ವೈರಲ್ ವಿಡಿಯೋ: ಬಿಜೆಪಿ ಸಂಸದೆ ಹೇಮಾಮಾಲಿನಿ ನೃತ್ಯ
ಮಥುರಾ, ಆಗಸ್ಟ್ 03: ಬಿಜೆಪಿ ಸಂಸದೆ, ಖ್ಯಾತ ನಟಿ ಹೇಮಾಮಾಲಿನಿ ಅವರಿಗೆ ಈಗ 70 ವರ್ಷ ವಯಸ್ಸು ಆದರೆ ಈಗಲೂ ಅವರು ಯುವಕರನ್ನೂ ನಾಚಿಸುವಂತೆ ನರ್ತಿಸುತ್ತಾರೆ.
#WATCH Mathura: BJP MP Hema Malini performs at Sri Radha Raman Temple in Vrindavan during 'jhulan utsav' on the eve of Hariyali Teej. (02.08.19) pic.twitter.com/2Ck7F4Q6sh
— ANI UP (@ANINewsUP) August 3, 2019
ಹೇಮಾಮಾಲಿನಿ ಅವರು ತಮ್ಮ ರಾಜಕೀಯದಿಂದ ಬಿಡುವು ಮಾಡಿಕೊಂಡು ನಿನ್ನೆ ಸಂಜೆ ದೇವಸ್ಥಾನದ ಕಾರ್ಯಕ್ರಮವೊಂದರಲ್ಲಿ ನೃತ್ಯ ಪ್ರದರ್ಶನ ನೀಡಿದ್ದಾರೆ. ಹೇಮಾಮಾಲಿನಿ ಅವರ ಭರತನಾಟ್ಯಕ್ಕೆ ಕಲಾರಸಿಕರು ಮನಸೋತಿದ್ದಾರೆ.
ಮಥುರಾದ ಶ್ರೀ ರಾಧಾರಮಣ ದೇವಸ್ಥಾನದಲ್ಲಿ ಆಯೋಜಿಸಿದ್ದ 'ಜುಲ್ಹಾನ ಉತ್ಸವ' ಕಾರ್ಯಕ್ರಮದಲ್ಲಿ ಸಂಸದೆ ಹೇಮಾಮಾಲಿನಿ ಅವರು ನೃತ್ಯ ರೂಪಕ ಪ್ರದರ್ಶಿಸಿದರು.

ಹೇಮಾಮಾಲಿನಿ ಅವರ ನೃತ್ಯದ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರಿಂದ ಪ್ರಶಂಸೆಗೆ ಪಾತ್ರವಾಗಿದೆ. ನೃತ್ಯ ಮಾಡಿದ ಹೇಮಾಮಾಲಿನಿ ಅವರಿಗೆ ದೇವಸ್ಥಾನದ ಕಡೆಯಿಂದ ಒಂದು ಕೊಳಲು ಮತ್ತು ಸೀರೆಯನ್ನು ನೀಡಿ ಗೌರವಿಸಿದ್ದಾರೆ.
ಕಾರ್ಯಕ್ರಮದ ನಂತರ ಮಾತನಾಡಿದ ಹೇಮಾಮಾಲಿನಿ ಅವರು, 'ಶ್ರೀಕೃಷ್ಣನ ಮುಂದೆ ನೃತ್ಯ ಮಾಡಲು ಅವಕಾಶ ದೊರೆತದ್ದು ಬಹಳ ಹೆಮ್ಮೆ ಎನಿಸಿದೆ. ನನ್ನ ಇಂದಿನ ಪ್ರದರ್ಶನದಲ್ಲಿ ಕೃಷ್ಣನನ್ನು ಭೇಟಿಯಾಗುವ ರಾಧೆಯ ಭಾವಗಳನ್ನು ಪ್ರಕಟಿಸಿದೆ, ಎರಡನೇಯ ಭಾಗದಲ್ಲಿ ಮೀರಾಳ ಭಾವಗಳನ್ನು ಪ್ರಕಟಿಸಿದೆ' ಎಂದು ಹೇಳಿದ್ದಾರೆ.
ಹೇಮಾಮಾಲಿನಿ ಅವರು ಬಿಜೆಪಿ ಸಂಸದೆ ಸಹ ಆಗಿದ್ದು, ಈ ಬಾರಿ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು ಆದರೆ ಅದು ವಿಫಲವಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications