ಮಸೀದಿ ವಿಡಿಯೋ ಸಾರ್ವಜನಿಕಗೊಳಿಸುವಂತಿಲ್ಲ: ಕೋರ್ಟ್
ವಾರಣಾಸಿ ಮೇ 31: ಕಾಶಿ ವಿಶ್ವನಾಥ-ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೇಮಿಸಿದ ಸಮೀಕ್ಷೆ ಆಯೋಗವು ತೆಗೆದ ವಿಡಿಯೋ ಮತ್ತು ಛಾಯಾಚಿತ್ರಗಳ ಪ್ರತಿಗಳನ್ನು ಕಕ್ಷಿದಾರರು ಪಡೆಯಲು ವಾರಣಾಸಿ ನ್ಯಾಯಾಲಯ ಅನುಮತಿ ನೀಡಿದೆ.
ಸಮೀಕ್ಷೆಯ ವರದಿ, ವಿಡಿಯೋಗಳು, ಛಾಯಾಚಿತ್ರಗಳನ್ನು ನ್ಯಾಯಾಲಯಕ್ಕೆ ಮೇ 19ರಂದು ಸಲ್ಲಿಸಲಾಗಿತ್ತು. ಪ್ರಕರಣದ ಸೂಕ್ಷ್ಮತೆಯ ದೃಷ್ಟಿಯಿಂದ ಕಮಿಷನರ್ ವರದಿಯ ವಿರುದ್ಧ ಆಕ್ಷೇಪಣೆಗಳನ್ನು ಸಲ್ಲಿಸಲು ಮಾತ್ರ ಕಕ್ಷಿದಾರರು ವಿಡಿಯೋಗಳು, ಛಾಯಾಚಿತ್ರಗಳನ್ನು ಬಳಸಬಹುದು ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೇ ವಿಡಿಯೋ, ಚಿತ್ರಗಳನ್ನುಸಾರ್ವಜನಿಕಗೊಳಿಸುವಂತಿಲ್ಲ ಎಂದು ಮೇ 30ರ ಆದೇಶದಲ್ಲಿ ವಾರಣಾಸಿ ನ್ಯಾಯಾಲಯ ತಿಳಿಸಿದೆ.
ಪ್ರಕರಣದ ಕಕ್ಷಿದಾರರಿಗೆ ಮಾತ್ರ ವಿಡಿಯೋ ಮತ್ತು ಛಾಯಾಗ್ರಹಣದ ಪ್ರತಿಗಳನ್ನು ಒದಗಿಸಬೇಕು ಮತ್ತು ಕಕ್ಷಿದಾರರು ಅದನ್ನು ನ್ಯಾಯಾಲಯದ ಅನುಮತಿಯಿಲ್ಲದೆ ಸಾರ್ವಜನಿಕಗೊಳಿಸುವುದಿಲ್ಲ ಅಥವಾ ಅನಧಿಕೃತ ಬಳಕೆಗಾಗಿ ಹಂಚಿಕೊಳ್ಳುವುದಿಲ್ಲ ಎಂದು ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಕಮೀಷನರ್ ವರದಿಯ ವಿಡಿಯೋ ಮತ್ತು ಛಾಯಾಗ್ರಹಣದ ಪ್ರತಿಗಳನ್ನು ಕೋರಿ 5 ಹಿಂದೂ ಮಹಿಳಾ ಭಕ್ತರು ಸಲ್ಲಿಸಿರುವ ಅರ್ಜಿಯ ಸಂಬಂಧ ಈ ಆದೇಶ ಬಂದಿದೆ. ಆದರೆ ವಿಡಿಯೋವನ್ನು ಸಾರ್ವಜನಿಕಗೊಳಿಸಬೇಕೆಂಬ ಬೇಡಿಕೆಯನ್ನು ಮಸೀದಿ ಸಮಿತಿ ವಿರೋಧಿಸಿತ್ತು.

ಸರ್ವೆ ವಿಡಿಯೋ ವೈರಲ್
ನ್ಯಾಯಾಲಯದ ಅನುಮತಿಯಿಲ್ಲದೇ ಸಾರ್ವಜನಿಕಗೊಳಿಸುವುದಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಕೆಯಾದ ನಂತರ 5 ಹಿಂದೂ ಮಹಿಳಾ ಭಕ್ತರಿಗೆ ಸೋಮವಾರ ವಿಡಿಯೋ ಪ್ರತಿಗಳನ್ನು ಹಸ್ತಾಂತರಿಸಲಾಯಿತು. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಫೋಟೋ ಮತ್ತು ವಿಡಿಯೋಗಳು ಲೀಕ್ ಆಗಿದ್ದು, ಸರ್ವೆ ವಿಡಿಯೋಗಳು ವೈರಲ್ ಆಯಿತು. ಹಲವು ಸುದ್ದಿ ವಾಹಿನಿಗಳು ಸರ್ವೆ ವಿಡಿಯೋಗಳನ್ನು ಪ್ರಸಾರ ಮಾಡಿತು.

ಔರಂಗಜೇಬರ ಕಾಲದ ಮಸೀದಿ
17ನೇ ಶತಮಾನದಲ್ಲಿ ಮೊಗಲ್ ದೊರೆ ಔರಂಗಜೇಬನ ಕಾಲದಲ್ಲಿ ಜ್ಞಾನವಾಪಿ ಮಸೀದಿ ಕಟ್ಟಲಾಗಿದೆ. ಆದರೆ, ಕಾಶಿ ವಿಶ್ವನಾಥ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಅದರ ಮೇಲೆ ಮಸೀದಿ ನಿರ್ಮಿಸಲಾಗಿದೆ ಎಂಬುದು ಹಿಂದೂಗಳ ವಾದ. ಕಾಶಿ ವಿಶ್ವನಾಥ ದೇವಸ್ಥಾನದ ಬದಿಯಲ್ಲಿರುವ ಜ್ಞಾನವಾಪಿ ಮಸೀದಿಯೊಳಗೆ ಹಿಂದೂ ದೇವರುಗಳ ವಿಗ್ರಹಗಳಿದ್ದು, ಅದಕ್ಕೆ ಪೂಜೆ ಸಲ್ಲಿಸಲು ಅವಕಾಶ ಕೊಡಬೇಕೆಂದು ಕೋರಿ ಐವರು ಮಹಿಳೆಯರು ಈ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದರು.

ವಿವಾದಿತ ಸ್ಥಳ ಸೀಲ್
ಸ್ಥಳೀಯ ವಾರಣಾಸಿ ನ್ಯಾಯಾಲಯ ಸರ್ವೆ ಕಮಿಷನ್ ನೇಮಿಸಿ, ಮಸೀದಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಇದರಂತೆ ಮೇ 19ರಂದು ಸರ್ವೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಸರ್ವೆ ಕಮಿಷನ್ ಮಸೀದಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿವ ಲಿಂಗ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮಸೀದಿ ಸ್ಥಳವನ್ನು ಸೀಲ್ ಮಾಡಲಾಗಿದೆ. ಸೀಲ್ ಮಾಡಲಾದ ಪ್ರದೇಶಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಕೋರ್ಟ್ ಈ ಹಿಂದೆ ಆದೇಶ ನೀಡಿದೆ.

ಮಸೀದಿಯಲ್ಲಿ ಶಿವಲಿಂಗ ಪತ್ತೆ
ವಾರಣಾಸಿ ನ್ಯಾಯಾಲಯದ ಸರ್ವೆ ಆದೇಶವನ್ನು ಪಶ್ನಿಸಿ ಮಸೀದಿ ಸಮಿತಿಯು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಮೇ 17ರಂದು ವಿಚಾರಣೆ ವೇಳೆ ಸುಪ್ರೀಂಕೋರ್ಟ್, ಗ್ಯಾನವಾಪಿ ಮಸೀದಿಯ ಸಮೀಕ್ಷೆಯ ಸಮಯದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಲಾದ ಸ್ಥಳವನ್ನು ರಕ್ಷಿಸಲು ವಾರಣಾಸಿಯ ಸಿವಿಲ್ ನ್ಯಾಯಾಧೀಶರು ಹೊರಡಿಸಿದ ಆದೇಶವು ನಮಾಜ್ ಮಾಡಲು ಮತ್ತು ಧಾರ್ಮಿಕ ಆಚರಣೆಗಳಿಗೆ ಮಸೀದಿಯನ್ನು ಪ್ರವೇಶಿಸುವ ಮುಸ್ಲಿಮರ ಹಕ್ಕನ್ನು ನಿರ್ಬಂಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನಂತರ ಮೇ 20ರಂದು, ಕಾಶಿ ವಿಶ್ವನಾಥ-ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಾರಣಾಸಿ ನ್ಯಾಯಾಲಯಕ್ಕೆ ವರ್ಗಾಯಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications