ಕೊರೊನಾ 2ನೇ ಅಲೆಯಲ್ಲಿ ಆಕ್ಸಿಜನ್ ಸಿಗದೆ ನೂರಾರು ಮಂದಿ ಸಾವು: ಒಪ್ಪಿಕೊಂಡ ಬಿಜೆಪಿ ಶಾಸಕ
ಲಕ್ನೋ, ಜುಲೈ 28: ಕೊರೊನಾ ಎರಡನೇ ಅಲೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ನೂರಾರು ಮಂದಿ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ.
ಹಲವು ದಿನಗಳಿಂದ ಪ್ರತಿಪಕ್ಷಗಳು ಸೇರಿದಂತೆ ಹಲವು ಮಂದಿ ಇದೇ ಆರೋಪ ಮಾಡಿದ್ದರು. ಆದರೆ ಬಿಜೆಪಿ ಅದನ್ನು ತಳ್ಳಿ ಹಾಕಿತ್ತು. ಇದೀಗ ಬಿಜೆಪಿ ಶಾಸಕರೊಬ್ಬರು ಇದೇ ಹೇಳಿಕೆ ನೀಡಿದ್ದು, ಬಿಜೆಪಿಯೇ ಒಪ್ಪಿಕೊಂಡಂತಾಗಿದೆ.
ಬಿಜೆಪಿಯ ಗೋಪಾಮೌ ಶಾಸಕ ಶ್ಯಾಮ್ ಪ್ರಕಾಶ್ ಅವರು ಪತ್ರಕರ್ತ ಆನಂದ್ ಮಿಶ್ರಾ ಅವರ ಫೇಸ್ಬುಕ್ ವಾಲ್ ನಲ್ಲಿ ಈ ರೀತಿಯಲ್ಲಿ ಬರೆದಿದ್ದಾರೆ.

ಈ ವಿಷಯ ಎತ್ತಿದ ಕೆಲ ಶಾಸಕರ ನ್ಯೂಸ್ ಪೇಪರ್ ಕಟ್ಟಿಂಗ್ ಅನ್ನು ಆನಂದ್ ಮಿಶ್ರಾ ಪೋಸ್ಟ್ ಮಾಡಿದ್ದರು. ನೀವು ಹೇಳುತ್ತಿರುವುದು ನಿಜ, ನಿಮ್ಮ ಅಭಿಪ್ರಾಯವನ್ನು ಒಪ್ಪುತ್ತೇನೆ.
ಆಕ್ಸಿಜನ್ ಕೊರತೆಯಿಂದ ನೂರಾರು ಜನರು ಸಾವನ್ನಪ್ಪಿದ್ದಾರೆ. ಶಾಸಕ ರಾಜ್ ಕುಮಾರ್ ಅಗರ್ ವಾಲ್ ಸೇರಿದಂತೆ ಯಾರೂ ಕೂಡಾ ಲಕ್ಷಾಂತರ ಕುಟುಂಬಗಳ ನೋವನ್ನು ನೋಡಲಿಲ್ಲ ಎಂದು ಶಾಸಕ ಬರೆದಿದ್ದರು.
ಅಗರ್ ಲಾಲ್ ಸಾಂಡಿಲಾದ ಬಿಜೆಪಿ ಶಾಸಕ, ಕೋವಿಡ್ ಎರಡನೇ ಅಲೆ ವೇಳೆಯಲ್ಲಿ ಇವರ ಪುತ್ರ ಸಾವನ್ನಪ್ಪಿದ್ದರು. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವುದಾಗಿ ಆರೋಪ ಮಾಡಲಾಗಿತ್ತು. ಆದಾಗ್ಯೂ, ಸೋಮವಾರ ಫೇಸ್ ಬುಕ್ನಲ್ಲಿ ಬರೆಯಲಾದ ವಿಷಯ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ಯಾಮ್ ಪ್ರಕಾಶ್, ಉತ್ತರ ಪ್ರದೇಶದ ಬಗ್ಗೆ ಬರೆದಿಲ್ಲ ಎಂದು ಹೇಳಿಕೆ ನೀಡಿದ್ದರು.
ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿರುವ ಬಗ್ಗೆ ಯಾವುದೇ ವರದಿಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿಲ್ಲ ಎಂದು ಕಳೆದ ವಾರವಷ್ಟೇ ರಾಜ್ಯಸಭೆಯಲ್ಲಿ ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತೀ ಪ್ರವೀಣ್ ಪವಾರ್ ಲಿಖಿತ ಹೇಳಿಕೆ ನೀಡಿದ್ದರು. ಈ ಹಿಂದೆ ಕೂಡಾ ಎರಡನೇ ಅಲೆ ಅಸಮರ್ಪಕ ನಿರ್ವಹಣೆ ಕುರಿತಂತೆ ಬಿಜೆಪಿ ಮುಖಂಡರು ದೂರಿದ್ದರು.
ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿರುವ ಬಗ್ಗೆ ರಾಜ್ಯಗಳು ಯಾವುದೇ ವರದಿ ನೀಡಿಲ್ಲ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದ ಮಾರನೇ ದಿನವೇ ಅದೇ ಪಕ್ಷದ ಶಾಸಕ ಈ ರೀತಿಯ ಹೇಳಿಕೆ ನೀಡಿರುವುದು ಪಕ್ಷಕ್ಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications