ಹತ್ರಾಸ್ ಅತ್ಯಾಚಾರ: ಸರ್ಕಾರ, ಪೊಲೀಸರಿಗೆ ಹೈಕೋರ್ಟ್ ಸಮನ್
ಲಕ್ನೋ, ಅಕ್ಟೋಬರ್ 1: ಹತ್ರಾಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ರಾಜ್ಯ ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಸಮನ್ ನೀಡಿದೆ. ಘಟನೆ ದೇಶದಾದ್ಯಂತ ಕಿಡಿ ಹೊಚ್ಚಿಸಿರುವುದನ್ನು ಗಮನಿಸಿರುವ ಹೈಕೋರ್ಟ್, ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿದೆ. ಅ. 12ರಂದು ತಮ್ಮ ಮುಂದೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅತ್ಯಾಚಾರ ಸಂತ್ರಸ್ತೆಯ ಮೃತದೇಹವನ್ನು ಮಧ್ಯರಾತ್ರಿ ಅಂತ್ಯ ಸಂಸ್ಕಾರಕ್ಕೆ ಒಳಪಡಿಸಿರುವುದು 'ನಮ್ಮ ಆತ್ಮಸಾಕ್ಷಿಗೆ ಆಘಾತ ಉಂಟುಮಾಡಿದೆ' ಎಂದು ಹೈಕೋರ್ಟ್ ಹೇಳಿದೆ. ಯುವತಿಯ ಅತ್ಯಾಚಾರ ಮತ್ತು ತರಾತುರಿಯ ಅಂತ್ಯಸಂಸ್ಕಾರದ ಘಟನೆಯ ಕುರಿತು 11 ಪುಟಗಳ ಆದೇಶ ನೀಡಿರುವ ಕೋರ್ಟ್, ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಪರಿಗಣಿಸಿರುವುದಾಗಿ ತಿಳಿಸಿದೆ.
ನ್ಯಾಯಮೂರ್ತಿಗಳಾದ ಜಸ್ಪ್ರೀತ್ ಸಿಂಗ್ ಮತ್ತು ರಾಜನ್ ರಾಯ್ ಅವರು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬದ ಸದಸ್ಯರಿಗೆ ಕೂಡ ಸಮನ್ ನೀಡಿದೆ. ಕುಟುಂಬದ ಸದಸ್ಯರ ಮೇಲೆ ಯಾವುದೇ ರೀತಿಯಲ್ಲಿ ಮತ್ತು ಯಾರಿಂದಲೂ ದಬ್ಬಾಳಿಕೆ, ಒತ್ತಡ ಅಥವಾ ಪ್ರಭಾವ ಬೀರುವ ಕೆಲಸ ನಡೆಯದಂತೆ ಸರ್ಕಾರ ಖಾತರಿಪಡಿಸಬೇಕು ಎಂದು ಸೂಚನೆ ನೀಡಿದೆ.

ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳದೆ ಮೃತಪಟ್ಟ ಯುವತಿಯ ಅಂತ್ಯಸಂಸ್ಕಾರವನ್ನು ಕುಟುಂಬದವ ಅನುಮತಿ ಪಡೆಯದೆಯೇ ಮಧ್ಯರಾತ್ರಿ ನಡೆಸಿದ್ದರ ಬಗ್ಗೆ ವಿವಿಧ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ ನ್ಯಾಯಾಲಯ, ಮೃತ ವ್ಯಕ್ತಿಗೆ ಸರ್ಕಾರ ಸೂಕ್ತ ಗೌರವ ನೀಡಬೇಕು ಎಂದು ಹೇಳಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications