ತಾಜ್ ಮಹಲ್ ನಿಂದ ಪ್ರೀತಿ, ಮಮತೆ ಬಗ್ಗೆ ಮೋದಿ ಕಲಿಯಲಿ, ಅಖಿಲೇಶ್ ಟಾಂಗ್
ಆಗ್ರಾ (ಉತ್ತರಪ್ರದೇಶ), ಜನವರಿ 9: ಉತ್ತರಪ್ರದೇಶದ ಆಗ್ರಾಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಕೆಲ ಗಂಟೆಗಳ ಮುಂಚೆ, "ತಾಜ್ ಮಹಲ್ ನಿಂದ ಪ್ರೀತಿ ಹಾಗೂ ಮಮತೆ ಬಗ್ಗೆ ಸ್ವಲ್ಪವಾದರೂ ಪ್ರಧಾನಿ ನರೇಂದ್ರ ಮೋದಿ ಕಲಿಯಬಹುದು" ಎಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥರೂ ಆಗಿರುವ ಅವರು, ಆಗ್ರಾದ ಬಳಿ ಪ್ರಧಾನಿಗಳು ಆಲೂಗಡ್ಡೆ, ಕಬ್ಬು ಹಾಗೂ ಭತ್ತದ ಬೆಳೆಗಾರರ ಸಂಕಷ್ಟವನ್ನು ನೆನಪಿಸಿಕೊಳ್ಳಲಿ. ಈ ಹಿಂದೆಂದೂ ಉತ್ತರಪ್ರದೇಶಕ್ಕೆ ದೆಹಲಿ ಇಷ್ಟು ದೂರ ಇರಲಿಲ್ಲ. ಅದೆಷ್ಟು ದೂರ ಆಗಿದೆಯೆಂದರೆ, ರಾಜ್ಯದ ರೈತರ ಹಾಗೂ ವ್ಯಾಪಾರದವರ ದುಃಖ ಕೂಡ ಆಡಳಿತಗಾರರಿಗೆ ಕಾಣುತ್ತಿಲ್ಲ ಎಂದಿದ್ದಾರೆ.
ಯುವ ಜನತೆಗೆ ಕೋಟ್ಯಂತರ ಮಂದಿಗೆ ಉದ್ಯೋಗ ನೀಡುವುದಾಗಿ ಬಿಜೆಪಿ ನೇತೃತ್ವದ ಸರಕಾರ ಭರವಸೆ ನೀಡಿತ್ತು. ಆದರೆ ಈಚಿನ ಘಟನೆ ಆ ಭರವಸೆಯನ್ನು ಸುಳ್ಳು ಎಂದು ಸಾಬೀತು ಮಾಡಿ. ರೈಲ್ವೆ ಇಲಾಖೆಯ ಅರವತ್ಮೂರು ಸಾವಿರ ಹುದ್ದೆಗಳಿಗೆ ಎರಡು ಕೋಟಿ ಮಂದಿ ಅರ್ಜಿ ಹಾಕಿದ್ದರು. ಅದೇ ಯುವ ಜನತೆ, ಯಾರಿಗೆ ಉದ್ಯೋಗದ ಭರವಸೆ ನೀಡಿದ್ದರೋ ಅವರೇ ಈ ಸರಕಾರವನ್ನು ಕಿತ್ತೊಗೆಯುತ್ತಾರೆ ಎಂದು ಅಖಿಲೇಶ್ ಹೇಳಿದ್ದಾರೆ.

ಘಟಬಂಧನ್ ನಲ್ಲಿ ನಾವು (ಬಿಎಸ್ ಪಿ-ಎಸ್ ಪಿ) ಎಷ್ಟು ಸೀಟುಗಳನ್ನು ಹಂಚಿಕೊಳ್ಳುತ್ತಿದ್ದೇವೆ ಎನ್ನುವುದನ್ನು ಸಿಬಿಐಗೆ ಹೇಳಬೇಕಿದೆ ಎಂದು ತಮ್ಮ ಮೇಲಿನ ಸಿಬಿಐ ಪ್ರಕರಣದ ವಿಚಾರವಾಗಿ ಅಖಿಲೇಶ್ ವಿಚಾರವಾಗಿ ಹೇಳಿದ್ದಾರೆ. ಕಳೆದ ವಾರ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಕರೆ ಮಾಡಿ, ಇಂಥ ಗಿಮಿಕ್ ಗಳಿಗೆ ಹೆದರಬೇಡಿ ಎಂದು ಅಖಿಲೇಶ್ ಗೆ ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications