ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 18ಸ್ಥಾನ : ಇಂಡಿಯಾ ಟುಡೇ ಸಮೀಕ್ಷೆ
Recommended Video

ಲಕ್ನೋ, ಜನವರಿ 24: ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳಲ್ಲಿ 18ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಇಂಡಿಯಾ ಟುಡೆ ಮೂಡ್ ಆಫ್ ದಿ ನೇಶನ್ ಸಮೀಕ್ಷೆ ಹೇಳಿದೆ.
2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಗೆಲುವಿಗೆ ಕಾರಣವಾಗಿದ್ದು ಉತ್ತರ ಪ್ರದೇಶದಲ್ಲಿ ನೀಡಿದ ಅಮೋಘ ಪ್ರದರ್ಶನ.
ಆದರೆ ಈ ಬಾರಿ ಬಹುಜನ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡಿದ್ದರಿಂದ ಬಿಜೆಪಿಗೆ ಭಾರೀ ಹೊಡೆತ ಬೀಳಲಿದೆ ಎಂದು ಸಮೀಕ್ಷೆ ಹೇಳಿದೆ. ಅಕಸ್ಮಾತ್ ಚುನಾವಣೆಗೂ ಮುನ್ನ ಈ ಮೈತ್ರಕೂಟದಲ್ಲಿ ಕಾಂಗ್ರೆಸ್ ಪಕ್ಷವು ಸೇರಿಕೊಂಡರಂತೂ ಬಿಜೆಪಿ ಹೀನಾಯ ಸೋಲು ಕಾಣುವುದು ಖಂಡಿತ ಎಂದು ಸಮೀಕ್ಷೆ ಹೇಳಿದೆ.

ಯಾರಿಗೆಷ್ಟು ಸೀಟು?
ಸಮೀಕ್ಷೆಯ ಪ್ರಕಾರ ಬಿಎಸ್ಪಿ-ಎಸ್ಪಿ ಮತ್ತು ಆರ್ ಎಲ್ ಡಿ ಮೈತ್ರಿಕೂಟವು 58 ಸ್ಥಾನಗಳಲ್ಲಿ ಜಯಗಳಿಸಲಿದ್ದು, ಬಿಜೆಪಿ ಕೇವಲ 18 ಸ್ಥಾನಗಳಲ್ಲಿ ಜಯಗಳಿಸಲಿದೆ. ಉಳಿದ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಉತ್ತರ ಪ್ರದೇಶದ ಒಟ್ಟು ಲೋಕಸಭಾ ಕ್ಷೇತ್ರಗಳ ಸಂಖ್ಯೆ 80.

ಉಲ್ಟಾ ಹೊಡೆಯಲಿದೆ ಬಿಜೆಪಿ ಲೆಕ್ಕಾಚಾರ
ಉತ್ತರ ಪ್ರದೇಶದಲ್ಲಿ 2014 ರ ಲೋಕಸಭಾ ಚುನಾವಣೆಯಲ್ಲಿ 71 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಅದೇ ಗೆಲುವಿನ ಕನಸು ಕಾಣುವಂತಿಲ್ಲ ಎಂದು ಸಮೀಕ್ಷೆ ಎಚ್ಚರಿಸಿದೆ. ಎಸ್ಪಿ-ಬಿಎಸ್ಪಿ ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಾಗುವುದಾದರೂ 73 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿಗೆ ಕಾಂಗ್ರೆಸ್ ಗಿಂತ ಹೆಚ್ಚೇ ನಷ್ಟವಾಗುವುದು ಖಂಡಿತ.

ಕಾಂಗ್ರೆಸ್ಸಿಗೆಷ್ಟು?
2014 ರಲ್ಲಿ ಕೇವಲ ಎರಡು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ಮತ್ತೆರಡು ಸ್ಥಾನಗಳಲ್ಲಿ ಅದು ಗೆಲ್ಲಲಿದೆ. ಅಕಸ್ಮಾತ್ ಎಸ್ಪಿ-ಬಿಎಸ್ಪಿ ಜೊತೆ ಕಾಂಗ್ರೆಸ್ಸೂ ಸೇರಿಕೊಂಡರೆ ಬಿಜೆಪಿ ಕೇವಲ 5 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಸಮೀಕ್ಷೆ ನಡೆದಿದ್ದು ಹೇಗೆ?
ಇಂದೇ ಲೋಕಸಭಾ ಚುನಾವಣೆ ನಡೆದರೆ ಗೆಲ್ಲುವುದ ಯಾರು ಎಂದು ಇಂಡಿಯಾ ಟುಡೆ-ಕಾರ್ವಿ ಸಂಸ್ಥೆಯು ಸುಮಾರು 2400 ಜನರನ್ನು ಸಂದರ್ಶಿಸಿ ಸಮೀಕ್ಷೆ ನಡೆಸಿತ್ತು. ಇದೀಗ ಅದರ ವರದಿ ಹೊರಬಿದ್ದಿದ್ದು, ದೇಶದ ಬಹುದೊಡ್ಡ ರಾಜ್ಯದಲ್ಲಿ ಬಿಜೆಪಿ ಮುಖಭಂಗ ಅನುಭವಿಸುವುದು ಖಚಿತ ಎಂದು ಅದು ಹೇಳಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications