ಬುಲಂದ್ ಶಹರ್ ಸ್ವಚ್ಛ ಭಾರತ್ ಯೋಜನೆ ಶೌಚಾಲಯದ ಟೈಲ್ಸ್ ನಲ್ಲಿ ಗಾಂಧಿ, ಅಶೋಕ ಚಕ್ರ
ಬುಲಂದ್ ಶಹರ್ (ಉತ್ತರಪ್ರದೇಶ), ಜೂನ್ 5: ಉತ್ತರಪ್ರದೇಶದ ಹಳ್ಳಿಯೊಂದರಲ್ಲಿ ಸ್ವಚ್ಛ ಭಾರತ್ ಯೋಜನೆ ಅಡಿ ನಿರ್ಮಿಸಿದ ಹಲವು ಶೌಚಾಲಯಗಳಲ್ಲಿ ಮಹಾತ್ಮ ಗಾಂಧಿ ಭಾವಚಿತ್ರ ಹಾಗೂ ರಾಷ್ಟ್ರೀಯ ಸಂಕೇತವನ್ನು ಟೈಲ್ಸ್ ಗಳ ಮೇಲೆ ಬಳಸಲಾಗಿದೆ. ಇದಕ್ಕೆ ಹಳ್ಳಿಗರು ವಿರೋಧ ವ್ಯಕ್ತಪಡಿಸಿದ್ದು, ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಸೋರಿಕೆಯಾಗಿದೆ.
ಹಳ್ಳಿಯ ಮುಖ್ಯಸ್ಥರ ಆದೇಶದ ಮೇಲೆ ಟೈಲ್ಸ್ ಕೂಡಿಸಲಾಗಿದೆ. ನಾವು ಅದನ್ನು ವಿರೋಧಿಸಿದರೆ, ಇದರಲ್ಲಿ ಮಧ್ಯಪ್ರವೇಶಿಸಬೇಡಿ. ಮೇಲಧಿಕಾರಿಗಳ ಆದೇಶ ಇದು ಎನ್ನಲಾಯಿತು ಹಳ್ಳಿಗರೊಬ್ಬರು ತಿಳಿಸಿದ್ದಾಗಿ ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಜಿಲ್ಲಾ ಆಡಳಿತದಿಂದ ಈ ಬಗ್ಗೆ ಪರಿಶೀಲನೆ ಮಾಡಿದಾಗ, ಬುಲಂದ್ ಶಹರ್ ನ ಇಚ್ಛಾವಾರಿ ಹಳ್ಳಿಯಲ್ಲಿ ಹದಿಮೂರು ಹಳ್ಳಿಗಳಲ್ಲಿ ಶೌಚಾಲಯದ ಗೋಡೆಗಳಲ್ಲಿ ರಾಷ್ಟ್ರೀಯ ಸಂಕೇತವನ್ನು ಬಳಸಿರುವುದು ಕಂಡುಬಂದಿದೆ.

ಹಳ್ಳಿಯಲ್ಲಿ ಸ್ವಚ್ಛ ಭಾರತ್ ಅಭಿಯಾನದ ಅಡಿಯಲ್ಲಿ ಐನೂರಾ ಎಂಟು ಶೌಚಾಲಯ ನಿರ್ಮಿಸಲಾಗಿದೆ. ಹದಿಮೂರು ಶೌಚಾಲಯದಲ್ಲಿ ಮಹಾತ್ಮ ಗಾಂಧಿ ಹಾಗೂ ಅಶೋಕ ಚಕ್ರ ಗುರುತಿದೆ. ಒಂದು ತಂಡ ರಚಿಸಿ, ಶೌಚಾಲಯಗಳನ್ನು ಪರಿಶೀಲಿಸಿ, ಆ ಟೈಲ್ಸ್ ಗಳನ್ನು ತೆಗೆದಿದ್ದೇವೆ ಎಂದು ಬುಲಂದ್ ಶಹರ್ ನ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ತನಿಖೆ ನಂತರ ಗ್ರಾಮಾಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್ ರನ್ನು ಅಮಾನತು ಮಾಡಲಾಗಿದೆ ಹಾಗೂ ಗ್ರಾಮ್ ಪ್ರಧಾನ್ ಸಾವಿತ್ರಿ ದೇವಿಗೆ ನೋಟಿಸ್ ನೀಡಲಾಗಿದೆ.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
‘ಲವ್ ಮಾಕ್ಟೇಲ್ 3’ ಕಥೆ ವಿವಾದ ಸುಖಾಂತ್ಯ: ಫಿಲ್ಮ್ ಚೇಂಬರ್ ಸಭೆಯಲ್ಲಿ ಡಾರ್ಲಿಂಗ್ ಕೃಷ್ಣ-ಗುರು ದೇಶಪಾಂಡೆ ಸಂಧಾನ ಯಶಸ್ವಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications