ಬಿಹಾರದ ನಂತರ ಇದೀಗ ಉತ್ತರ ಪ್ರದೇಶದ ಗಂಗಾ ತೀರದಲ್ಲಿ ತೇಲುತ್ತಿವೆ ಹೆಣಗಳ ರಾಶಿ
ನವದೆಹಲಿ, ಮೇ 11: ಬಿಹಾರದ ಬಳಿಕ ಇದೀಗ ಉತ್ತರ ಪ್ರದೇಶದ ಗಂಗಾ ತಟದಲ್ಲಿ ಹೆಣಗಳ ರಾಶಿ ತೇಲುತ್ತಿವೆ. ಸೋಮವಾರವಷ್ಟೇ ಬಿಹಾರದ ಬಕ್ಸಾರ್ನಲ್ಲಿ ಗಂಗಾ ನದಿ ತೀರದಲ್ಲಿ ಸುಮಾರು 150ಕ್ಕೂ ಹೆಚ್ಚು ಶವಗಳು ತೇಲುತ್ತಿರುವ ಸುದ್ದಿ ವರದಿಯಾಗಿತ್ತು. ಇದೀಗ ಉತ್ತರ ಪ್ರದೇಶದ ಗಂಗಾ ನದಿ ತೀರದಲ್ಲಿ ಕೂಡ ಶವಗಳು ತೇಲುತ್ತಿವೆ.
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮಂಗಳವಾರ ಈ ಘಟನೆಯನ್ನು ದುರದೃಷ್ಟಕರ ಎಂದು ಹೇಳಿದ್ದರು. ಬಿಹಾರದ ಬಕ್ಸಾರ್ ಪ್ರದೇಶದಲ್ಲಿ ಗಂಗಾದಲ್ಲಿ ತೇಲುತ್ತಿರುವ ಶವಗಳ ಘಟನೆ ದುರದೃಷ್ಟಕರ.
ಇದು ಖಂಡಿತವಾಗಿಯೂ ತನಿಖೆಯ ವಿಷಯವಾಗಿದೆ. ಮೋದಿ ಸರ್ಕಾರ ಸ್ವಚ್ಛ 'ತಾಯಿ' ಗಂಗಾಗೆ ಬದ್ಧವಾಗಿದೆ. ಈ ಘಟನೆ ಅನಿರೀಕ್ಷಿತವಾಗಿದೆ. ಸಂಬಂಧಪಟ್ಟ ರಾಜ್ಯಗಳು ತಕ್ಷಣದ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಶೇಖಾವತ್ ಟ್ವೀಟ್ ಮಾಡಿದ್ದರು.

ಮೃತದೇಹಗಳು ಎಲ್ಲಿಂದ ಬರುತ್ತಿವೆ ಎಂದು ತಿಳಿಯುವ ಸಲುವಾಗಿ ನಮ್ಮ ಅಧಿಕಾರಿಗಳು ಸ್ಥಳದಲ್ಲಿ ಟಿಕಾಣಿ ಹೂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿವೆ ಎಂದು ಘಾಜಿಪುರದ ಜಿಲ್ಲಾಧಿಕಾರಿ ಸಂಸದ ಸಿಂಗ್ ಎಎನ್ಐಗೆ ತಿಳಿಸಿದ್ದಾರೆ.
ಗಂಗೆಯಲ್ಲಿ ತೇಲುತ್ತಿರುವ ಮಾನವ ಶರೀರಗಳನ್ನು ನೋಡಿ ಆತಂಕಕ್ಕೀಡಾಗಿದ್ದೇವೆ. ತಮಗೆ ಎಲ್ಲಿ ರೋಗ ಹರಡುತ್ತದೆ ಎಂಬ ಭಯ ಕಾಡುತ್ತಿದೆ. ಇದು ಕೋವಿಡ್ ಸಾಂಕ್ರಾಮಿಕ ರೋಗದ ಸಂಕಷ್ಟದ ಸಮಯದಲ್ಲಿ ಗಂಗೆಯಲ್ಲಿ ಮೃತದೇಹಗಳು ತೇಲುತ್ತಿವೆ.
ಅಲ್ಲದೆ ಉಬ್ಬಿದ, ಕೊಳೆತ ಶವಗಳಿಂದ ದುರ್ವಾಸನೆ ಬರುತ್ತಿದೆ ಎಂದು ಸ್ಥಳೀಯರು ದೂರಿದ್ದು ಅಧಿಕಾರಿಗಳ ಅಸಮರ್ಥತೆಗೆ ಆರೋಪಿಸಿದ್ದಾರೆ. ನಾವು ಈ ಬಗ್ಗೆ ಆಡಳಿತಕ್ಕೆ ಮಾಹಿತಿ ನೀಡಿದ್ದೇವೆ, ಆದರೆ ಅವರಿಂದ ಯಾವುದೇ ಕ್ರಮ ಕೈಗೊಂಡಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ನಾವು ಕೊರೊನಾವೈರಸ್ ಸೋಂಕಿಗೆ ಒಳಗಾಗುವ ಭೀತಿ ಇದೆ ಎಂದು ನಿವಾಸಿ ಅಖಂಡ್ ಎಎನ್ಐಗೆ ತಿಳಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications