ತಮ್ಮದೇ ಪಕ್ಷದ ಯೋಗಿ ವಿರುದ್ಧ ಉಮಾ ಭಾರತಿ ಆಕ್ರೋಶ
ಲಕ್ನೋ, ಅಕ್ಟೋಬರ್ 2: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ), ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಮತ್ತು ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ಮಹಿಳೆಯ ಆತ್ಮಗೌರವಕ್ಕೆ ಧಕ್ಕೆ ತರುವ ಬಗ್ಗೆ ಆಲೋಚನೆ ಮಾಡುವವರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ ಗಂಟೆಯಲ್ಲಿಯೇ ಈ ಆದೇಶ ಹೊರಡಿಸಲಾಗಿದೆ.
ಹತ್ರಾಸ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಡಿಎಂ ಪ್ರವೀಣ್ ಲಕ್ಸಕರ್, 'ಇಂದು ಅರ್ಧದಷ್ಟು ಮಾಧ್ಯಮದ ಜನರು ಇಲ್ಲಿಂದ ಹೋಗಿದ್ದಾರೆ. ಇನ್ನು ಉಳಿದ ಅರ್ಧದಷ್ಟು ಮಂದಿ ನಾಳೆ ಹೋಗುತ್ತಾರೆ. ನಾವು ಮಾತ್ರವೇ ನಿನ್ನ ಜತೆ ಕುಳಿತುಕೊಳ್ಳುವುದು. ನೀನು ನಿನ್ನ ಹೇಳಿಕೆಯನ್ನು ಬದಲಿಸಿಕೊಳ್ಳುತ್ತೀಯೋ ಇಲ್ಲವೋ' ಎಂದು ಸಂತ್ರಸ್ತೆಯ ತಂದೆಗೆ ಬೆದರಿಕೆ ಹಾಕಿದ್ದರು. ಹೀಗಾಗಿ ಡಿಎಂ ಅವರನ್ನೂ ಅಮಾನತುಗೊಳಿಸಬೇಕು ಎಂಬ ಆಗ್ರಹ ಹೆಚ್ಚಾಗಿದೆ.
ಬಿಜೆಪಿ ನಾಯಕಿ ಉಮಾ ಭಾರತಿ ತಮ್ಮದೇ ಪಕ್ಷದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರ ಕ್ರಮವನ್ನು ಪ್ರಶ್ನಿಸಿರುವ ಉಮಾ ಭಾರತಿ, ಇದು ಉತ್ತರ ಪ್ರದೇಶ ಸರ್ಕಾರ ಹಾಗೂ ಪಕ್ಷದ ವರ್ಚಸ್ಸಿಗೆ ಮಸಿ ಬಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ಪೊಲೀಸರ ನಡೆಯು ಅನುಮಾನಾಸ್ಪದವಾಗಿದೆ. ಆಕೆ ದಲಿತ ಕುಟುಂಬದ ಮಗಳು. ಪೊಲೀಸರು ತರಾತುರಿಯಿಂದ ಅಂತ್ಯಸಂಸ್ಕಾರ ನಡೆಸಿದ್ದಾರೆ. ಈಗ ಇಡೀ ಕುಟುಂಬವನ್ನು ವಶದಲ್ಲಿರಿಸಿಕೊಂಡಿದೆ. ನಾವು ರಾಮ ಮಂದಿರದ ಬುನಾದಿಗೆ ಕಲ್ಲು ಹಾಕಿದ್ದೆವಷ್ಟೇ. ದೇಶದಲ್ಲಿ ರಾಮರಾಜ್ಯವನ್ನು ತರುವುದಾಗಿ ಹೇಳಿಕೊಂಡಿದ್ದೇವೆ. ಆದರೆ ಈ ಪ್ರಕರಣದಲ್ಲಿನ ಪೊಲೀಸರ ಅನುಮಾನಾಸ್ಪದ ನಡೆಗಳಿಂದ ನಿಮ್ಮ ಉತ್ತರ ಪ್ರದೇಶ ಸರ್ಕಾರ ಹಾಗೂ ಬಿಜೆಪಿ ವರ್ಚಸ್ಸಿಗೆ ಹಾನಿಯಾಗಿದೆ ಎಂದು ಉಮಾ ಭಾರತಿ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications