ಮಾಯಾವತಿ ಸೋದರನಿಗೆ ಸೇರಿದ 400 ಕೋಟಿ ಮೌಲ್ಯದ 'ಬೇನಾಮಿ' ಆಸ್ತಿ ಜಪ್ತಿ
ಲಖನೌ, ಜುಲೈ 18: ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರ ಸೋದರ ಮತ್ತು ಆತನ ಪತ್ನಿಗೆ ಸೇರಿದ 400 ಕೋಟಿ ಮೌಲ್ಯದ ನೋಯ್ಡಾದಲ್ಲಿನ 'ಬೇನಾಮಿ' ಜಾಗವನ್ನು ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ. ಏಳು ಎಕರೆ ಸ್ಥಳವನ್ನು ಮುಟ್ಟುಗೋಲು ಹಾಕಿಕೊಂಡ ಬಗ್ಗೆ ದೆಹಲಿ ಮೂಲದ ಬೇನಾಮಿ ನಿಷೇಧ ಘಟಕವು ಜುಲೈ 16ನೇ ತಾರೀಕು ಆದೇಶ ನೀಡಿದೆ.
ಈ ಸ್ಥಳವು ಮಾಯಾವತಿ ಅವರ ಸೋದರ ಆನಂದ್ ಕುಮಾರ್ ಮತ್ತು ಆತನ ಪತ್ನಿ ವಿಚಿತೆರ್ ಲತಾ ಹೆಸರಲ್ಲಿ ಇತ್ತು. ಈಚೆಗಷ್ಟೇ ಮಾಯಾವತಿ ಅವರು ಆನಂದ್ ಕುಮಾರ್ ರನ್ನು ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದರು.
ಬೇನಾಮಿ ಆಸ್ತಿ ವ್ಯವಹಾರ ನಿಷೇಧ ಕಾಯ್ದೆ 1988ರ ಅಡಿಯಲ್ಲಿ ಆದೇಶ ನೀಡಲಾಗಿದೆ. ಈಗ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಯನ್ನು ಆನಂದ್ ಕುಮಾರ್ ಮತ್ತು ಅವರ ಪತ್ನಿಗೆ ಸೇರಿದ 'ಬೇನಾಮಿ' ಆಸ್ತಿ ಎಂದು ಪರಿಗಣಿಸಲಾಗಿದೆ. ಈ ಆಸ್ತಿಯ ಪುಸ್ತಕದ ಮೌಲ್ಯ 400 ಕೋಟಿ ರುಪಾಯಿ ಎನ್ನಲಾಗಿದೆ.

ಬೇನಾಮಿ ಕಾಯ್ದೆ ಉಲ್ಲಂಘನೆ ಮಾಡುವವರಿಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ ಬೇನಾಮಿ ಆಸ್ತಿಯ ಮಾರುಕಟ್ಟೆ ಮೌಲ್ಯದ 25 ಪರ್ಸೆಂಟ್ ತನಕ ದಂಡ ಪಾವತಿಸ ಬೇಕಾಗುತ್ತದೆ. ಬೇನಾಮಿ ವ್ಯವಹಾರ (ನಿಷೇಧ) ತಿದ್ದುಪಡಿ ಕಾಯ್ದೆ 2016 ಅನ್ನು ನವೆಂಬರ್ 1, 2016ರಿಂದ ನರೇಂದ್ರ ಮೋದಿ ನೇತೃತ್ವದ ಸರಕಾರ ಜಾರಿಗೆ ತಂದಿದೆ.
ದೇಶದಲ್ಲಿ ಬೇನಾಮಿ ಕಾಯ್ದೆ ಜಾರಿಗೆ ತರುವ ನೋಡಲ್ ಇಲಾಖೆಯಾಗಿ ಆದಾಯ ತೆರಿಗೆ ಇಲಾಖೆ ಇದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications