿ ಮೊಕದ್ದಮೆಯನ್ನು ಕಾನೂನಿನಿಂದ ನಿಷೇಧಿಸಲಾಗಿದೆ ಎಂದು ವಾದಿಸಿದರು. ನಖ್ವಿ ಅವರು ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಬದಲಾಯಿಸಲು ಮೊಕದ್ದಮೆ ಅಥವಾ ಯಾವುದೇ ಇತರ ಕಾನೂನು ಪ್ರಕ್ರಿಯೆಗಳನ್ನು ಸಲ್ಲಿಸುವ ಈ ನಿಬಂಧನೆಯನ್ನು ಸಲ್ಲಿಸಿದರು. ಹಾಗಾಗಿ 1947ರ ಆಗಸ್ಟ್ 15ರಂದು ಇದ್ದ ಧಾರ್ಮಿಕ ಸ್ಥಳದ ಬಗ್ಗೆ ಯಾವುದೇ ಹಕ್ಕು ಮಂಡಿಸಲು ಸಾಧ್ಯವಿಲ್ಲ ಎಂದರು.

ನ್ಯಾಯಾಧೀಶರಿಗೆ ಬೆದರಿಕೆ ಪತ್ರ

ನ್ಯಾಯಾಧೀಶರಿಗೆ ಬೆದರಿಕೆ ಪತ್ರ

ಯಾವುದೇ ಹಂತದಲ್ಲಿ ಯಾವುದೇ ದಾವೆಯ ನಿರ್ವಹಣೆಯ ಬಗ್ಗೆ ಆಕ್ಷೇಪಣೆಯನ್ನು ಎತ್ತುವ ಅರ್ಜಿಯನ್ನು ಸಲ್ಲಿಸಿದ್ದರೆ, ಅದನ್ನು ಕೆಳ ನ್ಯಾಯಾಲಯ ಮೊದಲು ನಿರ್ಧರಿಸಬೇಕು ಮತ್ತು ನಂತರ ಮೊಕದ್ದಮೆಯನ್ನು ಮುಂದುವರಿಸಬೇಕು ಎಂದು ನಖ್ವಿ ವಾದಿಸಿದರು. 1991 ರಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಲಾದ ಮೂಲ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮನ್ ಇಂತಾಝಾಮಿಯಾ ಮಸೀದಿ ಸಮಿತಿ ಸಲ್ಲಿಸಿದ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಪ್ರಕಾಶ್ ಪಾಡಿಯಾ ಅವರು ಆಗಸ್ಟ್ 3 ಕ್ಕೆ ಮುಂದೂಡಿದ್ದಾರೆ.

ಈ ಹಿಂದೆ, ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಕೈ ಬರಹದ ಬೆದರಿಕೆ ಪತ್ರ ಬಂದಿತ್ತು. ನ್ಯಾಯಾಧೀಶರ ಭದ್ರತೆಗಾಗಿ ಒಟ್ಟು ಒಂಬತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಅವಕಾಶಕ್ಕೆ ಮನವಿ

ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಅವಕಾಶಕ್ಕೆ ಮನವಿ

ಜ್ಞಾನವಾಪಿ ಕಾಂಪ್ಲೆಕ್ಸ್‌ನಲ್ಲಿ ಹಿಂದೂ ದೇವರ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕೋರಿ 1991ರಲ್ಲಿ ವಾರಾಣಸಿ ಜಿಲ್ಲಾ ನ್ಯಾಯಾಲಯಕ್ಕೆ ಕೆಲವಾರು ಅರ್ಜಿಗಳು ಸಲ್ಲಿಕೆಯಾದವು. 17ನೇ ಶತಮಾನದಲ್ಲಿ ಮೊಘಲ್ ದೊರೆ ಔರಂಗಜೇಬರ ಆದೇಶದಂತೆ ಕಾಶಿ ವಿಶ್ವನಾಥ ಮಂದಿರದ ಒಂದು ಭಾಗವನ್ನು ಕೆಡವಿ ಜ್ಞಾನವ್ಯಾಪಿ ಮಸೀದಿ ಕಟ್ಟಲಾಯಿತು ಎಂಬುದು ಅರ್ಜಿದಾರರ ವಾದವಾಗಿತ್ತು. 2019ರಲ್ಲಿ ಜ್ಞಾನವಾಪಿ ಮಸೀದಿ ಕಾಂಪ್ಲೆಕ್ಸ್‌ನ ಇಡೀ ಪ್ರದೇಶದಲ್ಲಿ ಸರ್ವೇಕ್ಷಣೆ ನಡೆಯಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು. 2021 ಸೆಪ್ಟೆಂಬರ್ 9ರಂದು ಅಲಹಾಬಾದ್ ಹೈಕೋರ್ಟ್ ಜ್ಞಾನವಾಪಿಯಲ್ಲಿ ಸರ್ವೇಕ್ಷಣೆ ಕಾರ್ಯಕ್ಕೆ ತಡೆ ನೀಡಿತು. ಈಗ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಶೃಂಗಾರ್ ಗೌರಿ ಮತ್ತಿತರ ಹಿಂದೂ ದೇವರ ವಿಗ್ರಹಗಳಿದ್ದು ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕೊಡಬೇಕೆಂದು ಐವರು ಹಿಂದೂ ಅರ್ಜಿದಾರರು ಮನವಿ ಮಾಡಿದ್ದಾರೆ. ಈ ಮನವಿಗಳ ವಿಚಾರಣೆ ಹಾಗೂ ಮಸೀದಿಯಲ್ಲಿ ಶಿವಲಿಂಗ ಇರುವ ಬಗ್ಗೆ ವಿಚಾರಣೆ ನಡೆಯುತ್ತಿದೆ.

ಮುಸ್ಲಿಮರ ವಾದವೇನು?

ಮುಸ್ಲಿಮರ ವಾದವೇನು?

ಜ್ಞಾನವಾಪಿ ಮಸೀದಿಯಲ್ಲಿರುವ ಹಿಂದೂ ದೇವರುಗಳಿಗೆ ನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೊಡಬೇಕು ಎನ್ನುವುದು ಹಿಂದೂಗಳ ವಾದವಾಗಿದೆ. ಇಡೀ ಸಂಕೀರ್ಣದ ಸರ್ವೇಕ್ಷಣೆ ನಡೆಯಬೇಕು ಎಂಬುದು ಹಿಂದೂ ಸಮುದಾಯದವರ ಬೇಡಿಕೆ. ಶೃಂಗಾರ್ ಗೌರಿ ವಿಗ್ರಹ ಇರುವುದನ್ನು ಋಜುವಾತುಡಿಸಲು ಮಸೀದಿಯೊಳಗೆ ಪ್ರವೇಶ ಮಾಡಬೇಕು. ಅದಕ್ಕಾಗಿ ಮಸೀದಿಗೆ ಹೋಗಿ ವಿಡಿಯೋ ಶೂಟ್ ಮಾಡಲು ಸರ್ವೇಕ್ಷಣಾ ತಂಡಕ್ಕೆ ಅನುವು ಮಾಡಿಕೊಡಬೇಕು ಎಂಬುದು ಹಿಂದೂಗಳ ವಾದ.

ಜ್ಞಾನವಾಪಿ ಮಸೀದಿಯ ಪಶ್ಚಿಮ ಭಾಗದ ಗೋಡೆಯ ಹೊರಗೆ ಶೃಂಗಾರ್ ಗೌರಿ ವಿಗ್ರಹ ಇರುವುದು. ಮಸೀದಿ ಒಳಗೆ ಯಾವುದೇ ವಿಗ್ರಹಗಳು ಇಲ್ಲ ಜ್ಞಾನವಾಪಿ ಮಸೀದಿಯ ನಿರ್ವಹಣಾ ಸಮಿತಿ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+