ಪತ್ನಿ ಕೊಲ್ಲಲು ಹಾವಾಡಿಗರನ್ನು ನೇಮಿಸಿದ್ದ ಪತಿ!
ಲಕ್ನೋ, ಜನವರಿ 24 : ಪತ್ನಿಯನ್ನು ಕೊಲೆ ಮಾಡಲು ಇಬ್ಬರು ಹಾವಾಡಿಗರನ್ನು ನೇಮಿಸಿದ್ದ ಪತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ವಿಷಕಾರಿ ಹಾವುಗಳು ಕಚ್ಚಿದರೂ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಉತ್ತರ ಪ್ರದೇಶದ ಬದಾಯುವಿನಲ್ಲಿ ಈ ಘಟನೆ ನಡೆದಿದೆ. 25 ವರ್ಷದ ಮಹಿಳೆ ವರದಕ್ಷಿಣೆ ತರಲಿಲ್ಲವೆಂದು ಪತಿ ಆಕೆಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ. ಇದಕ್ಕಾಗಿ ಇಬ್ಬರು ಹಾವಾಡಿಗರನ್ನು ನೇಮಿಸಿಕೊಂಡಿದ್ದ.
ಮೂರು ವರ್ಷಗಳ ಹಿಂದೆ ಬದಾಯು ಗ್ರಾಮದ ಲಕ್ಷ್ಮೀಪುರ ಗ್ರಾಮದ ನಿವಾಸಿ ಶರೀಫ್ ವಿವಾಹವಾಗಿದ್ದ. ವರದಕ್ಷಿಣೆಗಾಗಿ ಪತ್ನಿಗೆ ಕಾಟ ಕೊಡುತ್ತಿದ್ದ. ಪೋಷಕರ ಮನವೊಲಿಸಿ ಹಣ ತರಬೇಕು ಎಂದು ಪೀಡಿಸುತ್ತಿದ್ದ. ಪತ್ನಿ ನಿರಾಕರಿಸಿದಾಗ ಹತ್ಯೆಗೆ ಸಂಚು ರೂಪಿಸಿದ್ದ.

ಘಟನೆ ವಿವರ: ವೈದ್ಯರ ಬಳಿ ಹೋಗೋಣ ಎಂದು ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಶರೀಫ್ ಹೊರಟಿದ್ದ. ಆತನ ಸಂಚಿನಂತೆ ರಸ್ತೆಯಲ್ಲಿ ಡ್ರಾಪ್ ಕೇಳುವ ನೆಪದಲ್ಲಿ ಇಬ್ಬರು ಹಾವಾಡಿಗರು ಕಾರು ಹತ್ತಿದ್ದರು.
ಬುಟ್ಟಿಯಲ್ಲಿದ್ದ ಹಾವಿನಿಂದ ಶರೀಫ್ ಪತ್ನಿಗೆ ಕಚ್ಚಿಸಿದ್ದರು. ಶರೀಫ್ ತಕ್ಷಣ ಮನೆಗೆ ಆಗಮಿಸಿ ಪತ್ನಿಯನ್ನು ಕೂಡಿಹಾಕಿ ಪರಾರಿಯಾಗಿದ್ದ. ಸ್ಥಳೀಯರು ಪತ್ನಿಯ ಚೀರಾಟ ಗಮನಿಸಿ, ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದರು.
ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಕ್ಕಿದ್ದರಿಂದ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆದರೆ, ಶರೀಫ್ ಪರಾರಿಯಾಗಿದ್ದು, ಹುಡುಕಾಟವನ್ನು ಪೊಲೀಸರು ನಡೆಸುತ್ತಿದ್ದಾರೆ.
ಪತ್ನಿ ವರದಕ್ಷಿಣೆ ಕಿರುಕುಳ, ವಿಚ್ಚೇಧನ ನೀಡುತ್ತೇನೆ ಎಂದು ಶರೀಫ್ ಬೆದರಿಕೆ ಹಾಕಿದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪತ್ನಿಯನ್ನು ಕೊಲ್ಲಲು ಪತಿ ರೂಪಿಸಿದ ತಂತ್ರ ನೋಡಿ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications